<p><strong>ಮೈಸೂರು</strong>: ‘ಉಪಚುನಾವಣೆ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ಅಂತಿಮ ಹಂತಕ್ಕೆ ಬಂದಿದ್ದು, ಶೀಘ್ರದಲ್ಲೇ ಪ್ರಕಟಿಸುತ್ತೇವೆ. ಚನ್ನಪಟ್ಟಣದಲ್ಲಿ ಕಾಂಗ್ರೆಸ್ನಿಂದ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದ್ದು, ಗೆಲ್ಲುತ್ತೇವೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.</p><p>ನಗರದಲ್ಲಿ ಮಂಗಳವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ‘ರಾಜಕಾರಣದಲ್ಲಿ ಬಿಜೆಪಿ ಹಾಗೂ ಜೆಡಿಎಸ್ನವರು ಹೇಗೆ ಲೆಕ್ಕಾಚಾರ ಹಾಕುತ್ತಿದ್ದಾರೋ ಅದೇ ರೀತಿ ನಾವು ಲೆಕ್ಕಚಾರ ಹಾಕಿ ತೀರ್ಮಾನ ಮಾಡುತ್ತೇವೆ. ಗೆಲ್ಲುವ ಅಭ್ಯರ್ಥಿಯನ್ನೇ ಆಯ್ಕೆ ಮಾಡುತ್ತೇವೆ’ ಎಂದರು.</p><p>ಚನ್ನಪಟ್ಟಣ ಅಭ್ಯರ್ಥಿ ಕುರಿತು ಪ್ರತಿಕ್ರಿಯಿಸಿ ‘ನಾನೇ ಅಭ್ಯರ್ಥಿ ಎಂದು ಹೇಳಿದ್ದೇನೆ. ಪಕ್ಷದ ಚಿಹ್ನೆ ಮೇಲೆಯೇ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ. ಯೋಗೇಶ್ವರ್ ಸೇರಿದಂತೆ ಯಾರ ಜೊತೆಗೂ ನಾನು ಮಾತುಕತೆ ನಡೆಸಿಲ್ಲ’ ಎಂದರು.</p><p>‘ಈಗಾಗಲೇ ಎಐಸಿಸಿ ಪ್ರಧಾನ ಕಾರ್ಯದರ್ಶಿ, ಮುಖ್ಯಮಂತ್ರಿ ಹಾಗೂ ನಾನು ಕುಳಿತು ಚರ್ಚೆ ಮಾಡಿದ್ದೇವೆ. ಖರ್ಗೆ ಅವರಿಂದ ಅನುಮತಿ ಪಡೆದು ಬಿ ಫಾರಂಗೆ ನಾನೇ ಸಹಿ ಹಾಕಿ ಕೊಡುತ್ತೇನೆ’ ಎಂದು ಹೇಳಿದರು.</p><p><strong>‘ಚನ್ನಪಟ್ಟಣ ಅಭ್ಯರ್ಥಿ ಶೀಘ್ರ ನಿರ್ಧಾರ’</strong></p><p>ಮೈಸೂರು: ‘ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಅಭ್ಯರ್ಥಿಯಾಗಿ ಸಂಸದ ತುಕಾರಾಂ ಅವರ ಪತ್ನಿಯನ್ನು ಕಣಕ್ಕಿಳಿಸಲಾಗುವುದು. ಶಿಗ್ಗಾಂವಿ, ಚನ್ನಪಟ್ಟಣ ಅಭ್ಯರ್ಥಿ ಯಾರೆಂಬುದನ್ನು ನಿರ್ಧರಿಸಬೇಕಷ್ಟೇ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.</p><p>ನಗರದ ತಮ್ಮ ನಿವಾಸದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಚನ್ನಪಟ್ಟಣ ಕ್ಷೇತ್ರಕ್ಕೆ ಡಿ.ಕೆ.ಸುರೇಶ್ ಹೆಸರು ಕೂಡ ಇದೆ. ಪಕ್ಷದ ಅಧ್ಯಕ್ಷರೇ ಅಲ್ಲಿರುವುದರಿಂದ ಅವರೇ ಸೂಕ್ತ ಅಭ್ಯರ್ಥಿಯನ್ನು ತೀರ್ಮಾನಿಸುತ್ತಾರೆ. ಒಳ್ಳೆಯ ಅಭ್ಯರ್ಥಿ ಹಾಕಬೇಕೆಂದು ನಾನೂ ಹೇಳಿದ್ದೇನೆ' ಎಂದರು.</p><p>‘ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಸೇರುತ್ತಾರೆಯೇ’ ಎಂಬ ಪ್ರಶ್ನೆಗೆ ಉತ್ತರಿಸಿ, ‘ಪಕ್ಷದ ಸಿದ್ಧಾಂತ ಹಾಗೂ ಸಂವಿಧಾನದ ಮೌಲ್ಯಗಳನ್ನು ಒಪ್ಪಿ ಯಾರೇ ಬಂದರೂ ಸ್ವಾಗತ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಉಪಚುನಾವಣೆ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ಅಂತಿಮ ಹಂತಕ್ಕೆ ಬಂದಿದ್ದು, ಶೀಘ್ರದಲ್ಲೇ ಪ್ರಕಟಿಸುತ್ತೇವೆ. ಚನ್ನಪಟ್ಟಣದಲ್ಲಿ ಕಾಂಗ್ರೆಸ್ನಿಂದ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದ್ದು, ಗೆಲ್ಲುತ್ತೇವೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.</p><p>ನಗರದಲ್ಲಿ ಮಂಗಳವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ‘ರಾಜಕಾರಣದಲ್ಲಿ ಬಿಜೆಪಿ ಹಾಗೂ ಜೆಡಿಎಸ್ನವರು ಹೇಗೆ ಲೆಕ್ಕಾಚಾರ ಹಾಕುತ್ತಿದ್ದಾರೋ ಅದೇ ರೀತಿ ನಾವು ಲೆಕ್ಕಚಾರ ಹಾಕಿ ತೀರ್ಮಾನ ಮಾಡುತ್ತೇವೆ. ಗೆಲ್ಲುವ ಅಭ್ಯರ್ಥಿಯನ್ನೇ ಆಯ್ಕೆ ಮಾಡುತ್ತೇವೆ’ ಎಂದರು.</p><p>ಚನ್ನಪಟ್ಟಣ ಅಭ್ಯರ್ಥಿ ಕುರಿತು ಪ್ರತಿಕ್ರಿಯಿಸಿ ‘ನಾನೇ ಅಭ್ಯರ್ಥಿ ಎಂದು ಹೇಳಿದ್ದೇನೆ. ಪಕ್ಷದ ಚಿಹ್ನೆ ಮೇಲೆಯೇ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ. ಯೋಗೇಶ್ವರ್ ಸೇರಿದಂತೆ ಯಾರ ಜೊತೆಗೂ ನಾನು ಮಾತುಕತೆ ನಡೆಸಿಲ್ಲ’ ಎಂದರು.</p><p>‘ಈಗಾಗಲೇ ಎಐಸಿಸಿ ಪ್ರಧಾನ ಕಾರ್ಯದರ್ಶಿ, ಮುಖ್ಯಮಂತ್ರಿ ಹಾಗೂ ನಾನು ಕುಳಿತು ಚರ್ಚೆ ಮಾಡಿದ್ದೇವೆ. ಖರ್ಗೆ ಅವರಿಂದ ಅನುಮತಿ ಪಡೆದು ಬಿ ಫಾರಂಗೆ ನಾನೇ ಸಹಿ ಹಾಕಿ ಕೊಡುತ್ತೇನೆ’ ಎಂದು ಹೇಳಿದರು.</p><p><strong>‘ಚನ್ನಪಟ್ಟಣ ಅಭ್ಯರ್ಥಿ ಶೀಘ್ರ ನಿರ್ಧಾರ’</strong></p><p>ಮೈಸೂರು: ‘ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಅಭ್ಯರ್ಥಿಯಾಗಿ ಸಂಸದ ತುಕಾರಾಂ ಅವರ ಪತ್ನಿಯನ್ನು ಕಣಕ್ಕಿಳಿಸಲಾಗುವುದು. ಶಿಗ್ಗಾಂವಿ, ಚನ್ನಪಟ್ಟಣ ಅಭ್ಯರ್ಥಿ ಯಾರೆಂಬುದನ್ನು ನಿರ್ಧರಿಸಬೇಕಷ್ಟೇ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.</p><p>ನಗರದ ತಮ್ಮ ನಿವಾಸದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಚನ್ನಪಟ್ಟಣ ಕ್ಷೇತ್ರಕ್ಕೆ ಡಿ.ಕೆ.ಸುರೇಶ್ ಹೆಸರು ಕೂಡ ಇದೆ. ಪಕ್ಷದ ಅಧ್ಯಕ್ಷರೇ ಅಲ್ಲಿರುವುದರಿಂದ ಅವರೇ ಸೂಕ್ತ ಅಭ್ಯರ್ಥಿಯನ್ನು ತೀರ್ಮಾನಿಸುತ್ತಾರೆ. ಒಳ್ಳೆಯ ಅಭ್ಯರ್ಥಿ ಹಾಕಬೇಕೆಂದು ನಾನೂ ಹೇಳಿದ್ದೇನೆ' ಎಂದರು.</p><p>‘ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಸೇರುತ್ತಾರೆಯೇ’ ಎಂಬ ಪ್ರಶ್ನೆಗೆ ಉತ್ತರಿಸಿ, ‘ಪಕ್ಷದ ಸಿದ್ಧಾಂತ ಹಾಗೂ ಸಂವಿಧಾನದ ಮೌಲ್ಯಗಳನ್ನು ಒಪ್ಪಿ ಯಾರೇ ಬಂದರೂ ಸ್ವಾಗತ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>