<p><strong>ಬೆಂಗಳೂರು</strong>: ‘ಎತ್ತಿನ ಹೊಳೆ ಯೋಜನೆಗೆ ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ಬಿಜೆಪಿ ಸರ್ಕಾರ ಅನುದಾನ ನೀಡಿಲ್ಲ. ಹೀಗಾಗಿ ಯೋಜನೆ ಸ್ಥಗಿತಗೊಂಡಿತ್ತು. ನಮ್ಮ ಸರ್ಕಾರ ಯೋಜನೆಯ ಕೆಲಸವನ್ನು ಮತ್ತೆ ಆರಂಭಿಸಿದೆ’ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.</p>.<p>ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಎತ್ತಿನಹೊಳೆ ಯೋಜನೆ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಎರಡು ವರ್ಷದ ಒಳಗೆ ಯೋಜನೆಯನ್ನು ಪೂರ್ಣಗೊಳಿಸಲಾಗುವುದು’ ಎಂದರು.</p>.<p>‘ಎತ್ತಿನಹೊಳೆ ಯೋಜನೆಗೆ ಆರಂಭದಲ್ಲಿ ₹ 13,500 ಸಾವಿರ ಕೋಟಿ ವೆಚ್ಚ ಅಂದಾಜಿಸಲಾಗಿತ್ತು. ಅಂದಾಜು ವೆಚ್ಚ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ಪ್ರಸ್ತುತ ₹ 22 ಸಾವಿರ ಕೋಟಿ ಅಂದಾಜಿಸಲಾಗಿದೆ. ಈ ಹಿಂದಿನ ಅವಧಿಯಲ್ಲಿ ಬಿಜೆಪಿ ಸರ್ಕಾರ ಅನುದಾನ ನೀಡಿಲ್ಲ. ಇದೇ ಕಾರಣದಿಂದ ಕಾಮಗಾರಿ ಸ್ಥಗಿತಗೊಂಡಿತ್ತು’ ಎಂದರು.</p>.<p>‘ಈಗ ನಮ್ಮ ಸರ್ಕಾರವು ಅನುದಾನ ಬಿಡುಗಡೆ ಮಾಡಿದೆ. ಯೋಜನೆಯಲ್ಲಿ ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸಲಾಗುವುದು. ನೀರು ಸಂಗ್ರಹಿಸುವ ಟ್ಯಾಂಕ್ ನಿರ್ಮಿಸಲು ಕೊರಟಗೆರೆ ರೈತರು ನೀಡಿರುವ ಭೂಮಿಗೆ ಎಕರೆಗೆ ₹ 8 ಲಕ್ಷ ಹಾಗೂ ದೊಡ್ಡಬಳ್ಳಾಪುರದಲ್ಲಿ ಭೂಮಿಗೆ ಎಕರೆಗೆ ₹ 32 ಲಕ್ಷ ಪರಿಹಾರ ನಿಗದಿಪಡಿಸಲಾಗಿದೆ. ಎಲ್ಲ ರೈತರಿಗೂ ಸಮಾನ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಲಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಎತ್ತಿನ ಹೊಳೆ ಯೋಜನೆಗೆ ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ಬಿಜೆಪಿ ಸರ್ಕಾರ ಅನುದಾನ ನೀಡಿಲ್ಲ. ಹೀಗಾಗಿ ಯೋಜನೆ ಸ್ಥಗಿತಗೊಂಡಿತ್ತು. ನಮ್ಮ ಸರ್ಕಾರ ಯೋಜನೆಯ ಕೆಲಸವನ್ನು ಮತ್ತೆ ಆರಂಭಿಸಿದೆ’ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.</p>.<p>ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಎತ್ತಿನಹೊಳೆ ಯೋಜನೆ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಎರಡು ವರ್ಷದ ಒಳಗೆ ಯೋಜನೆಯನ್ನು ಪೂರ್ಣಗೊಳಿಸಲಾಗುವುದು’ ಎಂದರು.</p>.<p>‘ಎತ್ತಿನಹೊಳೆ ಯೋಜನೆಗೆ ಆರಂಭದಲ್ಲಿ ₹ 13,500 ಸಾವಿರ ಕೋಟಿ ವೆಚ್ಚ ಅಂದಾಜಿಸಲಾಗಿತ್ತು. ಅಂದಾಜು ವೆಚ್ಚ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ಪ್ರಸ್ತುತ ₹ 22 ಸಾವಿರ ಕೋಟಿ ಅಂದಾಜಿಸಲಾಗಿದೆ. ಈ ಹಿಂದಿನ ಅವಧಿಯಲ್ಲಿ ಬಿಜೆಪಿ ಸರ್ಕಾರ ಅನುದಾನ ನೀಡಿಲ್ಲ. ಇದೇ ಕಾರಣದಿಂದ ಕಾಮಗಾರಿ ಸ್ಥಗಿತಗೊಂಡಿತ್ತು’ ಎಂದರು.</p>.<p>‘ಈಗ ನಮ್ಮ ಸರ್ಕಾರವು ಅನುದಾನ ಬಿಡುಗಡೆ ಮಾಡಿದೆ. ಯೋಜನೆಯಲ್ಲಿ ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸಲಾಗುವುದು. ನೀರು ಸಂಗ್ರಹಿಸುವ ಟ್ಯಾಂಕ್ ನಿರ್ಮಿಸಲು ಕೊರಟಗೆರೆ ರೈತರು ನೀಡಿರುವ ಭೂಮಿಗೆ ಎಕರೆಗೆ ₹ 8 ಲಕ್ಷ ಹಾಗೂ ದೊಡ್ಡಬಳ್ಳಾಪುರದಲ್ಲಿ ಭೂಮಿಗೆ ಎಕರೆಗೆ ₹ 32 ಲಕ್ಷ ಪರಿಹಾರ ನಿಗದಿಪಡಿಸಲಾಗಿದೆ. ಎಲ್ಲ ರೈತರಿಗೂ ಸಮಾನ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಲಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>