<p><strong>ಬೆಂಗಳೂರು:</strong> ವರ್ತಕರು ಈ ಬಾರಿ ದೀಪಾವಳಿ ಹಬ್ಬಕ್ಕೆ ಹಸಿರು ಪಟಾಕಿಯನ್ನಷ್ಟೇ ದಾಸ್ತಾನು, ಮಾರಾಟ ಮಾಡುವುದನ್ನು ಕಡ್ಡಾಯ ಮಾಡಲಾಗುತ್ತಿದೆ.</p>.<p>ಈ ಕುರಿತು ಎಲ್ಲ ಜಿಲ್ಲಾಧಿಕಾರಿಗಳಿಗೂ ಸೂಚಿಸಿರುವ ಪರಿಸರ ಸಚಿವ ಈಶ್ವರ ಖಂಡ್ರೆ ‘ಹಸಿರು ಪಟಾಕಿಯನ್ನಷ್ಟೇ ತರಿಸುವ, ದಾಸ್ತಾನು ಮಾಡುವ ಹಾಗೂ ಮಾರಾಟ ಮಾಡುವುದಾಗಿ ಮುಚ್ಚಳಿಕೆ ಪತ್ರ ಬರೆಸಿಕೊಂಡು ಪಟಾಕಿ ಮಾರಾಟದ ಮಳಿಗೆಗಳಿಗೆ ಅನುಮತಿ ನೀಡಬೇಕು. ನಿಯಮ ಉಲ್ಲಂಘಿಸಿದವರ ಪರವಾನಗಿ ರದ್ದು ಮಾಡಬೇಕು’ ಎಂದಿದ್ದಾರೆ.</p>.<p>ವಾಯು ಹಾಗೂ ಶಬ್ದ ಮಾಲಿನ್ಯ ತಡೆಯಲು, ಹಿರಿಯ ನಾಗರಿಕರು, ಪುಟ್ಟ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು. ಸುಪ್ರೀಂಕೋರ್ಟ್ ಹಾಗೂ ರಾಷ್ಟ್ರೀಯ ಹಸಿರು ನ್ಯಾಯಪೀಠದ ಆದೇಶದಂತೆ 125 ಡೆಸಿಬಲ್ ಒಳಗಿನ ಶಬ್ದದ ಪಟಾಕಿ ಬಳಸಬೇಕು. ರಾತ್ರಿ 8 ರಿಂದ 10ರವರೆಗೆ ಮಾತ್ರ ಸಿಡಿಸಬೇಕು. ಪರಿಸರಕ್ಕೆ ದಟ್ಟ ಹೊಗೆ ಸೇರಿಸುವ, ರಾಸಾಯನಿಕಯುಕ್ತ, ಭಾರ ಲೋಹದ ಪಟಾಕಿ ಬಳಸಬಾರದು ಎಂದು ಮನವಿ ಮಾಡಿದ್ದಾರೆ. </p>.<p><strong>ಜಾಗೃತಿಗೆ ಮನವಿ:</strong> </p>.<p>ಸಂಘ ಸಂಸ್ಥೆಗಳು, ಶಿಕ್ಷಕರು, ಪರಿಸರ ಪ್ರೇಮಿಗಳು, ಜನಪ್ರತಿನಿಧಿಗಳು ಸೇರಿ ಜನರು ಹಾಗೂ ಮಕ್ಕಳಲ್ಲಿ ಪಟಾಕಿಯ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಬೇಕು. ದೀಪ ಹಚ್ಚಿ ಪರಿಸರ ಸ್ನೇಹಿ ದೀಪಾವಳಿ ಆಚರಿಸಬೇಕು ಎಂದು ಖಂಡ್ರೆ ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ವರ್ತಕರು ಈ ಬಾರಿ ದೀಪಾವಳಿ ಹಬ್ಬಕ್ಕೆ ಹಸಿರು ಪಟಾಕಿಯನ್ನಷ್ಟೇ ದಾಸ್ತಾನು, ಮಾರಾಟ ಮಾಡುವುದನ್ನು ಕಡ್ಡಾಯ ಮಾಡಲಾಗುತ್ತಿದೆ.</p>.<p>ಈ ಕುರಿತು ಎಲ್ಲ ಜಿಲ್ಲಾಧಿಕಾರಿಗಳಿಗೂ ಸೂಚಿಸಿರುವ ಪರಿಸರ ಸಚಿವ ಈಶ್ವರ ಖಂಡ್ರೆ ‘ಹಸಿರು ಪಟಾಕಿಯನ್ನಷ್ಟೇ ತರಿಸುವ, ದಾಸ್ತಾನು ಮಾಡುವ ಹಾಗೂ ಮಾರಾಟ ಮಾಡುವುದಾಗಿ ಮುಚ್ಚಳಿಕೆ ಪತ್ರ ಬರೆಸಿಕೊಂಡು ಪಟಾಕಿ ಮಾರಾಟದ ಮಳಿಗೆಗಳಿಗೆ ಅನುಮತಿ ನೀಡಬೇಕು. ನಿಯಮ ಉಲ್ಲಂಘಿಸಿದವರ ಪರವಾನಗಿ ರದ್ದು ಮಾಡಬೇಕು’ ಎಂದಿದ್ದಾರೆ.</p>.<p>ವಾಯು ಹಾಗೂ ಶಬ್ದ ಮಾಲಿನ್ಯ ತಡೆಯಲು, ಹಿರಿಯ ನಾಗರಿಕರು, ಪುಟ್ಟ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು. ಸುಪ್ರೀಂಕೋರ್ಟ್ ಹಾಗೂ ರಾಷ್ಟ್ರೀಯ ಹಸಿರು ನ್ಯಾಯಪೀಠದ ಆದೇಶದಂತೆ 125 ಡೆಸಿಬಲ್ ಒಳಗಿನ ಶಬ್ದದ ಪಟಾಕಿ ಬಳಸಬೇಕು. ರಾತ್ರಿ 8 ರಿಂದ 10ರವರೆಗೆ ಮಾತ್ರ ಸಿಡಿಸಬೇಕು. ಪರಿಸರಕ್ಕೆ ದಟ್ಟ ಹೊಗೆ ಸೇರಿಸುವ, ರಾಸಾಯನಿಕಯುಕ್ತ, ಭಾರ ಲೋಹದ ಪಟಾಕಿ ಬಳಸಬಾರದು ಎಂದು ಮನವಿ ಮಾಡಿದ್ದಾರೆ. </p>.<p><strong>ಜಾಗೃತಿಗೆ ಮನವಿ:</strong> </p>.<p>ಸಂಘ ಸಂಸ್ಥೆಗಳು, ಶಿಕ್ಷಕರು, ಪರಿಸರ ಪ್ರೇಮಿಗಳು, ಜನಪ್ರತಿನಿಧಿಗಳು ಸೇರಿ ಜನರು ಹಾಗೂ ಮಕ್ಕಳಲ್ಲಿ ಪಟಾಕಿಯ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಬೇಕು. ದೀಪ ಹಚ್ಚಿ ಪರಿಸರ ಸ್ನೇಹಿ ದೀಪಾವಳಿ ಆಚರಿಸಬೇಕು ಎಂದು ಖಂಡ್ರೆ ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>