ಪರಿಷ್ಕೃತ ಡಿಪಿಆರ್ ಸಿದ್ಧ: ಬಿಜೆಪಿಯ ಕುಮಾರ್ ಬಂಗಾರಪ್ಪ ಪ್ರಶ್ನೆಗೆ ಉತ್ತರಿಸಿದ ಮಾಧುಸ್ವಾಮಿ, ‘ದಂಡಾವತಿ ನದಿಗೆ ‘ಬ್ರಿಡ್ಜ್ ಕಂ ಬ್ಯಾರೇಜ್’ ನಿರ್ಮಿಸಿ ಸೊರಬ ಮತ್ತು ಶಿಕಾರಿಪುರ ತಾಲ್ಲೂಕಿನ 9,700 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಕಲ್ಪಿಸಲು ಹಾಗೂ ಸುತ್ತಲಿನ ಕೆರೆಗಳನ್ನು ಭರ್ತಿ ಮಾಡಲು ಪರಿಷ್ಕೃತ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲಾಗಿದೆ. ಕರ್ನಾಟಕ ನೀರಾವರಿ ನಿಗಮವು ಡಿಪಿಆರ್ ಪರಿಶೀಲಿಸುತ್ತಿದೆ’ ಎಂದರು.