<p><strong>ಬೆಂಗಳೂರು:</strong> ಎರಡೂವರೆ ವರ್ಷ ರಾಜಕೀಯ ಮಾಡಿದವರಿಗೆ ಬದ್ಧತೆ ಇಲ್ಲ. ಸದಾ ಅಧಿಕಾರ ಸಿಗುವ ಜಾಗಕ್ಕೆ ಹಾರುತ್ತಾರೆ ಎಂದು ಯುವ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಟೀಕಿಸಿದರು.</p>.<p>ಸುದ್ದಿಗಾರರ ಜತೆ ಬುಧವಾರ ಮಾತನಾಡಿದ ಅವರು, 136 ಶಾಸಕರಿರುವ ಕಾಂಗ್ರೆಸ್ಗೆ ಚನ್ನಪಟ್ಟಣದಲ್ಲಿ ಕಣಕ್ಕಿಳಿಸಲು ಅಭ್ಯರ್ಥಿಯೇ ಇಲ್ಲ. ಬಿಜೆಪಿ ತೊರೆಯಲು ಯೋಗೇಶ್ವರ್ ಅವರಿಗೆ ಕುಮ್ಮಕ್ಕು ಕೊಟ್ಟಿದ್ದು ಯಾರು ಎಂದು ರಾಜ್ಯದ ಜನರಿಗೆ ಗೊತ್ತಾಗಿದೆ ಎಂದರು.</p>.<p>ಬಿಜೆಪಿ–ಜೆಡಿಎಸ್ನ ಯಾವ ನಾಯಕರಿಂದಲೂ ಯೋಗೇಶ್ವರ್ ಅವರು ಪಕ್ಷ ತೊರೆಯುವಂತಹ ತಪ್ಪು ನಡೆದಿಲ್ಲ. ಜೆಡಿಎಸ್ ಟಿಕೆಟ್ ಕೊಡುವ ಭರವಸೆ ನೀಡಿದರೂ ಆವರಿಗೆ ಬೇಕಿರಲಿಲ್ಲ. ಎರಡೂ ತಿಂಗಳಿನಿಂದಲೂ ಅವರು ಕಾಂಗ್ರೆಸ್ ಸಂಪರ್ಕದಲ್ಲಿದ್ದರು ಎಂದು ಆರೋಪಿಸಿದರು.</p>.<h2>ಕಾಂಗ್ರೆಸ್ಗೆ ಕುಮಾರಸ್ವಾಮಿಯೇ ಟಾರ್ಗೆಟ್</h2>.<p>ಕಾಂಗ್ರೆಸ್ಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಯೇ ಟಾರ್ಗೆಟ್. ಲೋಕಸಭಾ ಚುನಾವಣೆಯ ಫಲಿತಾಂಶ ಅವರ ನಿದ್ದೆಗೆಡಿಸಿದೆ. ಅದಕ್ಕಾಗಿ ರಾಜಕೀಯ ಪಿತೂರಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಎರಡೂವರೆ ವರ್ಷ ರಾಜಕೀಯ ಮಾಡಿದವರಿಗೆ ಬದ್ಧತೆ ಇಲ್ಲ. ಸದಾ ಅಧಿಕಾರ ಸಿಗುವ ಜಾಗಕ್ಕೆ ಹಾರುತ್ತಾರೆ ಎಂದು ಯುವ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಟೀಕಿಸಿದರು.</p>.<p>ಸುದ್ದಿಗಾರರ ಜತೆ ಬುಧವಾರ ಮಾತನಾಡಿದ ಅವರು, 136 ಶಾಸಕರಿರುವ ಕಾಂಗ್ರೆಸ್ಗೆ ಚನ್ನಪಟ್ಟಣದಲ್ಲಿ ಕಣಕ್ಕಿಳಿಸಲು ಅಭ್ಯರ್ಥಿಯೇ ಇಲ್ಲ. ಬಿಜೆಪಿ ತೊರೆಯಲು ಯೋಗೇಶ್ವರ್ ಅವರಿಗೆ ಕುಮ್ಮಕ್ಕು ಕೊಟ್ಟಿದ್ದು ಯಾರು ಎಂದು ರಾಜ್ಯದ ಜನರಿಗೆ ಗೊತ್ತಾಗಿದೆ ಎಂದರು.</p>.<p>ಬಿಜೆಪಿ–ಜೆಡಿಎಸ್ನ ಯಾವ ನಾಯಕರಿಂದಲೂ ಯೋಗೇಶ್ವರ್ ಅವರು ಪಕ್ಷ ತೊರೆಯುವಂತಹ ತಪ್ಪು ನಡೆದಿಲ್ಲ. ಜೆಡಿಎಸ್ ಟಿಕೆಟ್ ಕೊಡುವ ಭರವಸೆ ನೀಡಿದರೂ ಆವರಿಗೆ ಬೇಕಿರಲಿಲ್ಲ. ಎರಡೂ ತಿಂಗಳಿನಿಂದಲೂ ಅವರು ಕಾಂಗ್ರೆಸ್ ಸಂಪರ್ಕದಲ್ಲಿದ್ದರು ಎಂದು ಆರೋಪಿಸಿದರು.</p>.<h2>ಕಾಂಗ್ರೆಸ್ಗೆ ಕುಮಾರಸ್ವಾಮಿಯೇ ಟಾರ್ಗೆಟ್</h2>.<p>ಕಾಂಗ್ರೆಸ್ಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಯೇ ಟಾರ್ಗೆಟ್. ಲೋಕಸಭಾ ಚುನಾವಣೆಯ ಫಲಿತಾಂಶ ಅವರ ನಿದ್ದೆಗೆಡಿಸಿದೆ. ಅದಕ್ಕಾಗಿ ರಾಜಕೀಯ ಪಿತೂರಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>