<p><strong>ಶಿವಮೊಗ್ಗ</strong>: 'ಶ್ರೀರಾಮಚಂದ್ರನ ಬಳಸಿಕೊಂಡು ಬಿಜೆಪಿ ಮಾಡುತ್ತಿರುವ ರಾಜಕೀಯವನ್ನು ನಾವು (ಕಾಂಗ್ರೆಸ್) ವಿರೋಧಿಸುತ್ತೇವೆ.</p><p>'ಜನವರಿ 22ರ ನಂತರ ಅಯೋಧ್ಯೆಗೆ ಭೇಟಿ ನೀಡಿ ನಾವೂ ಪೂಜೆ ಸಲ್ಲಿಸುತ್ತೇವೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.</p><p>ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 'ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸಿರುವುದನ್ನು ಬಿಜೆಪಿಯವರು ರಾಜಕೀಯವಾಗಿ ಬಳಸಿಕೊಳ್ಳಲು ಹೊರಟಿದ್ದಾರೆ. ದೇವರನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದನ್ನು ನಾವು (ಕಾಂಗ್ರೆಸ್) ವಿರೋಧಿಸುತ್ತೇವೆ. ಹೊರತು ಶ್ರೀ ರಾಮಚಂದ್ರನನ್ನು ಅಲ್ಲ' ಎಂದು ಸ್ಪಷ್ಟಪಡಿಸಿದರು.</p><p>ರಾಜ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕೂಡ ದೇವಸ್ಥಾನಕ್ಕೆ ಹೋಗಿ ಪೂಜೆ ಮಾಡುತ್ತಾರೆ. ಹಾಗೆಂದು ನಾವು ದೇವರನ್ನು ಬಳಸಿ ಬಿಜೆಪಿಯವರಂತೆ ರಾಜಕೀಯ ಮಾಡುವುದಿಲ್ಲ ಎಂದರು. </p><p>ಇದೇ ವೇಳೆ ಮೂರು ಡಿಸಿಎಂ ಹುದ್ದೆಗಳ ಬಗ್ಗೆ ಪ್ರತಿಕ್ರಿಯಿಸಲು ಅವರು ನಿರಾಕರಿಸಿದರು.</p><p>'ಗ್ಯಾರಂಟಿ ಯೋಜನೆಗಳು ಯಾರದ್ದೋ ದುಡ್ಡು, ಯಲ್ಲಮ್ಮನ ಜಾತ್ರೆ' ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಟೀಕಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, 'ಕುಮಾರಸ್ವಾಮಿ ಅಂದರೆ ಸುಳ್ಳು. ಸುಳ್ಳು ಅಂದರೆ ಕುಮಾರಸ್ವಾಮಿ. ಅವರ ಟೀಕೆಗೆ ನಾನು ಉತ್ತರಿಸುವುದಿಲ್ಲ' ಎಂದರು.</p><p>'ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿರುವುದು</p><p>ವಿರೋಧ ಪಕ್ಷಗಳಿಗೆ ನುಂಗಲಾರದ ತುತ್ತಾಗಿದೆ. ಅವರ ಅವಧಿಯಲ್ಲಿ ಯಾವುದೇ ಗ್ಯಾರಂಟಿಗಳ ನೀಡಿಲ್ಲವಾದ್ದರಿಂದ ಅವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ' ಎಂದು ತಿರುಗೇಟು ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ</strong>: 'ಶ್ರೀರಾಮಚಂದ್ರನ ಬಳಸಿಕೊಂಡು ಬಿಜೆಪಿ ಮಾಡುತ್ತಿರುವ ರಾಜಕೀಯವನ್ನು ನಾವು (ಕಾಂಗ್ರೆಸ್) ವಿರೋಧಿಸುತ್ತೇವೆ.</p><p>'ಜನವರಿ 22ರ ನಂತರ ಅಯೋಧ್ಯೆಗೆ ಭೇಟಿ ನೀಡಿ ನಾವೂ ಪೂಜೆ ಸಲ್ಲಿಸುತ್ತೇವೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.</p><p>ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 'ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸಿರುವುದನ್ನು ಬಿಜೆಪಿಯವರು ರಾಜಕೀಯವಾಗಿ ಬಳಸಿಕೊಳ್ಳಲು ಹೊರಟಿದ್ದಾರೆ. ದೇವರನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದನ್ನು ನಾವು (ಕಾಂಗ್ರೆಸ್) ವಿರೋಧಿಸುತ್ತೇವೆ. ಹೊರತು ಶ್ರೀ ರಾಮಚಂದ್ರನನ್ನು ಅಲ್ಲ' ಎಂದು ಸ್ಪಷ್ಟಪಡಿಸಿದರು.</p><p>ರಾಜ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕೂಡ ದೇವಸ್ಥಾನಕ್ಕೆ ಹೋಗಿ ಪೂಜೆ ಮಾಡುತ್ತಾರೆ. ಹಾಗೆಂದು ನಾವು ದೇವರನ್ನು ಬಳಸಿ ಬಿಜೆಪಿಯವರಂತೆ ರಾಜಕೀಯ ಮಾಡುವುದಿಲ್ಲ ಎಂದರು. </p><p>ಇದೇ ವೇಳೆ ಮೂರು ಡಿಸಿಎಂ ಹುದ್ದೆಗಳ ಬಗ್ಗೆ ಪ್ರತಿಕ್ರಿಯಿಸಲು ಅವರು ನಿರಾಕರಿಸಿದರು.</p><p>'ಗ್ಯಾರಂಟಿ ಯೋಜನೆಗಳು ಯಾರದ್ದೋ ದುಡ್ಡು, ಯಲ್ಲಮ್ಮನ ಜಾತ್ರೆ' ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಟೀಕಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, 'ಕುಮಾರಸ್ವಾಮಿ ಅಂದರೆ ಸುಳ್ಳು. ಸುಳ್ಳು ಅಂದರೆ ಕುಮಾರಸ್ವಾಮಿ. ಅವರ ಟೀಕೆಗೆ ನಾನು ಉತ್ತರಿಸುವುದಿಲ್ಲ' ಎಂದರು.</p><p>'ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿರುವುದು</p><p>ವಿರೋಧ ಪಕ್ಷಗಳಿಗೆ ನುಂಗಲಾರದ ತುತ್ತಾಗಿದೆ. ಅವರ ಅವಧಿಯಲ್ಲಿ ಯಾವುದೇ ಗ್ಯಾರಂಟಿಗಳ ನೀಡಿಲ್ಲವಾದ್ದರಿಂದ ಅವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ' ಎಂದು ತಿರುಗೇಟು ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>