<p><strong>ಬೆಂಗಳೂರು:</strong> ಸೇವಾಭದ್ರತೆಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ತುಮಕೂರಿನಿಂದ ಆರಂಭಿಸಿದ್ದ ಪಾದಯಾತ್ರೆಯನ್ನು ಬೆಂಗಳೂರು ಪ್ರವೇಶಕ್ಕೂ ಮೊದಲೇ ತಡೆದ ಪೊಲೀಸರು, ಎಲ್ಲರನ್ನೂ ವಶಕ್ಕೆ ಪಡೆದರು.</p>.<p>ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಎಲ್ಲ ಅತಿಥಿ ಉಪನ್ಯಾಸಕರನ್ನೂ ಬಸ್ಗಳಲ್ಲಿ ಕರೆತಂದು ಸ್ವಾತಂತ್ರ್ಯ ಉದ್ಯಾನದ ಬಳಿ ಇಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಘಟನೆಯ ಐವರು ಮುಖಂಡರನ್ನು ಸಂಜೆ ಮಾತುಕತೆಗೆ ಆಹ್ವಾನಿಸಿದ್ದರು. ಆದರೆ, ಕೊನೆಗಳಿಗೆಯಲ್ಲಿ ಸಭೆ ಮುಂದೂಡಲಾಯಿತು ಎಂದು ಅತಿಥಿ ಉಪನ್ಯಾಸಕ ರಾಘವೇಂದ್ರ ಮಾಹಿತಿ ನೀಡಿದರು. </p>.<p>ಅತಿಥಿ ಉಪನ್ಯಾಸಕರು ಸೇವಾಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನ.23ರಿಂದ ಮುಷ್ಕರ ನಡೆಸುತ್ತಿದ್ದಾರೆ. ಈ ಮಧ್ಯೆ ಸರ್ಕಾರ ₹5 ಸಾವಿರಕ್ಕೆ ಗೌರವಧನ ಹೆಚ್ಚಳ, ಕನಿಷ್ಠ 10 ವರ್ಷ ಸೇವೆ ಸಲ್ಲಿಸಿ, 60 ವರ್ಷಕ್ಕೆ ನಿವೃತ್ತರಾಗುವವರಿಗೆ ₹5 ಲಕ್ಷ ಧನಸಹಾಯ, ಆರೋಗ್ಯವಿಮೆ ಹಾಗೂ ಪ್ರತಿ ತಿಂಗಳು ಒಂದು ರಜೆ ನೀಡುವ ಘೋಷಣೆ ಮಾಡಿತ್ತು.</p>.<p>ಉನ್ನತ ಶಿಕ್ಷಣ ಸಚಿವರು ಘೋಷಿಸಿದ ಭರವಸೆಗಳನ್ನು ತಿರಸ್ಕರಿಸಿ, ಜ.1ರಿಂದ ಪಾದಯಾತ್ರೆ ಆರಂಭಿಸಿದ್ದರು. ಮೂರನೇ ದಿನ ನೆಲಮಂಗಲದಿಂದ ಹೊರಟ ಪಾದಯಾತ್ರೆ ಬೆಂಗಳೂರು ಪ್ರವೇಶಿಸಬೇಕಿತ್ತು. ನಾಗಸಂದ್ರದ ಬಳಿ ಅವರನ್ನು ತಡೆಯಲಾಯಿತು.</p>.<p><strong>ಧರಣಿ ಮುಂದುವರಿಕೆ:</strong> </p>.<p>ಸ್ವಾತಂತ್ರ್ಯ ಉದ್ಯಾನದಲ್ಲಿ ಧರಣಿ ಆರಂಭಿಸಲಿದ್ದು, ಬೇಡಿಕೆ ಈಡೇರುವರೆಗೂ ಮುಂದುವರಿಸಲಾಗುವುದು. ಸೇವಾಭದ್ರತೆ ಸಿಗುವವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದು ಅತಿಥಿ ಉಪನ್ಯಾಸಕರ ಸಂಘದ ಮುಖಂಡರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸೇವಾಭದ್ರತೆಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ತುಮಕೂರಿನಿಂದ ಆರಂಭಿಸಿದ್ದ ಪಾದಯಾತ್ರೆಯನ್ನು ಬೆಂಗಳೂರು ಪ್ರವೇಶಕ್ಕೂ ಮೊದಲೇ ತಡೆದ ಪೊಲೀಸರು, ಎಲ್ಲರನ್ನೂ ವಶಕ್ಕೆ ಪಡೆದರು.</p>.<p>ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಎಲ್ಲ ಅತಿಥಿ ಉಪನ್ಯಾಸಕರನ್ನೂ ಬಸ್ಗಳಲ್ಲಿ ಕರೆತಂದು ಸ್ವಾತಂತ್ರ್ಯ ಉದ್ಯಾನದ ಬಳಿ ಇಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಘಟನೆಯ ಐವರು ಮುಖಂಡರನ್ನು ಸಂಜೆ ಮಾತುಕತೆಗೆ ಆಹ್ವಾನಿಸಿದ್ದರು. ಆದರೆ, ಕೊನೆಗಳಿಗೆಯಲ್ಲಿ ಸಭೆ ಮುಂದೂಡಲಾಯಿತು ಎಂದು ಅತಿಥಿ ಉಪನ್ಯಾಸಕ ರಾಘವೇಂದ್ರ ಮಾಹಿತಿ ನೀಡಿದರು. </p>.<p>ಅತಿಥಿ ಉಪನ್ಯಾಸಕರು ಸೇವಾಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನ.23ರಿಂದ ಮುಷ್ಕರ ನಡೆಸುತ್ತಿದ್ದಾರೆ. ಈ ಮಧ್ಯೆ ಸರ್ಕಾರ ₹5 ಸಾವಿರಕ್ಕೆ ಗೌರವಧನ ಹೆಚ್ಚಳ, ಕನಿಷ್ಠ 10 ವರ್ಷ ಸೇವೆ ಸಲ್ಲಿಸಿ, 60 ವರ್ಷಕ್ಕೆ ನಿವೃತ್ತರಾಗುವವರಿಗೆ ₹5 ಲಕ್ಷ ಧನಸಹಾಯ, ಆರೋಗ್ಯವಿಮೆ ಹಾಗೂ ಪ್ರತಿ ತಿಂಗಳು ಒಂದು ರಜೆ ನೀಡುವ ಘೋಷಣೆ ಮಾಡಿತ್ತು.</p>.<p>ಉನ್ನತ ಶಿಕ್ಷಣ ಸಚಿವರು ಘೋಷಿಸಿದ ಭರವಸೆಗಳನ್ನು ತಿರಸ್ಕರಿಸಿ, ಜ.1ರಿಂದ ಪಾದಯಾತ್ರೆ ಆರಂಭಿಸಿದ್ದರು. ಮೂರನೇ ದಿನ ನೆಲಮಂಗಲದಿಂದ ಹೊರಟ ಪಾದಯಾತ್ರೆ ಬೆಂಗಳೂರು ಪ್ರವೇಶಿಸಬೇಕಿತ್ತು. ನಾಗಸಂದ್ರದ ಬಳಿ ಅವರನ್ನು ತಡೆಯಲಾಯಿತು.</p>.<p><strong>ಧರಣಿ ಮುಂದುವರಿಕೆ:</strong> </p>.<p>ಸ್ವಾತಂತ್ರ್ಯ ಉದ್ಯಾನದಲ್ಲಿ ಧರಣಿ ಆರಂಭಿಸಲಿದ್ದು, ಬೇಡಿಕೆ ಈಡೇರುವರೆಗೂ ಮುಂದುವರಿಸಲಾಗುವುದು. ಸೇವಾಭದ್ರತೆ ಸಿಗುವವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದು ಅತಿಥಿ ಉಪನ್ಯಾಸಕರ ಸಂಘದ ಮುಖಂಡರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>