ಬೆಂಗಳೂರು: ‘ನಗರದ ಪ್ರತಿಷ್ಠಿತ ಆರ್.ಎಂ.ವಿ ಬಡಾವಣೆಯ 2ನೇ ಹಂತದ ಲೊಟ್ಟೆಗೊಲ್ಲಹಳ್ಳಿಯಲ್ಲಿ ಬಿಡಿಎ ವಶಪಡಿಸಿಕೊಂಡಿದ್ದ 32 ಗುಂಟೆ ಜಮೀನನ್ನು ಅಕ್ರಮವಾಗಿ ಡಿನೋಟಿಫೈ ಮಾಡಿಸಿಕೊಂಡಿದ್ದ ಇಂದಿನ ವಿಪಕ್ಷ ನಾಯಕ ಆರ್. ಅಶೋಕ, ಆ ಜಮೀನನ್ನು ಬಿಡಿಎಗೆ ವಾಪಸ್ ಮಾಡಿದ್ದರು. ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸುತ್ತಿರುವ ಅವರು, ಈ ಪ್ರಕರಣದಲ್ಲಿ ರಾಜೀನಾಮೆ ನೀಡಬೇಕಲ್ಲವೇ’ ಎಂದು ಗೃಹ ಸಚಿವ ಜಿ. ಪರಮೇಶ್ವರ ಪ್ರಶ್ನಿಸಿದರು.