ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಭಿನಂದನಾ ಕಾರ್ಯಕ್ರಮವನ್ನು ನಾನು ಆಯೋಜಿಸಿರಲಿಲ್ಲ. ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ನನ್ನ ಕರೆದರು. ನಾನು ಮತ್ತು ಆರ್.ಅಶೋಕ ಅವರು ಪಾಲ್ಗೊಂಡು ಮರಳಿದೆವು. ಆ ನಂತರ ಬೆಳವಣಿಗೆಗಳು ನಡೆದಿವೆ ಎಂದರು.
ಮಾಧ್ಯಮಗಳಲ್ಲಿಈ ಬಗ್ಗೆ ನೋಡಿ ತಿಳಿದೆ. ಯಾರು ಮದ್ಯ ಹಂಚಿದ್ದಾರೆ ಎನ್ನುವುದು ನನಗೆ ತಿಳಿದಿಲ್ಲ. ಮುಖಂಡರಿಗೂ ಕರೆ ಮಾಡಿ ಈ ರೀತಿಯಲ್ಲಿ ಮಾಡಬಾರದಿತ್ತು ಎಂದು ತಿಳಿಸಿದೆ. ಮುಂದೆ ಈ ರೀತಿಯ ಘಟನೆಗಳು ನಡೆಯದಂತೆ ಎಚ್ಚರವಹಿಸುತ್ತೇವೆ ಎಂದರು.