ಸುದ್ದಿಗಾರರ ಜೊತೆ ಶುಕ್ರವಾರ ಮಾತನಾಡಿದ ಅವರು, ‘ಮುಖ್ಯಮಂತ್ರಿ ಪತ್ನಿ ಹೆಸರಿಗೆ ನಿವೇಶನ ಹಂಚಿಕೆಯಾಗಿರುವ ಮೈಸೂರಿನ ‘ಮುಡಾ’ ಪ್ರಕರಣ ಹೊರಬರುವಲ್ಲಿ ಉಪ ಮುಖ್ಯಮಂತ್ರಿ ಕೈವಾಡವಿದೆ. ಆಗ ಸಿ.ಡಿ ಆಯಿತು, ಈಗ ಮುಡಾ ಫ್ಯಾಕ್ಟರಿ ಹೊರಬರುತ್ತಿದೆ’ ಎಂಬ ಕುಮಾರಸ್ವಾಮಿ ಆರೋಪ ಆಧಾರ ರಹಿತ. ಹುಚ್ಚು ಹಿಡಿದಿರುವ ಕಾರಣ ಅವರು ಈ ರೀತಿ ಸುಳ್ಳು ಆರೋಪ ಮಾಡುತ್ತಿದ್ದಾರೆ’ ಎಂದು ದೂರಿದರು.