‘ಚುನಾವಣೆಗಾಗಿ ಚನ್ನಪಟ್ಟಣದಲ್ಲಿ ಅಭಿವೃದ್ಧಿ ಕಾರ್ಯ ಮಾಡಲಾಗುತ್ತಿದೆ ಎನ್ನುವುದು ಸರಿಯಲ್ಲ, ಅಭಿವೃದ್ಧಿ ಸರ್ಕಾರದ ಜವಾಬ್ದಾರಿ. ಅಲ್ಲಿನ ಶಾಸಕರಾಗಿದ್ದವರು ಇಷ್ಟು ದಿನ ನಿಷ್ಕ್ರಿಯರಾಗಿದ್ದರು. ಹಾಗಾಗಿ, ಅಲ್ಲಿನ ಸಮಸ್ಯೆ ಬಗೆಹರಿಸಲು ಸರ್ಕಾರ ಮುಂದಾಗಿದೆ. ₹400 ಕೋಟಿ ಬಿಡುಗಡೆ ಮಾಡಿದೆ. ಚನ್ನಪಟ್ಟಣ ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಜೀವನದ ಭಾಗವಾಗಿರುವ ಕಾರಣ ಹೆಚ್ಚು ಕಾಳಜಿ ವಹಿಸಿದ್ದಾರೆ. ರಾಮನಗರಕ್ಕೂ ₹500 ಕೋಟಿ ನೀಡಲಾಗಿದೆ’ ಎಂದು ತಿಳಿಸಿದರು.