ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿವರ್ಷ ₹5,000 ಕೋಟಿ ನೀಡುವುದಾಗಿ ಪಕ್ಷದ ಪ್ರಣಾಳಿಕೆಯಲ್ಲಿ ನೀಡಿದ ಭರವಸೆ ಈಡೇರಿಲ್ಲ. ಬಳ್ಳಾರಿಯಲ್ಲಿ ‘ಜವಳಿ ಪಾರ್ಕ್’ ಸ್ಥಾಪಿಸಲು ಕ್ರಮ ಕೈಗೊಂಡಿಲ್ಲ, ಕಲ್ಯಾಣ ಕರ್ನಾಟಕ ಭಾಗದಲ್ಲಿ 41 ವಿಧಾನಸಭಾ ಕ್ಷೇತ್ರಗಳಲ್ಲಿ ಕನಿಷ್ಠ 100 ಪಿಯು ಕಾಲೇಜು, ಒಂದು ಮಹಿಳಾ ಪದವಿ ಕಾಲೇಜು ಸ್ಥಾಪಿಸುವ ಭರವಸೆ ಹಾಗೆ ಉಳಿದಿದೆ ಎಂದು ಹೇಳಿದರು.