<p><strong>ಸಂಗೊಳ್ಳಿ (ಬೆಳಗಾವಿ ಜಿಲ್ಲೆ):</strong> ಅವನೊಬ್ಬ ಮೂರ್ಖ, ದೇಶಪ್ರೇಮ ಎಂದು ಏನೇನೋ ಮಾತನಾಡುತ್ತಾನೆ. ದೇಶದಲ್ಲಿ ಎಲ್ಲೆಲ್ಲಿ ಅತಿಕ್ರಮಿಸಿದ ಮಸೀದಿ ಇವೆಯೋ ಅವುಗಳನ್ನೆಲ್ಲ ಒಡೆದು ದೇವಸ್ಥಾನ ಕಟ್ಟುತ್ತೇವೆ ಎನ್ನುತ್ತಾನೆ. ಮೂರ್ಖ; ಮೊದಲು ದೇಶದ ಇತಿಹಾಸ ತಿಳಿದುಕೊ' ಎಂದೂ ಸಿದ್ದರಾಮಯ್ಯ ಯಾರ ಹೆಸರು ಹೇಳದೆಯೇ ಟೀಕಿಸಿದರು.</p><p>ಬೈಲಹೊಂಗಲ ತಾಲ್ಲೂಕಿನ ಸಂಗೊಳ್ಳಿಯಲ್ಲಿ ಸಂಗೊಳ್ಳಿ ರಾಯಣ್ಣ ಉತ್ಸವ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ, ಸಮುದಾಯ ಭವನ, ಭೋಜನಾಲಯ ಹಾಗೂ ಶಿಲ್ಪವನಗಳನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು.</p><p>'ಎಲ್ಲ ಜಾತಿಯವರನ್ನೂ, ಎಲ್ಲ ಧರ್ಮದವರನ್ನೂ ಸಮಾನವಾಗಿ ಕಾಣಬೇಕು. ನಾವೆಲ್ಲರೂ ಭಾರತೀಯರು. ಸಮಾನವಾಗಿ ಬಾಳಬೇಕು. ಆಗಮಾತ್ರ ಈ ದೇಶದ ಸಾರ್ವಭೌಮತ್ವ ಉಳಿಯುತ್ತದೆ' ಎಂದು ಕಿವಿಮಾತು ಹೇಳಿದರು.</p><p>'ನಾವೆಲ್ಲ ಸಂಗೊಳ್ಳಿ ರಾಯಣ್ಣ ಆಗಲು ಸಾಧ್ಯವಿಲ್ಲ. ಆದರೆ ಅವನ ಆದರ್ಶಗಳನ್ನು ರೂಢಿಸಿಕೊಳ್ಳಬಹುದು' ಎಂದೂ ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂಗೊಳ್ಳಿ (ಬೆಳಗಾವಿ ಜಿಲ್ಲೆ):</strong> ಅವನೊಬ್ಬ ಮೂರ್ಖ, ದೇಶಪ್ರೇಮ ಎಂದು ಏನೇನೋ ಮಾತನಾಡುತ್ತಾನೆ. ದೇಶದಲ್ಲಿ ಎಲ್ಲೆಲ್ಲಿ ಅತಿಕ್ರಮಿಸಿದ ಮಸೀದಿ ಇವೆಯೋ ಅವುಗಳನ್ನೆಲ್ಲ ಒಡೆದು ದೇವಸ್ಥಾನ ಕಟ್ಟುತ್ತೇವೆ ಎನ್ನುತ್ತಾನೆ. ಮೂರ್ಖ; ಮೊದಲು ದೇಶದ ಇತಿಹಾಸ ತಿಳಿದುಕೊ' ಎಂದೂ ಸಿದ್ದರಾಮಯ್ಯ ಯಾರ ಹೆಸರು ಹೇಳದೆಯೇ ಟೀಕಿಸಿದರು.</p><p>ಬೈಲಹೊಂಗಲ ತಾಲ್ಲೂಕಿನ ಸಂಗೊಳ್ಳಿಯಲ್ಲಿ ಸಂಗೊಳ್ಳಿ ರಾಯಣ್ಣ ಉತ್ಸವ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ, ಸಮುದಾಯ ಭವನ, ಭೋಜನಾಲಯ ಹಾಗೂ ಶಿಲ್ಪವನಗಳನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು.</p><p>'ಎಲ್ಲ ಜಾತಿಯವರನ್ನೂ, ಎಲ್ಲ ಧರ್ಮದವರನ್ನೂ ಸಮಾನವಾಗಿ ಕಾಣಬೇಕು. ನಾವೆಲ್ಲರೂ ಭಾರತೀಯರು. ಸಮಾನವಾಗಿ ಬಾಳಬೇಕು. ಆಗಮಾತ್ರ ಈ ದೇಶದ ಸಾರ್ವಭೌಮತ್ವ ಉಳಿಯುತ್ತದೆ' ಎಂದು ಕಿವಿಮಾತು ಹೇಳಿದರು.</p><p>'ನಾವೆಲ್ಲ ಸಂಗೊಳ್ಳಿ ರಾಯಣ್ಣ ಆಗಲು ಸಾಧ್ಯವಿಲ್ಲ. ಆದರೆ ಅವನ ಆದರ್ಶಗಳನ್ನು ರೂಢಿಸಿಕೊಳ್ಳಬಹುದು' ಎಂದೂ ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>