ಬೀದರ್: ‘ನಾನು ಯಾವುದಕ್ಕೂ ಲಾಬಿ ನಡೆಸಿಲ್ಲ’ ಎಂದು ಪರಿಸರ, ಅರಣ್ಯ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಬಿ. ಖಂಡ್ರೆ ಸ್ಪಷ್ಟಪಡಿಸಿದರು.
‘ಸಿಎಂ ಹುದ್ದೆ ವಿಚಾರವಾಗಿ ನಡೆಯುತ್ತಿರುವ ಚರ್ಚೆಗಳೇ ಅಪ್ರಸ್ತುತ. ಹಾಗೇನಿದ್ದರೂ ಅದರ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ. ನಾನಂತೂ ಯಾವುದಕ್ಕೂ ಲಾಬಿ ನಡೆಸುತ್ತಿಲ್ಲ. ಅದರ ಬಗ್ಗೆ ಹೆಚ್ಚು ಚರ್ಚೆ ಅನಗತ್ಯ’ ಎಂದು ಪತ್ರಕರ್ತರ ಪ್ರಶ್ನೆಗೆ ನಗರದಲ್ಲಿ ಶನಿವಾರ ಪ್ರತಿಕ್ರಿಯಿಸಿದರು.