<p><strong>ಬೆಂಗಳೂರು</strong>: ಕೇರಳದ ವಯನಾಡು ಜಿಲ್ಲೆ ಬೇಗೂರಿನ ಚತಿಗಡದಲ್ಲಿ ಆನೆ ತುಳಿತಕ್ಕೆ ಒಳಗಾಗಿ ಅಜೀಶ್ ಎಂಬವರು ಮೃತಪಟ್ಟಿದ್ದು, ಮೃತರ ಕುಟುಂಬಕ್ಕೆ ಪರಿಹಾರ ನೀಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ಈ ಘಟನೆಯ ಹಿನ್ನೆಲೆಯಲ್ಲಿ ವಯನಾಡ್ನಲ್ಲಿ ಸ್ಥಳೀಯರಿಂದ ಭಾರಿ ಪ್ರತಿಭಟನೆ ನಡೆದಿತ್ತು. ಕಾಂಗ್ರೆಸ್ ಸಂಸದ ರಾಹುಲ್ಗಾಂಧಿ ಅವರೂ ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದರು. ಇದರ ಬೆನ್ನಲ್ಲೇ ಪರಿಹಾರ ನೀಡುವುದಾಗಿ ಕರ್ನಾಟಕ ಸರ್ಕಾರ ಘೋಷಿಸಿದೆ.</p>.<p>‘ಅಜೀಶ್ ಸಾವಿನ ಕಾರಣಕ್ಕೆ ಕುಟುಂಬಕ್ಕೆ ಪರಿಹಾರ ನೀಡುವಂತೆ ಕೇರಳದ ಜನಪ್ರತಿನಿಧಿಗಳು ಮತ್ತು ಅಲ್ಲಿನ ಸರ್ಕಾರವು ಕರ್ನಾಟಕ ಸರ್ಕಾರವನ್ನು ಕೋರಿತ್ತು. ಈ ಕುರಿತು ಮುಖ್ಯಮಂತ್ರಿಯವರ ಜತೆ ಮಾತನಾಡಿದ್ದು, ಪರಿಹಾರ ನೀಡಲು ಮುಖ್ಯಮಂತ್ರಿಯವರು ಒಪ್ಪಿಗೆ ಸೂಚಿಸಿದ್ದಾರೆ’ ಎಂದು ಖಂಡ್ರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>‘ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನಲ್ಲಿ ದಂತರಹಿತ ಗಂಡು ಆನೆಯನ್ನು ಕಳೆದ ವರ್ಷದ ನವೆಂಬರ್ 30ರಂದು ಸೆರೆ ಹಿಡಿಯಲಾಗಿತ್ತು. ನಂತರ ಈ ಆನೆಯನ್ನು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಸ್ಥಳಾಂತರಗೊಳಿಸಲಾಗಿತ್ತು. ಈ ಆನೆಯು ಸುಮಾರು ಎರಡು ತಿಂಗಳ ನಂತರ ಕೇರಳ ರಾಜ್ಯದ ವಯನಾಡು ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಕಾಣಿಸಿಕೊಂಡಿತ್ತು. ಫೆಬ್ರುವರಿ 10ರ ಬೆಳಿಗ್ಗೆ ವಯನಾಡು ಜಿಲ್ಲೆಯ ಬೇಗೂರಿನ ಚತಿಗಡದಲ್ಲಿ ಈ ಆನೆಯೊಂದಿಗೆ ಸಂಘರ್ಷದ ಘಟನೆಯಲ್ಲಿ ಅಜೀಶ್ ಪ್ರಾಣ ಕಳೆದುಕೊಂಡರು’ ಎಂದು ಖಂಡ್ರೆ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕೇರಳದ ವಯನಾಡು ಜಿಲ್ಲೆ ಬೇಗೂರಿನ ಚತಿಗಡದಲ್ಲಿ ಆನೆ ತುಳಿತಕ್ಕೆ ಒಳಗಾಗಿ ಅಜೀಶ್ ಎಂಬವರು ಮೃತಪಟ್ಟಿದ್ದು, ಮೃತರ ಕುಟುಂಬಕ್ಕೆ ಪರಿಹಾರ ನೀಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ಈ ಘಟನೆಯ ಹಿನ್ನೆಲೆಯಲ್ಲಿ ವಯನಾಡ್ನಲ್ಲಿ ಸ್ಥಳೀಯರಿಂದ ಭಾರಿ ಪ್ರತಿಭಟನೆ ನಡೆದಿತ್ತು. ಕಾಂಗ್ರೆಸ್ ಸಂಸದ ರಾಹುಲ್ಗಾಂಧಿ ಅವರೂ ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದರು. ಇದರ ಬೆನ್ನಲ್ಲೇ ಪರಿಹಾರ ನೀಡುವುದಾಗಿ ಕರ್ನಾಟಕ ಸರ್ಕಾರ ಘೋಷಿಸಿದೆ.</p>.<p>‘ಅಜೀಶ್ ಸಾವಿನ ಕಾರಣಕ್ಕೆ ಕುಟುಂಬಕ್ಕೆ ಪರಿಹಾರ ನೀಡುವಂತೆ ಕೇರಳದ ಜನಪ್ರತಿನಿಧಿಗಳು ಮತ್ತು ಅಲ್ಲಿನ ಸರ್ಕಾರವು ಕರ್ನಾಟಕ ಸರ್ಕಾರವನ್ನು ಕೋರಿತ್ತು. ಈ ಕುರಿತು ಮುಖ್ಯಮಂತ್ರಿಯವರ ಜತೆ ಮಾತನಾಡಿದ್ದು, ಪರಿಹಾರ ನೀಡಲು ಮುಖ್ಯಮಂತ್ರಿಯವರು ಒಪ್ಪಿಗೆ ಸೂಚಿಸಿದ್ದಾರೆ’ ಎಂದು ಖಂಡ್ರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>‘ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನಲ್ಲಿ ದಂತರಹಿತ ಗಂಡು ಆನೆಯನ್ನು ಕಳೆದ ವರ್ಷದ ನವೆಂಬರ್ 30ರಂದು ಸೆರೆ ಹಿಡಿಯಲಾಗಿತ್ತು. ನಂತರ ಈ ಆನೆಯನ್ನು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಸ್ಥಳಾಂತರಗೊಳಿಸಲಾಗಿತ್ತು. ಈ ಆನೆಯು ಸುಮಾರು ಎರಡು ತಿಂಗಳ ನಂತರ ಕೇರಳ ರಾಜ್ಯದ ವಯನಾಡು ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಕಾಣಿಸಿಕೊಂಡಿತ್ತು. ಫೆಬ್ರುವರಿ 10ರ ಬೆಳಿಗ್ಗೆ ವಯನಾಡು ಜಿಲ್ಲೆಯ ಬೇಗೂರಿನ ಚತಿಗಡದಲ್ಲಿ ಈ ಆನೆಯೊಂದಿಗೆ ಸಂಘರ್ಷದ ಘಟನೆಯಲ್ಲಿ ಅಜೀಶ್ ಪ್ರಾಣ ಕಳೆದುಕೊಂಡರು’ ಎಂದು ಖಂಡ್ರೆ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>