<p><strong>ಬೆಂಗಳೂರು:</strong> ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳಾದ ಡಾ. ಯತೀಂದ್ರ, ಎನ್.ಎಸ್. ಬೋಸರಾಜು, ಕೆ. ಗೋವಿಂದರಾಜು, ಬಿಲ್ಕಿಸ್ ಬಾನು, ಐವನ್ ಡಿಸೋಜ, ವಸಂತ ಕುಮಾರ್, ಜಗದೇವ್ ಗುತ್ತೇದಾರ್ ಅವರು ಸೋಮವಾರ ನಾಮಪತ್ರ ಸಲ್ಲಿಸಿದರು.</p><p>ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ. ಶಿವಕುಮಾರ್, ಸಚಿವರುಗಳು ಇದ್ದರು.</p><p>ತಮ ಪಕ್ಷದ ಅಭ್ಯರ್ಥಿಗಳೊಂದಿಗೆ ನಾಮಪತ್ರ ಸಲ್ಲಿಸಿ ನಂತರ ಮಾತನಾಡಿದ ಮುಖ್ಯಮಂತ್ರಿ, ‘ಎಕ್ಸಿಟ್ ಪೋಲ್ ನರೇಂದ್ರ ಮೋದಿ ಫ್ಯಾಂಟಸಿ ಪೋಲ್. ನಾವು ಅದನ್ನು ಒಪ್ಪಿಕೊಳ್ಳಲು ತಯಾರಿಲ್ಲ. ಕರ್ನಾಟಕದಲ್ಲಿ ನಾವು 15ರಿಂದ 20 ಸ್ಥಾನ ಗೆಲ್ಲುತ್ತೇವೆ. ಸಮೀಕ್ಷೆಯನ್ನು ಸಂಪೂರ್ಣ ತಳ್ಳಿ ಹಾಕುತ್ತೇವೆ’ ಎಂದರು.</p><p>‘ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದ ಪ್ರಕರಣದಲ್ಲಿ ಸಚಿವ ಬಿ. ನಾಗೇಂದ್ರ ಅವರ ರಾಜಿನಾಮೆಯನ್ನು ನಾವು ಕೇಳಿಲ್ಲ. ಎಸ್ಐಟಿ ಮೊನ್ನೆಯಷ್ಟೇ ರಚನೆಯಾಗಿದೆ. ವರದಿ ಏನು ಬರುತ್ತದೆಯೆಂದು ನೋಡೋಣ. ಪ್ರಾಥಮಿಕ ವರದಿ ಬಂದ ನಂತರ ಮುಂದಿನ ತೀರ್ಮಾನ ಮಾಡುತ್ತೇವೆ’ ಎಂದರು.</p><p>‘ಬಿಜೆಪಿಯವರು ವಿರೋಧ ಪಕ್ಷದಲ್ಲಿದ್ದಾರೆ. ವಿರೋಧ ಪಕ್ಷದವರು ಇರುವುದೇ ಹೋರಾಟ ಮಾಡಲು’ ಎಂದೂ ಹೇಳಿದರು.</p><p>‘ವಿಧಾನಸಭೆಯಲ್ಲಿನ ಸಂಖ್ಯಾಬಲದ ಪ್ರಕಾರ ವಿಧಾನ ಪರಿಷತ್ ಚುನಾವಣೆಯಲ್ಲಿಏಳು ಜನರನ್ನು ನಾವು ಕಣಕ್ಕಿಳಿಸಿದ್ದೇವೆ. ಪ್ರತಿಯೊಬ್ಬರು ಗೆಲ್ಲಲು 19-20 ಮತ ಬೇಕು. ಜೆಡಿಎಸ್ನವರು ಒಬ್ಬರು, ಬಿಜೆಪಿಯವರು ಮೂರು ಜನರನ್ನು ಕಣಕ್ಕಿಳಿಸುತ್ತಿದ್ದಾರೆ. ನಾಮಪತ್ರ ಪರಿಶೀಲನೆ ನಂತರ ನಾಮಪತ್ರ ಜಾಸ್ತಿಯಾದರೆ ಚುನಾವಣೆ ನಡೆಯಲಿದೆ’ ಎಂದರು.</p><p>‘ಮುಂಗಾರು ಆರಂಭವಾಗಿದೆ. ಬೆಂಗಳೂರಲ್ಲಿ ಉತ್ತಮ ಮಳೆಯಾಗಿದೆ. ಆದರೂ ಮಳೆ ಜಾಸ್ತಿಯಾದಾಗ ರಸ್ತೆಯಲ್ಲಿ ನೀರು ತುಂಬಿತು. ನೀರು ಹರಿದು ಹೋಗಲು ವ್ಯವಸ್ಥೆ ಮಾಡಲು ಸೂಚನೆ ಕೊಡಲಾಗಿದೆ. ಅಧಿಕಾರಿಗಳ ಸಭೆ ಕರೆಯಲಾಗುವುದು’ ಎಂದೂ ಹೇಳಿದರು.</p><p>ನಾಮಪತ್ರ ಸಲ್ಲಿಸುವುದಕ್ಕೂ ಮೊದಲು ಡಿ.ಕೆ. ಶಿವಕುಮಾರ್ ಅವರು ಎಲ್ಲ ಅಭ್ಯರ್ಥಿಗಳಿಗೆ ವಿಧಾನಸೌಧದಲ್ಲಿ ಬಿ ಫಾರಂ ವಿತರಿಸಿದರು. ವಿಧಾನಸಭೆಯ ಮುಖ್ಯ ಸಚೇತಕ ಅಶೋಕ್ ಪಟ್ಟಣ, ಕಾಂಗ್ರೆಸ್ ಮುಖಂಡ ಹಂಪನಗೌಡ ಬಾದರ್ಲಿ ಇದ್ದರು.</p>.<blockquote>ಸಿಎಂ, ಡಿಸಿಎಂ, ಎಚ್ಡಿಕೆ ಮುಖಾಮುಖಿ</blockquote>.<p>ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ವಿಧಾನಸೌಧದ ಕಾರಿಡಾರ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಮುಖಾಮುಖಿಯಾದರು.</p><p>ತಮ್ಮ ಪಕ್ಷದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಗಾಗಿ ವಿಧಾನಸಭೆ ಕಾರ್ಯದರ್ಶಿಯ ಕೊಠಡಿಯ ಹೊರಗಡೆ ಸಿದ್ದರಾಮಯ್ಯ ನಿಂತಿದ್ದರು. ಪಕ್ಷದ ಅಭ್ಯರ್ಥಿಯ ನಾಮಪತ್ರ ಸಲ್ಲಿಸಿ ಕುಮಾರಸ್ವಾಮಿ ಹೊರಗೆ ಬರುತ್ತಿರುವಾಗ ಇಬ್ಬರೂ ಮುಖಾಮುಖಿಯಾದರು. ಪರಸ್ಪರ ಎದುರಾದಾಗ ಉಭಯ ನಾಯಕರು ಪರಸ್ಪರ ನಮಸ್ಕರಿದರು.</p><p>ಇದೇ ವೇಳೆ, ಸಿದ್ದರಾಮಯ್ಯ ಅವರು ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡರ ಜೊತೆ ಕುಶಲೋಪರಿ ವಿಚಾರಿಸಿದರು. ಜಿ.ಟಿ. ದೇವೆಗೌಡರ ಕೈಕುಲುಕಿ ಆತ್ಮೀಯವಾಗಿ ಮಾತನಾಡಿಸಿದರು. </p><p><strong>ಪರಸ್ಪರ ಮುಖ ನೋಡದ ಡಿಕೆಶಿ - ಎಚ್ಡಿಕೆ:</strong> ಇದೇ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಎಚ್.ಡಿ ಕುಮಾರಸ್ವಾಮಿ ಕೂಡಾ ಮುಖಾಮುಖಿಯಾದರು. ಆದರೆ, ಉಭಯ ನಾಯಕರು ಮುಖವನ್ನೂ ನೋಡದೇ ತೆರಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳಾದ ಡಾ. ಯತೀಂದ್ರ, ಎನ್.ಎಸ್. ಬೋಸರಾಜು, ಕೆ. ಗೋವಿಂದರಾಜು, ಬಿಲ್ಕಿಸ್ ಬಾನು, ಐವನ್ ಡಿಸೋಜ, ವಸಂತ ಕುಮಾರ್, ಜಗದೇವ್ ಗುತ್ತೇದಾರ್ ಅವರು ಸೋಮವಾರ ನಾಮಪತ್ರ ಸಲ್ಲಿಸಿದರು.</p><p>ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ. ಶಿವಕುಮಾರ್, ಸಚಿವರುಗಳು ಇದ್ದರು.</p><p>ತಮ ಪಕ್ಷದ ಅಭ್ಯರ್ಥಿಗಳೊಂದಿಗೆ ನಾಮಪತ್ರ ಸಲ್ಲಿಸಿ ನಂತರ ಮಾತನಾಡಿದ ಮುಖ್ಯಮಂತ್ರಿ, ‘ಎಕ್ಸಿಟ್ ಪೋಲ್ ನರೇಂದ್ರ ಮೋದಿ ಫ್ಯಾಂಟಸಿ ಪೋಲ್. ನಾವು ಅದನ್ನು ಒಪ್ಪಿಕೊಳ್ಳಲು ತಯಾರಿಲ್ಲ. ಕರ್ನಾಟಕದಲ್ಲಿ ನಾವು 15ರಿಂದ 20 ಸ್ಥಾನ ಗೆಲ್ಲುತ್ತೇವೆ. ಸಮೀಕ್ಷೆಯನ್ನು ಸಂಪೂರ್ಣ ತಳ್ಳಿ ಹಾಕುತ್ತೇವೆ’ ಎಂದರು.</p><p>‘ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದ ಪ್ರಕರಣದಲ್ಲಿ ಸಚಿವ ಬಿ. ನಾಗೇಂದ್ರ ಅವರ ರಾಜಿನಾಮೆಯನ್ನು ನಾವು ಕೇಳಿಲ್ಲ. ಎಸ್ಐಟಿ ಮೊನ್ನೆಯಷ್ಟೇ ರಚನೆಯಾಗಿದೆ. ವರದಿ ಏನು ಬರುತ್ತದೆಯೆಂದು ನೋಡೋಣ. ಪ್ರಾಥಮಿಕ ವರದಿ ಬಂದ ನಂತರ ಮುಂದಿನ ತೀರ್ಮಾನ ಮಾಡುತ್ತೇವೆ’ ಎಂದರು.</p><p>‘ಬಿಜೆಪಿಯವರು ವಿರೋಧ ಪಕ್ಷದಲ್ಲಿದ್ದಾರೆ. ವಿರೋಧ ಪಕ್ಷದವರು ಇರುವುದೇ ಹೋರಾಟ ಮಾಡಲು’ ಎಂದೂ ಹೇಳಿದರು.</p><p>‘ವಿಧಾನಸಭೆಯಲ್ಲಿನ ಸಂಖ್ಯಾಬಲದ ಪ್ರಕಾರ ವಿಧಾನ ಪರಿಷತ್ ಚುನಾವಣೆಯಲ್ಲಿಏಳು ಜನರನ್ನು ನಾವು ಕಣಕ್ಕಿಳಿಸಿದ್ದೇವೆ. ಪ್ರತಿಯೊಬ್ಬರು ಗೆಲ್ಲಲು 19-20 ಮತ ಬೇಕು. ಜೆಡಿಎಸ್ನವರು ಒಬ್ಬರು, ಬಿಜೆಪಿಯವರು ಮೂರು ಜನರನ್ನು ಕಣಕ್ಕಿಳಿಸುತ್ತಿದ್ದಾರೆ. ನಾಮಪತ್ರ ಪರಿಶೀಲನೆ ನಂತರ ನಾಮಪತ್ರ ಜಾಸ್ತಿಯಾದರೆ ಚುನಾವಣೆ ನಡೆಯಲಿದೆ’ ಎಂದರು.</p><p>‘ಮುಂಗಾರು ಆರಂಭವಾಗಿದೆ. ಬೆಂಗಳೂರಲ್ಲಿ ಉತ್ತಮ ಮಳೆಯಾಗಿದೆ. ಆದರೂ ಮಳೆ ಜಾಸ್ತಿಯಾದಾಗ ರಸ್ತೆಯಲ್ಲಿ ನೀರು ತುಂಬಿತು. ನೀರು ಹರಿದು ಹೋಗಲು ವ್ಯವಸ್ಥೆ ಮಾಡಲು ಸೂಚನೆ ಕೊಡಲಾಗಿದೆ. ಅಧಿಕಾರಿಗಳ ಸಭೆ ಕರೆಯಲಾಗುವುದು’ ಎಂದೂ ಹೇಳಿದರು.</p><p>ನಾಮಪತ್ರ ಸಲ್ಲಿಸುವುದಕ್ಕೂ ಮೊದಲು ಡಿ.ಕೆ. ಶಿವಕುಮಾರ್ ಅವರು ಎಲ್ಲ ಅಭ್ಯರ್ಥಿಗಳಿಗೆ ವಿಧಾನಸೌಧದಲ್ಲಿ ಬಿ ಫಾರಂ ವಿತರಿಸಿದರು. ವಿಧಾನಸಭೆಯ ಮುಖ್ಯ ಸಚೇತಕ ಅಶೋಕ್ ಪಟ್ಟಣ, ಕಾಂಗ್ರೆಸ್ ಮುಖಂಡ ಹಂಪನಗೌಡ ಬಾದರ್ಲಿ ಇದ್ದರು.</p>.<blockquote>ಸಿಎಂ, ಡಿಸಿಎಂ, ಎಚ್ಡಿಕೆ ಮುಖಾಮುಖಿ</blockquote>.<p>ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ವಿಧಾನಸೌಧದ ಕಾರಿಡಾರ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಮುಖಾಮುಖಿಯಾದರು.</p><p>ತಮ್ಮ ಪಕ್ಷದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಗಾಗಿ ವಿಧಾನಸಭೆ ಕಾರ್ಯದರ್ಶಿಯ ಕೊಠಡಿಯ ಹೊರಗಡೆ ಸಿದ್ದರಾಮಯ್ಯ ನಿಂತಿದ್ದರು. ಪಕ್ಷದ ಅಭ್ಯರ್ಥಿಯ ನಾಮಪತ್ರ ಸಲ್ಲಿಸಿ ಕುಮಾರಸ್ವಾಮಿ ಹೊರಗೆ ಬರುತ್ತಿರುವಾಗ ಇಬ್ಬರೂ ಮುಖಾಮುಖಿಯಾದರು. ಪರಸ್ಪರ ಎದುರಾದಾಗ ಉಭಯ ನಾಯಕರು ಪರಸ್ಪರ ನಮಸ್ಕರಿದರು.</p><p>ಇದೇ ವೇಳೆ, ಸಿದ್ದರಾಮಯ್ಯ ಅವರು ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡರ ಜೊತೆ ಕುಶಲೋಪರಿ ವಿಚಾರಿಸಿದರು. ಜಿ.ಟಿ. ದೇವೆಗೌಡರ ಕೈಕುಲುಕಿ ಆತ್ಮೀಯವಾಗಿ ಮಾತನಾಡಿಸಿದರು. </p><p><strong>ಪರಸ್ಪರ ಮುಖ ನೋಡದ ಡಿಕೆಶಿ - ಎಚ್ಡಿಕೆ:</strong> ಇದೇ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಎಚ್.ಡಿ ಕುಮಾರಸ್ವಾಮಿ ಕೂಡಾ ಮುಖಾಮುಖಿಯಾದರು. ಆದರೆ, ಉಭಯ ನಾಯಕರು ಮುಖವನ್ನೂ ನೋಡದೇ ತೆರಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>