ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತಿಸಾರ: ರಾಜ್ಯದಲ್ಲಿ ಒಂದೇ ವಾರದಲ್ಲಿ 4,210 ಪ್ರಕರಣಗಳು ದೃಢ

Published 30 ಏಪ್ರಿಲ್ 2024, 16:15 IST
Last Updated 30 ಏಪ್ರಿಲ್ 2024, 16:15 IST
ಅಕ್ಷರ ಗಾತ್ರ

ಬೆಂಗಳೂರು: ತಾಪಮಾನ ಏರಿಕೆ, ಕಲುಷಿತ ನೀರು ಮತ್ತು ಆಹಾರ ಸೇವನೆಯಿಂದ ರಾಜ್ಯದಲ್ಲಿ ಅತಿಸಾರ (ಡಯೇರಿಯಾ) ಪ್ರಕರಣಗಳು ಏರಿಕೆಯಾಗಿದ್ದು, ಕಳೆದೊಂದು ವಾರದಲ್ಲಿ 4,210 ಪ್ರಕರಣಗಳು ದೃಢಪಟ್ಟಿವೆ.

ಆರೋಗ್ಯ ಇಲಾಖೆ ಮಾಹಿತಿ ಪ‍್ರಕಾರ ಈ ವರ್ಷ ವರದಿಯಾದ ಒಟ್ಟು ಅತಿಸಾರ ಪ್ರಕರಣಗಳ ಸಂಖ್ಯೆ 52,309ಕ್ಕೆ ಏರಿಕೆಯಾಗಿದೆ. ಇಲಾಖೆಯು ಸೋಂಕು ರೋಗಗಳ ವರದಿಯನ್ನು ಬಿಡುಗಡೆ ಮಾಡಿದ್ದು, ಮಾರ್ಚ್ ಬಳಿಕ ಅತಿಸಾರ ಪ್ರಕರಣಗಳಲ್ಲಿ ಗಣನೀಯ ಹೆಚ್ಚಳವಾಗಿದೆ.

ನಾಯಿ ಹಾಗೂ ಹಾವು ಕಡಿತ ಪ್ರಕರಣಗಳೂ ಏರಿಕೆ ಕಂಡಿವೆ. ಕಳೆದೊಂದು ವಾರದಲ್ಲಿ 7,455 ಮಂದಿ ನಾಯಿ ಕಡಿತಕ್ಕೆ ಒಳಗಾಗಿದ್ದಾರೆ. ಈವರೆಗೆ ವರದಿಯಾದ ಒಟ್ಟು ಪ್ರಕರಣಗಳ ಸಂಖ್ಯೆ 1.06 ಲಕ್ಷಕ್ಕೆ ತಲುಪಿದೆ. ವಾರದಲ್ಲಿ 178 ಹಾವು ಕಡಿತ ಪ್ರಕರಣ ವರದಿಯಾಗಿದ್ದು, ಐವರು ಮೃತಪಟ್ಟಿರುವುದು ದೃಢಪಟ್ಟಿದೆ. ಈವರೆಗೆ ವರದಿಯಾದ ಒಟ್ಟು ಹಾವು ಕಡಿತ ಪ್ರಕರಣಗಳು 2,234ಕ್ಕೆ ಏರಿಕೆಯಾಗಿದೆ. 16 ಮಂದಿ ಹಾವು ಕಡಿತದಿಂದ ಮೃತಪಟ್ಟಿದ್ದಾರೆ.

ವಾರದಲ್ಲಿ 94 ಡೆಂಗಿ ಹಾಗೂ 27 ಚಿಕೂನ್‌ಗುನ್ಯ ಪ್ರಕರಣಗಳು ದೃಢಪಟ್ಟಿವೆ. ಈ ಪ್ರಕರಣಗಳ ಒಟ್ಟು ಸಂಖ್ಯೆ ಕ್ರಮವಾಗಿ 2,392 ಹಾಗೂ 543ಕ್ಕೆ ತಲುಪಿದೆ.

ಪ್ರಾಣಿಗಳ ಮೂಲಕ ಹರಡುವ ಬ್ಯಾಕ್ಟೀರಿಯಾ ಸೋಂಕು (ಲೆಪ್ಟೊಸ್ಪಿರೋಸಿಸ್) ವಾರದಲ್ಲಿ 15 ಮಂದಿಗೆ ದೃಢಪಟ್ಟಿದೆ. ಈವರೆಗೆ ಒಟ್ಟು 356 ಮಂದಿ ಸೋಂಕಿತರಾಗಿದ್ದಾರೆ. ಮಂಗನ ಕಾಯಿಲೆಯೂ (ಕೆಎಫ್‌ಡಿ) ವಾರದಲ್ಲಿ ಎಂಟು ಮಂದಿಯಲ್ಲಿ ಖಚಿತಪಟ್ಟಿದೆ. ಒಟ್ಟು ಕೆಎಫ್‌ಡಿ ಪ್ರಕರಣಗಳ ಸಂಖ್ಯೆ 316ಕ್ಕೆ ಏರಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT