ಬೆಂಗಳೂರು ಗ್ರಾಮಾಂತರ ಸಂಸದ ಡಾ.ಸಿ.ಎನ್. ಮಂಜುನಾಥ್ ಅವರ ಪತ್ನಿ, ತಮ್ಮ ಸಹೋದರಿ ಅನಸೂಯಾ ಅವರನ್ನು ಕಣಕ್ಕಿಳಿಸುವ ಬಗ್ಗೆ ಬಂದಿರುವ ವರದಿಗಳ ಬಗ್ಗೆ ಸ್ಪಷ್ಟನೆ ನೀಡಿದ ಅವರು, ‘ಮೊದಲು ನಿಖಿಲ್ ಹೆಸರಿತ್ತು. ಈಗ ಅನಸೂಯಾ ಹೆಸರನ್ನು ಮುನ್ನೆಲೆಗೆ ತಂದಿದ್ದಾರೆ. ಆದರೆ, ಚನ್ನಪಟ್ಟಣದ ಜೆಡಿಎಸ್ ಮುಖಂಡರು, ಕಾರ್ಯಕರ್ತರ ಅಭಿಪ್ರಾಯ ಪಡೆದು ಅಂತಿಮ ನಿರ್ಧಾರ ಮಾಡಲಾಗುವುದು’ ಎಂದರು.