<p><strong>ನವದೆಹಲಿ</strong>: ತುಮಕೂರು ಜಿಲ್ಲೆಯ ಐದು ಮೇಲ್ಸೇತುವೆಗಳಿಗೆ (ಆರ್ಒಬಿ) ಅನುಮೋದನೆ ನೀಡಿ ಕೇಂದ್ರ ರೈಲ್ವೆ ಸಚಿವಾಲಯ ಸೋಮವಾರ ಆದೇಶ ಹೊರಡಿಸಿದೆ. </p>.<p>₹350 ಕೋಟಿಗಳ ಅಂದಾಜು ವೆಚ್ಚದಲ್ಲಿ ಐದು ಮೇಲ್ಸೇತುವೆಗಳ ಕಾಮಗಾರಿಗಳನ್ನು ರೈಲ್ವೆ ಸಚಿವಾಲಯ ಕೈಗೆತ್ತಿಕೊಳ್ಳಲಿದ್ದು, ಸಂಪೂರ್ಣ ವೆಚ್ಚವನ್ನು ರೈಲ್ವೆ ಸಚಿವಾಲಯ ಭರಿಸಲಿದೆ. ಇದರಲ್ಲಿ ರಾಜ್ಯ ಸರ್ಕಾರದ ಪಾಲು ಇರುವುದಿಲ್ಲ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. </p>.<p>ಈ ಮೇಲ್ಸೇತುವೆಗಳ ನಿರ್ಮಾಣದಿಂದ ರಸ್ತೆ ಹಾಗೂ ರೈಲು ಸಾರಿಗೆ ಇನ್ನಷ್ಟು ಸುಗಮವಾಗಲಿದೆ ಹಾಗೂ ಸುರಕ್ಷಿತವಾಗಲಿದೆ. ಈ ಕಾಮಗಾರಿಗಳಿಗೆ ಸಂಬಂಧಿಸಿದ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಅತಿ ಶೀಘ್ರದಲ್ಲಿ ಕಾಮಗಾರಿಗೆ ಚಾಲನೆ ನೀಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ. </p>.<p>ರಾಜ್ಯದಲ್ಲಿ ₹1,699 ಕೋಟಿ ವೆಚ್ಚದಲ್ಲಿ ನಿರ್ಮಿಸಲಿರುವ 93 ಆರ್ಒಬಿ ಹಾಗೂ ಆರ್ಯುಬಿಗಳಿಗೆ ರೈಲ್ವೆ ಸಚಿವಾಲಯ ಈಗಾಗಲೇ ಅನುಮೋದನೆ ನೀಡಿದೆ. ಅವುಗಳಲ್ಲಿ 49 ಯೋಜನೆಗಳಿಗೆ ರಾಜ್ಯ ಸರ್ಕಾರ ಶೇ 50 ಅನುದಾನ ನೀಡಬೇಕಿದೆ. ಇದರಲ್ಲಿ ರೈಲ್ವೆ ಪಾಲು ₹850 ಕೋಟಿ ಆಗಿದೆ.</p>.<p>ಈ ಯೋಜನೆಗಳನ್ನು ಶೀಘ್ರದಲ್ಲಿ ಅನುಷ್ಠಾನಗೊಳಿಸಲು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಜತೆಗೆ ಈಚೆಗೆ ಸಭೆ ನಡೆಸಲಾಗಿದೆ. ಕೇಂದ್ರದ ಪಾಲಿನ ಮೊತ್ತವನ್ನು ತ್ವರಿತಗತಿಯಲ್ಲಿ ಬಿಡುಗಡೆ ಮಾಡಲಾಗುತ್ತದೆ. ಈ ಸಂಬಂಧ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಅವರೊಂದಿಗೆ ಸಮಾಲೋಚನೆ ನಡೆಸಲಾಗಿದೆ ಎಂದೂ ಅವರು ಹೇಳಿದ್ದಾರೆ. </p>.<p>ಮೇಲ್ಸೇತುವೆ; ಯೋಜನಾ ಮೊತ್ತ (₹ಕೋಟಿಗಳಲ್ಲಿ)</p>.<p>ಕ್ಯಾತಸಂದ್ರ ಸ್ಟೇಷನ್–ಮೈದಾಳ ಗೇಟ್ ನಡುವೆ;57.3</p>.<p>ಬಡ್ಡಿಹಳ್ಳಿ ಗೇಟ್ ಅಗ್ನಿಶಾಮಕ ದಳದ ಬಳಿ;89.03</p>.<p>ಬಡ್ಡವಾಡಿ ಗೇಟ್;97.69</p>.<p>ಹಿರಿಯೂರು ಗೇಟ್;55.99</p>.<p>ತುಮಕೂರು–ಮೈಸೂರು ಗೇಟ್;50.57</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ತುಮಕೂರು ಜಿಲ್ಲೆಯ ಐದು ಮೇಲ್ಸೇತುವೆಗಳಿಗೆ (ಆರ್ಒಬಿ) ಅನುಮೋದನೆ ನೀಡಿ ಕೇಂದ್ರ ರೈಲ್ವೆ ಸಚಿವಾಲಯ ಸೋಮವಾರ ಆದೇಶ ಹೊರಡಿಸಿದೆ. </p>.<p>₹350 ಕೋಟಿಗಳ ಅಂದಾಜು ವೆಚ್ಚದಲ್ಲಿ ಐದು ಮೇಲ್ಸೇತುವೆಗಳ ಕಾಮಗಾರಿಗಳನ್ನು ರೈಲ್ವೆ ಸಚಿವಾಲಯ ಕೈಗೆತ್ತಿಕೊಳ್ಳಲಿದ್ದು, ಸಂಪೂರ್ಣ ವೆಚ್ಚವನ್ನು ರೈಲ್ವೆ ಸಚಿವಾಲಯ ಭರಿಸಲಿದೆ. ಇದರಲ್ಲಿ ರಾಜ್ಯ ಸರ್ಕಾರದ ಪಾಲು ಇರುವುದಿಲ್ಲ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. </p>.<p>ಈ ಮೇಲ್ಸೇತುವೆಗಳ ನಿರ್ಮಾಣದಿಂದ ರಸ್ತೆ ಹಾಗೂ ರೈಲು ಸಾರಿಗೆ ಇನ್ನಷ್ಟು ಸುಗಮವಾಗಲಿದೆ ಹಾಗೂ ಸುರಕ್ಷಿತವಾಗಲಿದೆ. ಈ ಕಾಮಗಾರಿಗಳಿಗೆ ಸಂಬಂಧಿಸಿದ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಅತಿ ಶೀಘ್ರದಲ್ಲಿ ಕಾಮಗಾರಿಗೆ ಚಾಲನೆ ನೀಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ. </p>.<p>ರಾಜ್ಯದಲ್ಲಿ ₹1,699 ಕೋಟಿ ವೆಚ್ಚದಲ್ಲಿ ನಿರ್ಮಿಸಲಿರುವ 93 ಆರ್ಒಬಿ ಹಾಗೂ ಆರ್ಯುಬಿಗಳಿಗೆ ರೈಲ್ವೆ ಸಚಿವಾಲಯ ಈಗಾಗಲೇ ಅನುಮೋದನೆ ನೀಡಿದೆ. ಅವುಗಳಲ್ಲಿ 49 ಯೋಜನೆಗಳಿಗೆ ರಾಜ್ಯ ಸರ್ಕಾರ ಶೇ 50 ಅನುದಾನ ನೀಡಬೇಕಿದೆ. ಇದರಲ್ಲಿ ರೈಲ್ವೆ ಪಾಲು ₹850 ಕೋಟಿ ಆಗಿದೆ.</p>.<p>ಈ ಯೋಜನೆಗಳನ್ನು ಶೀಘ್ರದಲ್ಲಿ ಅನುಷ್ಠಾನಗೊಳಿಸಲು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಜತೆಗೆ ಈಚೆಗೆ ಸಭೆ ನಡೆಸಲಾಗಿದೆ. ಕೇಂದ್ರದ ಪಾಲಿನ ಮೊತ್ತವನ್ನು ತ್ವರಿತಗತಿಯಲ್ಲಿ ಬಿಡುಗಡೆ ಮಾಡಲಾಗುತ್ತದೆ. ಈ ಸಂಬಂಧ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಅವರೊಂದಿಗೆ ಸಮಾಲೋಚನೆ ನಡೆಸಲಾಗಿದೆ ಎಂದೂ ಅವರು ಹೇಳಿದ್ದಾರೆ. </p>.<p>ಮೇಲ್ಸೇತುವೆ; ಯೋಜನಾ ಮೊತ್ತ (₹ಕೋಟಿಗಳಲ್ಲಿ)</p>.<p>ಕ್ಯಾತಸಂದ್ರ ಸ್ಟೇಷನ್–ಮೈದಾಳ ಗೇಟ್ ನಡುವೆ;57.3</p>.<p>ಬಡ್ಡಿಹಳ್ಳಿ ಗೇಟ್ ಅಗ್ನಿಶಾಮಕ ದಳದ ಬಳಿ;89.03</p>.<p>ಬಡ್ಡವಾಡಿ ಗೇಟ್;97.69</p>.<p>ಹಿರಿಯೂರು ಗೇಟ್;55.99</p>.<p>ತುಮಕೂರು–ಮೈಸೂರು ಗೇಟ್;50.57</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>