<p><strong>ಬೆಂಗಳೂರು:</strong> ‘ಸಂಸತ್ ಸದಸ್ಯರಿಗೆ ಭದ್ರತೆ ನೀಡಲಾಗದ ಕೇಂದ್ರ ಸರ್ಕಾರ, ಸಂಸದರನ್ನು ಸಂಸತ್ತಿನಿಂದ ಓಡಿಸುವ ಕೆಲಸ ಮಾಡುತ್ತಿದೆ. ಮೋದಿ ಇದ್ದರೆ ಮಾತ್ರ ಭದ್ರತೆ ಎಂದು ಹೇಳುತ್ತಿದ್ದರು. ಆದರೆ, ಸಂಸತ್ನ ಭದ್ರತಾ ವೈಫಲ್ಯದ ಬಗ್ಗೆ ಅವರೇ ಮೌನವಾಗಿದ್ದಾರೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಬಿ.ಎನ್. ಚಂದ್ರಪ್ಪ ಹೇಳಿದರು. </p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಿರುದ್ಯೋಗದಿಂದ ಬೇಸತ್ತು ಬಿಜೆಪಿ ಬೆಂಬಗಲಿಗರೇ ಸಂಸತ್ ಮೇಲೆ ದಾಳಿ ಮಾಡಿದ್ದಾರೆ. ಸಣ್ಣ ಘಟನೆಯಾದರೂ ಮಾಧ್ಯಮಗಳ ಮುಂದೆ ಬರುತ್ತಿದ್ದ ಶೋಭಾ ಕರಂದ್ಲಾಜೆ, ಪ್ರತಾಪ ಸಿಂಹ, ಸಿ.ಟಿ. ರವಿ ಈಗ ಎಲ್ಲಿದ್ದಾರೆ’ ಎಂದು ಪ್ರಶ್ನಿಸಿದರು.</p>.<p>‘ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲಾಗುತ್ತಿದೆ. ಸ್ವಾಯತ್ತ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ತನ್ನ ನಿಯಂತ್ರಣಕ್ಕೆ ತೆಗೆದುಕೊಂಡು ಏಕ ಚಕ್ರಾಧಿಪತ್ಯ ನಡೆಸುತ್ತಿದೆ. ಸಂಸತ್ತನ್ನು ನಿಷ್ಕ್ರಿಯ ಮಾಡಿ ಜನಪ್ರತಿನಿಧಿಗಳ ಪ್ರಶ್ನೆ ಹತ್ತಿಕ್ಕುವ ಕೆಲಸ ಆಗುತ್ತಿದೆ’ ಎಂದು ಕಾಂಗ್ರೆಸ್ ಮುಖಂಡ ಎಚ್.ಎಂ. ರೇವಣ್ಣ ಹೇಳಿದರು.</p>.<p>‘ಸಂಸತ್ತಿನಲ್ಲಿ ನಡೆದ ದಾಳಿಯ ಹೊಣೆಯನ್ನು ಪ್ರಧಾನ ಮಂತ್ರಿ, ಗೃಹಸಚಿವರು ಮತ್ತು ಸ್ಪೀಕರ್ ಹೊರಬೇಕಾಗುತ್ತದೆ. ಇದಕ್ಕೆ ಮೂಲವಾಗಿರುವ ಮೈಸೂರಿನ ಸಂಸದ ಪ್ರತಾಪ ಸಿಂಹ ಯಾವುದೇ ಹೇಳಿಕೆ ನೀಡದೆ ತಲೆಮರೆಸಿಕೊಂಡಿದ್ದಾರೆ’ ಎಂದು ಮತ್ತೊಬ್ಬ ಮುಖಂಡ ವಿ.ಎಸ್. ಉಗ್ರಪ್ಪ ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಸಂಸತ್ ಸದಸ್ಯರಿಗೆ ಭದ್ರತೆ ನೀಡಲಾಗದ ಕೇಂದ್ರ ಸರ್ಕಾರ, ಸಂಸದರನ್ನು ಸಂಸತ್ತಿನಿಂದ ಓಡಿಸುವ ಕೆಲಸ ಮಾಡುತ್ತಿದೆ. ಮೋದಿ ಇದ್ದರೆ ಮಾತ್ರ ಭದ್ರತೆ ಎಂದು ಹೇಳುತ್ತಿದ್ದರು. ಆದರೆ, ಸಂಸತ್ನ ಭದ್ರತಾ ವೈಫಲ್ಯದ ಬಗ್ಗೆ ಅವರೇ ಮೌನವಾಗಿದ್ದಾರೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಬಿ.ಎನ್. ಚಂದ್ರಪ್ಪ ಹೇಳಿದರು. </p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಿರುದ್ಯೋಗದಿಂದ ಬೇಸತ್ತು ಬಿಜೆಪಿ ಬೆಂಬಗಲಿಗರೇ ಸಂಸತ್ ಮೇಲೆ ದಾಳಿ ಮಾಡಿದ್ದಾರೆ. ಸಣ್ಣ ಘಟನೆಯಾದರೂ ಮಾಧ್ಯಮಗಳ ಮುಂದೆ ಬರುತ್ತಿದ್ದ ಶೋಭಾ ಕರಂದ್ಲಾಜೆ, ಪ್ರತಾಪ ಸಿಂಹ, ಸಿ.ಟಿ. ರವಿ ಈಗ ಎಲ್ಲಿದ್ದಾರೆ’ ಎಂದು ಪ್ರಶ್ನಿಸಿದರು.</p>.<p>‘ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲಾಗುತ್ತಿದೆ. ಸ್ವಾಯತ್ತ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ತನ್ನ ನಿಯಂತ್ರಣಕ್ಕೆ ತೆಗೆದುಕೊಂಡು ಏಕ ಚಕ್ರಾಧಿಪತ್ಯ ನಡೆಸುತ್ತಿದೆ. ಸಂಸತ್ತನ್ನು ನಿಷ್ಕ್ರಿಯ ಮಾಡಿ ಜನಪ್ರತಿನಿಧಿಗಳ ಪ್ರಶ್ನೆ ಹತ್ತಿಕ್ಕುವ ಕೆಲಸ ಆಗುತ್ತಿದೆ’ ಎಂದು ಕಾಂಗ್ರೆಸ್ ಮುಖಂಡ ಎಚ್.ಎಂ. ರೇವಣ್ಣ ಹೇಳಿದರು.</p>.<p>‘ಸಂಸತ್ತಿನಲ್ಲಿ ನಡೆದ ದಾಳಿಯ ಹೊಣೆಯನ್ನು ಪ್ರಧಾನ ಮಂತ್ರಿ, ಗೃಹಸಚಿವರು ಮತ್ತು ಸ್ಪೀಕರ್ ಹೊರಬೇಕಾಗುತ್ತದೆ. ಇದಕ್ಕೆ ಮೂಲವಾಗಿರುವ ಮೈಸೂರಿನ ಸಂಸದ ಪ್ರತಾಪ ಸಿಂಹ ಯಾವುದೇ ಹೇಳಿಕೆ ನೀಡದೆ ತಲೆಮರೆಸಿಕೊಂಡಿದ್ದಾರೆ’ ಎಂದು ಮತ್ತೊಬ್ಬ ಮುಖಂಡ ವಿ.ಎಸ್. ಉಗ್ರಪ್ಪ ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>