<p><strong>ಬೆಂಗಳೂರು:</strong> ರಾಜ್ಯದಲ್ಲಿ ಅಪರಾಧ ಪ್ರಕರಣಗಳ ಹೆಚ್ಚಳ ಕುರಿತು ‘ಪ್ರಜಾವಾಣಿ’ಯ ಶನಿವಾರದ ಸಂಚಿಕೆಯಲ್ಲಿ ಪ್ರಕಟವಾದ ‘430 ಕೊಲೆ, 198 ಅತ್ಯಾಚಾರ’ ವರದಿಯನ್ನು ತನ್ನ ‘ಎಕ್ಸ್’ ಖಾತೆಯಲ್ಲಿ ಹಂಚಿಕೊಂಡಿರುವ ಜೆಡಿಎಸ್, ‘ಗೃಹ ಇಲಾಖೆ ಕೆಲಸ ಮಾಡುತ್ತಿದೆಯಾ ಅಥವಾ ನಿದ್ದೆ ಮಾಡುತ್ತಿದೆಯಾ’ ಎಂದು ಪ್ರಶ್ನಿಸಿದೆ.</p>.<p>‘ಕಾನೂನು ಸುವ್ಯವಸ್ಥೆ ರಾಜ್ಯದಲ್ಲಿ ಸಂಪೂರ್ಣವಾಗಿ ಕುಸಿದಿದೆ. ಹಾದಿಬೀದಿಗಳಲ್ಲಿ ಕೊಲೆಗಳಾಗುತ್ತಿವೆ. ರಾಜ್ಯವು ಅತ್ಯಾಚಾರಿಗಳ ಆಡಂಬೊಲವಾಗಿದೆ. ಬೆಂಗಳೂರು ಮಹಾನಗರದಲ್ಲಿ ಮಾದಕ ವಸ್ತುಗಳ ದಂಧೆಗೆ ಕಡಿವಾಣವೇ ಇಲ್ಲ. ಕೇವಲ 4 ತಿಂಗಳಲ್ಲಿ ಇಷ್ಟೆಲ್ಲಾ ನಡೆದಿದೆ. ಜನರಿಗೆ ಇಲ್ಲ ನೆಮ್ಮದಿಯ ಗ್ಯಾರಂಟಿ’ ಎಂದು ಟೀಕಿಸಿದೆ.</p>.<p>ತನ್ನ ‘ಎಕ್ಸ್’ ಖಾತೆಯಲ್ಲಿ ಖಾಲಿ ಕುರ್ಚಿ ಚಿತ್ರ ಪ್ರಕಟಿಸಿರುವ ಬಿಜೆಪಿ, ‘ಕರುನಾಡಿನ ಶಾಂತಿಗೆ ಬೆಂಕಿ ಬಿದ್ದಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಮಹಿಳೆಯರು, ಹೆಣ್ಣುಮಕ್ಕಳು ನಿರ್ಭೀತಿಯಿಂದ ಓಡಾಡಲು ಗ್ಯಾರಂಟಿ ಕೊಡುವ ದಕ್ಷ ಗೃಹ ಸಚಿವರು ಬೇಕಾಗಿದ್ದಾರೆ’ ಎಂದು ‘ಟ್ಯಾಗ್ ಲೈನ್’ ಹಾಕಿದೆ.</p>.ರಾಜ್ಯ | 4 ತಿಂಗಳು; 430 ಕೊಲೆ, 198 ಅತ್ಯಾಚಾರ .ಕರುನಾಡಿನ ಶಾಂತಿಗೆ ಬೆಂಕಿ ಬಿದ್ದಿದೆ; ದಕ್ಷ ಗೃಹ ಸಚಿವರು ಬೇಕಾಗಿದ್ದಾರೆ: ಬಿಜೆಪಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯದಲ್ಲಿ ಅಪರಾಧ ಪ್ರಕರಣಗಳ ಹೆಚ್ಚಳ ಕುರಿತು ‘ಪ್ರಜಾವಾಣಿ’ಯ ಶನಿವಾರದ ಸಂಚಿಕೆಯಲ್ಲಿ ಪ್ರಕಟವಾದ ‘430 ಕೊಲೆ, 198 ಅತ್ಯಾಚಾರ’ ವರದಿಯನ್ನು ತನ್ನ ‘ಎಕ್ಸ್’ ಖಾತೆಯಲ್ಲಿ ಹಂಚಿಕೊಂಡಿರುವ ಜೆಡಿಎಸ್, ‘ಗೃಹ ಇಲಾಖೆ ಕೆಲಸ ಮಾಡುತ್ತಿದೆಯಾ ಅಥವಾ ನಿದ್ದೆ ಮಾಡುತ್ತಿದೆಯಾ’ ಎಂದು ಪ್ರಶ್ನಿಸಿದೆ.</p>.<p>‘ಕಾನೂನು ಸುವ್ಯವಸ್ಥೆ ರಾಜ್ಯದಲ್ಲಿ ಸಂಪೂರ್ಣವಾಗಿ ಕುಸಿದಿದೆ. ಹಾದಿಬೀದಿಗಳಲ್ಲಿ ಕೊಲೆಗಳಾಗುತ್ತಿವೆ. ರಾಜ್ಯವು ಅತ್ಯಾಚಾರಿಗಳ ಆಡಂಬೊಲವಾಗಿದೆ. ಬೆಂಗಳೂರು ಮಹಾನಗರದಲ್ಲಿ ಮಾದಕ ವಸ್ತುಗಳ ದಂಧೆಗೆ ಕಡಿವಾಣವೇ ಇಲ್ಲ. ಕೇವಲ 4 ತಿಂಗಳಲ್ಲಿ ಇಷ್ಟೆಲ್ಲಾ ನಡೆದಿದೆ. ಜನರಿಗೆ ಇಲ್ಲ ನೆಮ್ಮದಿಯ ಗ್ಯಾರಂಟಿ’ ಎಂದು ಟೀಕಿಸಿದೆ.</p>.<p>ತನ್ನ ‘ಎಕ್ಸ್’ ಖಾತೆಯಲ್ಲಿ ಖಾಲಿ ಕುರ್ಚಿ ಚಿತ್ರ ಪ್ರಕಟಿಸಿರುವ ಬಿಜೆಪಿ, ‘ಕರುನಾಡಿನ ಶಾಂತಿಗೆ ಬೆಂಕಿ ಬಿದ್ದಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಮಹಿಳೆಯರು, ಹೆಣ್ಣುಮಕ್ಕಳು ನಿರ್ಭೀತಿಯಿಂದ ಓಡಾಡಲು ಗ್ಯಾರಂಟಿ ಕೊಡುವ ದಕ್ಷ ಗೃಹ ಸಚಿವರು ಬೇಕಾಗಿದ್ದಾರೆ’ ಎಂದು ‘ಟ್ಯಾಗ್ ಲೈನ್’ ಹಾಕಿದೆ.</p>.ರಾಜ್ಯ | 4 ತಿಂಗಳು; 430 ಕೊಲೆ, 198 ಅತ್ಯಾಚಾರ .ಕರುನಾಡಿನ ಶಾಂತಿಗೆ ಬೆಂಕಿ ಬಿದ್ದಿದೆ; ದಕ್ಷ ಗೃಹ ಸಚಿವರು ಬೇಕಾಗಿದ್ದಾರೆ: ಬಿಜೆಪಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>