ಶುಕ್ರವಾರ, 11 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕುಂಬಳಕಾಯಿ ಕಳ್ಳ... ದಸರಾ ಜಾಹೀರಾತು ಟೀಕಿಸಿದ ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು

Published : 11 ಅಕ್ಟೋಬರ್ 2024, 13:44 IST
Last Updated : 11 ಅಕ್ಟೋಬರ್ 2024, 13:44 IST
ಫಾಲೋ ಮಾಡಿ
Comments

ಬೆಂಗಳೂರು: ದಸರಾ ಜಾಹೀರಾತು ಬಗ್ಗೆ ಟೀಕಿಸಿದ ಬಿಜೆಪಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದು, ಕುಂಬಳಕಾಯಿ ಕಳ್ಳ ಎಂದರೆ ಬಿಜೆಪಿಯವರು ಹೆಗಲು ಮುಟ್ಟಿನೋಡಿಕೊಂಡ ಹಾಗಾಯಿತು ಎಂದು ಹೇಳಿದ್ದಾರೆ.

‘ದುಷ್ಟರಿಗೆ ಶಿಕ್ಷೆ, ಶಿಷ್ಟರಿಗೆ ರಕ್ಷೆ ನೀಡುವುದೇ ದಸರೆಯ ಸಂದೇಶ. ವಿಜಯನಗರ ಅರಸರು ವಿಜಯದ ಸಂಕೇತವಾಗಿ ಪ್ರಾರಂಭಿಸಿರುವ ಆಯುಧಪೂಜೆ - ದಸರಾ ಉತ್ಸವವನ್ನು ಮೈಸೂರು ಒಡೆಯರ್ ಮುಂದುವರೆಸಿದ್ದು, ಇಂದಿಗೂ ಆ ಪರಂಪರೆಯನ್ನು ಪಾಲಿಸಲಾಗುತ್ತಿದೆ’ ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

‘ಜನಪರವಾಗಿರುವ ನಮ್ಮ ಸರ್ಕಾರವನ್ನು ದುಷ್ಟರಿಂದ ರಕ್ಷಿಸು ಎಂದು ಜಾಹೀರಾತಿನ ಮೂಲಕ ಪ್ರಾರ್ಥಿಸಲಾಗಿದೆ.

ಇದು ದಸರಾದ ಆಶಯವೂ ಆಗಿದೆ’ ಎಂದು ಜಾಹೀರಾತನ್ನು ಸಮರ್ಥಿಸಿಕೊಂಡಿದ್ದಾರೆ.

‘ಇಡೀ ಜಾಹೀರಾತಿನಲ್ಲಿ ಯಾವುದೇ ವ್ಯಕ್ತಿ ಅಥವಾ ಪಕ್ಷದ ಹೆಸರು ಹೇಳಿಲ್ಲ. ಬೇರೆ ಯಾರಿಗೂ ಇಲ್ಲದ ಸಮಸ್ಯೆ ಬಿಜೆಪಿಯವರಿಗೆ ಮಾತ್ರ ಯಾಕೆ ಕಾಡಿದೆ? ಇದು ಕುಂಬಳಕಾಯಿ ಕಳ್ಳರು ಹೆಗಲು ಮುಟ್ಟಿಕೊಂಡ ಹಾಗಾಯಿತು’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT