ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಲೈಂಗಿಕ ಕಿರುಕುಳ: CM ಸಿದ್ದರಾಮಯ್ಯ ಭೇಟಿ ಮಾಡಿ ಸಮಿತಿ ರಚಿಸುವಂತೆ ಕಲಾವಿದರ ಮನವಿ

Published : 5 ಸೆಪ್ಟೆಂಬರ್ 2024, 6:32 IST
Last Updated : 5 ಸೆಪ್ಟೆಂಬರ್ 2024, 6:32 IST
ಫಾಲೋ ಮಾಡಿ
Comments

ಬೆಂಗಳೂರು: ಸಾಮಾಜಿಕ ಕಾರ್ಯಕರ್ತ, ನಟ ಚೇತನ್ ನೇತೃತ್ವದಲ್ಲಿ 'ಫೈರ್' ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರುವಾರ ಭೇಟಿ ಮಾಡಿ, ಕೇರಳದ ನ್ಯಾಯಮೂರ್ತಿ ಹೇಮಾ ಸಮಿತಿ ಮಾದರಿಯಲ್ಲಿ ಕರ್ನಾಟದಲ್ಲೂ ಕನ್ನಡ ಚಿತ್ರೋದ್ಯಮದಲ್ಲಿ ಕಲಾವಿದೆಯರ ಮೇಲೆ ಆಗುತ್ತಿರುವ ಶೋಷಣೆಯ ಅಧ್ಯಯನಕ್ಕೆ ಸಮಿತಿ ರಚಿಸುವಂತೆ ಮನವಿ ಸಲ್ಲಿಸಿತು.

ಚೇತನ್ ಜೊತೆ ನಟಿ ಶೃತಿ ಹರಿಹರನ್ ಕೂಡಾ ಇದ್ದರು.

ಕನ್ನಡ ಚಿತ್ರರಂಗದಲ್ಲಿ ಮಹಿಳೆಯರ ಸಮಸ್ಯೆ ಅಧ್ಯಯನಕ್ಕೆ ಮಾಡಬೇಕು. ಚಿತ್ರರಂಗದಲ್ಲಿನ ಲೈಂಗಿಕ ಶೋಷಣೆ ತಡೆಗಟ್ಟುವ ಸಲುವಾಗಿ ಸಮಿತಿ ರಚಿಸಬೇಕು ಎಂದೂ ನಿಯೋಗ ಒತ್ತಾಯಿಸಿದೆ.

ಈಗಾಗಲೇ ಫೈರ್ ಸಂಸ್ಥೆ 130ಕ್ಕೂ ಮಂದಿ ಸಹಿ ಮಾಡಿರುವ ಪತ್ರವನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT