<p><strong>ನವದೆಹಲಿ:</strong> ‘ಸಾರ್ವಜನಿಕ ಸೇವೆಗಳ ಸಂಪೂರ್ಣ ಡಿಜಿಟಲೀಕರಣಕ್ಕೆ ದೂರಸಂಪರ್ಕ ಕ್ಷೇತ್ರದ ಪ್ರಗತಿಗೆ ಅನುಕೂಲವಾಗುವಂತೆ ಪ್ರತ್ಯೇಕ ನೀತಿಯನ್ನು ಕರ್ನಾಟಕ ಸರ್ಕಾರ ಸಿದ್ದಪಡಿಸುತ್ತಿದೆ’ ಎಂದು ರಾಜ್ಯ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.</p>.<p>ಇಲ್ಲಿನ ಪ್ರಗತಿ ಮೈದಾನದಲ್ಲಿ ನಡೆಯುತ್ತಿರುವ, ‘ಇಂಡಿಯಾ ಮೊಬೈಲ್ ಕಾಂಗ್ರೆಸ್–ಐಎಂಸಿ’ ತಂತ್ರಜ್ಞಾನ ಪ್ರದರ್ಶನ ಮೇಳವನ್ನು ಉದ್ದೇಶಿಸಿ ಅವರು ಮಾತನಾಡಿದರು.</p>.<p>ಮೇಳದ ಭಾಗವಾಗಿ ನಡೆದ ದುಂಡು ಮೇಜಿನ ಸಭೆಯಲ್ಲಿ ಮಾತನಾಡಿದ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ‘ಮಾಹಿತಿ ತಂತ್ರಜ್ಞಾನ ಮತ್ತು ದೂರಸಂಪರ್ಕ ಕ್ಷೇತ್ರಗಳಲ್ಲಿ ಸಂಶೋಧನೆ ಮತ್ತು ಅನ್ವೇಷಣೆ ಕೈಗೊಳ್ಳುವ ರಾಜ್ಯಗಳಷ್ಟೇ ಪ್ರಗತಿ ಸಾಧಿಸುತ್ತವೆ’ ಎಂದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ, ‘ಕರ್ನಾಟಕ ಸರ್ಕಾರವು ಪಂಚಮಿತ್ರ 2.0 ಜಾರಿಗೆ ತರುವ ಮೂಲಕ, ರೈತರಿಗೂ ತಂತ್ರಜ್ಞಾನದ ಪ್ರಯೋಜನ ಸಿಗುವಂತೆ ಮಾಡಿದೆ. ಹಲವು ಸೇವೆಗಳನ್ನು ಆನ್ಲೈನ್ ಮೂಲಕ ಒದಗಿಸಲಾಗತ್ತಿದ್ದು, ರೈತರು ಅಗತ್ಯ ದಾಖಲೆ ಪತ್ರಗಳನ್ನು ಆನ್ಲೈನ್ ಮೂಲಕವೇ ಪಡೆದುಕೊಳ್ಳಬಹುದು’ ಎಂದರು.</p>.<p>‘ಕರ್ನಾಟಕದಲ್ಲಿ ಈಗಾಗಲೇ ಸೈಬರ್ ಭದ್ರತಾ ನೀತಿ, ದತ್ತಾಂಶ ನೀತಿ ಜಾರಿಯಲ್ಲಿದೆ. ದೂರಸಂಪರ್ಕ ಕ್ಷೇತ್ರದಲ್ಲೂ ಮಹತ್ವದ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಕೇಂದ್ರ ಸರ್ಕಾರವು ದೂರಸಂಪರ್ಕ ಶೃಂಗಸಭೆ ನಡೆಸಬೇಕು. ಪ್ರತಿ ರಾಜ್ಯದಲ್ಲೂ ಅಂತಹ ಶೃಂಗಸಭೆಗಳು ನಡೆಯಬೇಕು’ ಎಂದು ಸಲಹೆ ನೀಡಿದರು. ಹಲವು ರಾಜ್ಯಗಳ ಮಾಹಿತಿ ತಂತ್ರಜ್ಞಾನ ಸಚಿವರು ಈ ಸಲಹೆಯನ್ನು ಅನುಮೋದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಸಾರ್ವಜನಿಕ ಸೇವೆಗಳ ಸಂಪೂರ್ಣ ಡಿಜಿಟಲೀಕರಣಕ್ಕೆ ದೂರಸಂಪರ್ಕ ಕ್ಷೇತ್ರದ ಪ್ರಗತಿಗೆ ಅನುಕೂಲವಾಗುವಂತೆ ಪ್ರತ್ಯೇಕ ನೀತಿಯನ್ನು ಕರ್ನಾಟಕ ಸರ್ಕಾರ ಸಿದ್ದಪಡಿಸುತ್ತಿದೆ’ ಎಂದು ರಾಜ್ಯ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.</p>.<p>ಇಲ್ಲಿನ ಪ್ರಗತಿ ಮೈದಾನದಲ್ಲಿ ನಡೆಯುತ್ತಿರುವ, ‘ಇಂಡಿಯಾ ಮೊಬೈಲ್ ಕಾಂಗ್ರೆಸ್–ಐಎಂಸಿ’ ತಂತ್ರಜ್ಞಾನ ಪ್ರದರ್ಶನ ಮೇಳವನ್ನು ಉದ್ದೇಶಿಸಿ ಅವರು ಮಾತನಾಡಿದರು.</p>.<p>ಮೇಳದ ಭಾಗವಾಗಿ ನಡೆದ ದುಂಡು ಮೇಜಿನ ಸಭೆಯಲ್ಲಿ ಮಾತನಾಡಿದ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ‘ಮಾಹಿತಿ ತಂತ್ರಜ್ಞಾನ ಮತ್ತು ದೂರಸಂಪರ್ಕ ಕ್ಷೇತ್ರಗಳಲ್ಲಿ ಸಂಶೋಧನೆ ಮತ್ತು ಅನ್ವೇಷಣೆ ಕೈಗೊಳ್ಳುವ ರಾಜ್ಯಗಳಷ್ಟೇ ಪ್ರಗತಿ ಸಾಧಿಸುತ್ತವೆ’ ಎಂದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ, ‘ಕರ್ನಾಟಕ ಸರ್ಕಾರವು ಪಂಚಮಿತ್ರ 2.0 ಜಾರಿಗೆ ತರುವ ಮೂಲಕ, ರೈತರಿಗೂ ತಂತ್ರಜ್ಞಾನದ ಪ್ರಯೋಜನ ಸಿಗುವಂತೆ ಮಾಡಿದೆ. ಹಲವು ಸೇವೆಗಳನ್ನು ಆನ್ಲೈನ್ ಮೂಲಕ ಒದಗಿಸಲಾಗತ್ತಿದ್ದು, ರೈತರು ಅಗತ್ಯ ದಾಖಲೆ ಪತ್ರಗಳನ್ನು ಆನ್ಲೈನ್ ಮೂಲಕವೇ ಪಡೆದುಕೊಳ್ಳಬಹುದು’ ಎಂದರು.</p>.<p>‘ಕರ್ನಾಟಕದಲ್ಲಿ ಈಗಾಗಲೇ ಸೈಬರ್ ಭದ್ರತಾ ನೀತಿ, ದತ್ತಾಂಶ ನೀತಿ ಜಾರಿಯಲ್ಲಿದೆ. ದೂರಸಂಪರ್ಕ ಕ್ಷೇತ್ರದಲ್ಲೂ ಮಹತ್ವದ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಕೇಂದ್ರ ಸರ್ಕಾರವು ದೂರಸಂಪರ್ಕ ಶೃಂಗಸಭೆ ನಡೆಸಬೇಕು. ಪ್ರತಿ ರಾಜ್ಯದಲ್ಲೂ ಅಂತಹ ಶೃಂಗಸಭೆಗಳು ನಡೆಯಬೇಕು’ ಎಂದು ಸಲಹೆ ನೀಡಿದರು. ಹಲವು ರಾಜ್ಯಗಳ ಮಾಹಿತಿ ತಂತ್ರಜ್ಞಾನ ಸಚಿವರು ಈ ಸಲಹೆಯನ್ನು ಅನುಮೋದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>