ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಇಂದು ನಗರಕ್ಕೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ

Published 13 ಜೂನ್ 2024, 22:30 IST
Last Updated 13 ಜೂನ್ 2024, 22:30 IST
ಅಕ್ಷರ ಗಾತ್ರ

ಬೆಂಗಳೂರು: ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಎಚ್.ಡಿ. ಕುಮಾರಸ್ವಾಮಿ ಮೊದಲ ಬಾರಿ ಇಲ್ಲಿಗೆ (ಜೂನ್‌ 14) ಬರಲಿದ್ದಾರೆ.

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆಳಿಗ್ಗೆ 11.50ಕ್ಕೆ ಬರಲಿದ್ದಾರೆ. ಕೇಂದ್ರದ ಬೃಹತ್‌ ಕೈಗಾರಿಕಾ ಸಚಿವರಾಗಿ ಬರುತ್ತಿರುವ ಅವರನ್ನು ಅದ್ದೂರಿಯಾಗಿ ಸ್ವಾಗತಿಸಲು ಜೆಡಿಎಸ್‌ ಮುಖಂಡರು, ಕಾರ್ಯಕರ್ತರು ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ಜೆಡಿಎಸ್‌ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.  

ವಿಮಾನ ನಿಲ್ದಾಣದಿಂದ ಪಕ್ಷದ ಕಚೇರಿಗೆ ಬರಲಿರುವ ಅವರು ಅಲ್ಲಿ ಸನ್ಮಾನ ಸ್ವೀಕರಿಸಿದ ನಂತರ ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿ ಮಾಡುವರು. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ. ದೇವೇಗೌಡ ಅವರ ಮನೆಗೆ ತೆರಳಿ, ತಂದೆ–ತಾಯಿಯ ಆಶೀರ್ವಾದ ಪಡೆಯುವರು. ನಂತರ ತಿರುಪತಿಯತ್ತ ಪಯಣ ಬೆಳೆಸುವರು ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT