<p><strong>ಬೆಂಗಳೂರು:</strong> ‘ಅಶೋಕ್ ಅವರೇ, ನಿಮಗೆ ಮತ್ತು ನಿಮ್ಮ ಪಕ್ಷಕ್ಕೆ ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಯಾಕೆ ಇಷ್ಟೊಂದು ಸಿಟ್ಟು, ಮತ್ಸರ. ಅದರ ಫಲಾನುಭವಿಗಳಾದ ಬಡವರು, ಮಹಿಳೆಯರು, ಯುವಜನರ ಬಗ್ಗೆ ಯಾಕೆ ಇಷ್ಟೊಂದು ದ್ವೇಷ, ಅಸಹನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.</p>.<p>ಅಶೋಕ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ, ‘ಅಶೋಕ ಅವರು ಆಗಾಗ ತಮ್ಮ ಅಜ್ಞಾನದ ಪ್ರದರ್ಶನ ಮಾಡುತ್ತಾ ಮನರಂಜನೆ ನೀಡುತ್ತಿರುತ್ತಾರೆ’ ಎಂದು ಗೇಲಿ ಮಾಡಿದ್ದಾರೆ.</p>.<p>‘ರಾಜ್ಯದ ಜನತೆಯ ಜೊತೆಗೆ ದೇಶದ ಜನತೆ ಸೋಲಿಸಿದ್ದು ಮೋದಿ ಗ್ಯಾರಂಟಿಗಳನ್ನೇ, ಹೊರತು ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳನ್ನಲ್ಲ. ಕಳೆದ ಲೋಕಸಭಾ ಚುನಾವಣೆಗಿಂತ ಶೇ 13ರಷ್ಟು ಹೆಚ್ಚು ಮತಗಳನ್ನು ರಾಜ್ಯದ ಮತದಾರರು ಈ ಬಾರಿ ನಮಗೆ ನೀಡಿದ್ದಾರೆ. ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ನಡುವಿನ ಮತ ಪ್ರಮಾಣದ ಅಂತರ ಕೇವಲ 0.63. ಈಗ ಹೇಳಿ ಗೆದ್ದವರು ಯಾರು. ಸೋತವರು ಯಾರು’ ಎಂದೂ ಕೇಳಿದ್ದಾರೆ.</p>.<p>‘ಜೆಡಿಎಸ್ ಪಕ್ಷದ ಪಾದಕ್ಕೆ ಬಿದ್ದರೂ, 26 ಸ್ಥಾನಗಳಿಂದ 17 ಸ್ಥಾನಕ್ಕೆ ಬಿಜೆಪಿ ಕುಸಿಯುವುದನ್ನು ತಪ್ಪಿಸಲು ನಿಮಗೆ ಆಗಲಿಲ್ಲ. ಒಂದು ಸ್ಥಾನದಿಂದ ಒಂಬತ್ತು ಸ್ಥಾನಕ್ಕೆ ನಾವು ಏರುವುದನ್ನೂ ತಪ್ಪಿಸಲಾಗಲಿಲ್ಲ. ಮೊದಲು ನಿಮ್ಮ ಸೋಲಿಗೆ ಆತ್ಮಾವಲೋಕನ ಮಾಡಿಕೊಳ್ಳಿ. ಆ ಮೇಲೆ ಕಾಂಗ್ರೆಸ್ ಪಕ್ಷದ ಚುನಾವಣಾ ಫಲಿತಾಂಶದ ವಿಶ್ಲೇಷಣೆ ನಡೆಸಿ’ ಎಂದೂ ಕುಟುಕಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಅಶೋಕ್ ಅವರೇ, ನಿಮಗೆ ಮತ್ತು ನಿಮ್ಮ ಪಕ್ಷಕ್ಕೆ ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಯಾಕೆ ಇಷ್ಟೊಂದು ಸಿಟ್ಟು, ಮತ್ಸರ. ಅದರ ಫಲಾನುಭವಿಗಳಾದ ಬಡವರು, ಮಹಿಳೆಯರು, ಯುವಜನರ ಬಗ್ಗೆ ಯಾಕೆ ಇಷ್ಟೊಂದು ದ್ವೇಷ, ಅಸಹನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.</p>.<p>ಅಶೋಕ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ, ‘ಅಶೋಕ ಅವರು ಆಗಾಗ ತಮ್ಮ ಅಜ್ಞಾನದ ಪ್ರದರ್ಶನ ಮಾಡುತ್ತಾ ಮನರಂಜನೆ ನೀಡುತ್ತಿರುತ್ತಾರೆ’ ಎಂದು ಗೇಲಿ ಮಾಡಿದ್ದಾರೆ.</p>.<p>‘ರಾಜ್ಯದ ಜನತೆಯ ಜೊತೆಗೆ ದೇಶದ ಜನತೆ ಸೋಲಿಸಿದ್ದು ಮೋದಿ ಗ್ಯಾರಂಟಿಗಳನ್ನೇ, ಹೊರತು ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳನ್ನಲ್ಲ. ಕಳೆದ ಲೋಕಸಭಾ ಚುನಾವಣೆಗಿಂತ ಶೇ 13ರಷ್ಟು ಹೆಚ್ಚು ಮತಗಳನ್ನು ರಾಜ್ಯದ ಮತದಾರರು ಈ ಬಾರಿ ನಮಗೆ ನೀಡಿದ್ದಾರೆ. ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ನಡುವಿನ ಮತ ಪ್ರಮಾಣದ ಅಂತರ ಕೇವಲ 0.63. ಈಗ ಹೇಳಿ ಗೆದ್ದವರು ಯಾರು. ಸೋತವರು ಯಾರು’ ಎಂದೂ ಕೇಳಿದ್ದಾರೆ.</p>.<p>‘ಜೆಡಿಎಸ್ ಪಕ್ಷದ ಪಾದಕ್ಕೆ ಬಿದ್ದರೂ, 26 ಸ್ಥಾನಗಳಿಂದ 17 ಸ್ಥಾನಕ್ಕೆ ಬಿಜೆಪಿ ಕುಸಿಯುವುದನ್ನು ತಪ್ಪಿಸಲು ನಿಮಗೆ ಆಗಲಿಲ್ಲ. ಒಂದು ಸ್ಥಾನದಿಂದ ಒಂಬತ್ತು ಸ್ಥಾನಕ್ಕೆ ನಾವು ಏರುವುದನ್ನೂ ತಪ್ಪಿಸಲಾಗಲಿಲ್ಲ. ಮೊದಲು ನಿಮ್ಮ ಸೋಲಿಗೆ ಆತ್ಮಾವಲೋಕನ ಮಾಡಿಕೊಳ್ಳಿ. ಆ ಮೇಲೆ ಕಾಂಗ್ರೆಸ್ ಪಕ್ಷದ ಚುನಾವಣಾ ಫಲಿತಾಂಶದ ವಿಶ್ಲೇಷಣೆ ನಡೆಸಿ’ ಎಂದೂ ಕುಟುಕಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>