‘ನಾನೊಬ್ಬ ಜನಪ್ರತಿನಿಧಿಯಾಗಿ, ಶಾಸಕನಾಗಿ ನನ್ನ ಕ್ಷೇತ್ರದ ಸಮಸ್ಯೆಗಳಿಗೆ ಸ್ಪಂದಿಸುವುದು ನನ್ನ ಆದ್ಯ ಕರ್ತವ್ಯ. ಬೇರೆಯವರಿಂದ ಕೇಳಿ ತಿಳಿದುಕೊಳ್ಳುವ ಅಗತ್ಯವಿಲ್ಲ. ತಲೆ ಹಿಡಿಯುವ ರಾಜಕಾರಣ ಮಾಡುವುದಿಲ್ಲ. ತಂದೆಯವರಾದ ಯಡಿಯೂರಪ್ಪ ಅವರ ರಾಜಕೀಯ ಜೀವನವನ್ನು ನೋಡಿದ್ದೀರಿ. ರಾಜ್ಯಾಧ್ಯಕ್ಷನಾಗಿ ಪಕ್ಷವನ್ನು ಮುನ್ನಡೆಸುವುದರ ಕುರಿತು, ನನಗೆ ಸ್ಪಷ್ಟತೆ ಇದೆ. ಕ್ಷೇತ್ರದ ಜನರ ಸಮಸ್ಯೆಗೆ ಸ್ಪಂದಿಸುವುದು ನನ್ನ ಕರ್ತವ್ಯ. ಆ ದಿಸೆಯಲ್ಲಿ ಸಚಿವರನ್ನು ಭೇಟಿ ಮಾಡಿದ್ದೇನೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.