<p><strong>ನವದೆಹಲಿ</strong>: ‘ಶಾಸಕರನ್ನು ಓಲೈಸಲು ಹಲವು ರಾಜ್ಯಗಳು ಮಿತಿಮೀರಿದ ಸಚಿವ ಸಂಪುಟ ದರ್ಜೆ ಸ್ಥಾನಗಳನ್ನು ಕಲ್ಪಿಸುತ್ತಿವೆ. ಇದು ಸಂವಿಧಾನದ 91ನೇ ತಿದ್ದುಪಡಿಯ ಸ್ಪಷ್ಟ ಉಲ್ಲಂಘನೆ ಹಾಗೂ ಸರ್ಕಾರಿ ಖಜಾನೆಗೆ ಹೊರೆ’ ಎಂದು ರಾಜ್ಯಸಭೆಯ ಬಿಜೆಪಿ ಸದಸ್ಯ ಲಹರ್ ಸಿಂಗ್ ಸರೋಯಾ ಪ್ರತಿಪಾದಿಸಿದರು. </p>.<p>ರಾಜ್ಯಸಭೆಯಲ್ಲಿ ವಿಶೇಷ ಪ್ರಸ್ತಾವ ಮಂಡಿಸಿದ ಲಹರ್ ಸಿಂಗ್, ‘ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ಸಚಿವ ಸಂಪುಟದ ಹೊರತಾಗಿ 56 ಮಂದಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿದ್ದು, ಇದು ಸಂವಿಧಾನದ ಸದಾಶಯಗಳಿಗೆ ವಿರುದ್ಧ. ಜೊತೆಗೆ ಇದು ಆರ್ಥಿಕ ಅಶಿಸ್ತಿಗೆ ಕಾರಣವಾಗಿದೆ’ ಎಂದು ಗಮನ ಸೆಳೆದರು. </p>.<p>‘2003ರ 91ನೇ ಸಾಂವಿಧಾನಿಕ ತಿದ್ದುಪಡಿಯ ಪ್ರಕಾರ, ಯಾವುದೇ ಸರ್ಕಾರದಲ್ಲಿ ಪ್ರಧಾನಮಂತ್ರಿ/ಮುಖ್ಯಮಂತ್ರಿ ಸೇರಿದಂತೆ ಒಟ್ಟು ಸಂಪುಟ ಸಚಿವರ ಸಂಖ್ಯೆ, ಲೋಕಸಭೆ ಅಥವಾ ರಾಜ್ಯ ಶಾಸಕಾಂಗದ ಒಟ್ಟು ಬಲದ ಶೇ 15ಕ್ಕೆ ಸೀಮಿತವಾಗಿರಬೇಕು. ಆದರೆ, ಕೆಲವು ರಾಜ್ಯಗಳಲ್ಲಿ ಈ ಸಾಂವಿಧಾನಿಕ ಮಿತಿಯನ್ನು ಮೀರಿ ಸಂಪುಟ ದರ್ಜೆ ನೇಮಕಾತಿಗಳು ನಡೆದಿರುವ ಉದಾಹರಣೆಗಳನ್ನು ನೋಡುತ್ತಿದ್ದೇವೆ’ ಎಂದರು. </p>.<p>‘ಸಾಂವಿಧಾನಿಕ ಆಶಯಗಳನ್ನು ಮೀರಿ, ಯಾವುದೇ ಕಾರಣಕ್ಕೂ ಕೂಡ ಸಂಪುಟ ದರ್ಜೆ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸುವ ಅವಶ್ಯಕತೆಯಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕಾನೂನಿಗೆ ತಿದ್ದುಪಡಿ ತರಬೇಕು’ ಎಂದು ಅವರು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ಶಾಸಕರನ್ನು ಓಲೈಸಲು ಹಲವು ರಾಜ್ಯಗಳು ಮಿತಿಮೀರಿದ ಸಚಿವ ಸಂಪುಟ ದರ್ಜೆ ಸ್ಥಾನಗಳನ್ನು ಕಲ್ಪಿಸುತ್ತಿವೆ. ಇದು ಸಂವಿಧಾನದ 91ನೇ ತಿದ್ದುಪಡಿಯ ಸ್ಪಷ್ಟ ಉಲ್ಲಂಘನೆ ಹಾಗೂ ಸರ್ಕಾರಿ ಖಜಾನೆಗೆ ಹೊರೆ’ ಎಂದು ರಾಜ್ಯಸಭೆಯ ಬಿಜೆಪಿ ಸದಸ್ಯ ಲಹರ್ ಸಿಂಗ್ ಸರೋಯಾ ಪ್ರತಿಪಾದಿಸಿದರು. </p>.<p>ರಾಜ್ಯಸಭೆಯಲ್ಲಿ ವಿಶೇಷ ಪ್ರಸ್ತಾವ ಮಂಡಿಸಿದ ಲಹರ್ ಸಿಂಗ್, ‘ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ಸಚಿವ ಸಂಪುಟದ ಹೊರತಾಗಿ 56 ಮಂದಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿದ್ದು, ಇದು ಸಂವಿಧಾನದ ಸದಾಶಯಗಳಿಗೆ ವಿರುದ್ಧ. ಜೊತೆಗೆ ಇದು ಆರ್ಥಿಕ ಅಶಿಸ್ತಿಗೆ ಕಾರಣವಾಗಿದೆ’ ಎಂದು ಗಮನ ಸೆಳೆದರು. </p>.<p>‘2003ರ 91ನೇ ಸಾಂವಿಧಾನಿಕ ತಿದ್ದುಪಡಿಯ ಪ್ರಕಾರ, ಯಾವುದೇ ಸರ್ಕಾರದಲ್ಲಿ ಪ್ರಧಾನಮಂತ್ರಿ/ಮುಖ್ಯಮಂತ್ರಿ ಸೇರಿದಂತೆ ಒಟ್ಟು ಸಂಪುಟ ಸಚಿವರ ಸಂಖ್ಯೆ, ಲೋಕಸಭೆ ಅಥವಾ ರಾಜ್ಯ ಶಾಸಕಾಂಗದ ಒಟ್ಟು ಬಲದ ಶೇ 15ಕ್ಕೆ ಸೀಮಿತವಾಗಿರಬೇಕು. ಆದರೆ, ಕೆಲವು ರಾಜ್ಯಗಳಲ್ಲಿ ಈ ಸಾಂವಿಧಾನಿಕ ಮಿತಿಯನ್ನು ಮೀರಿ ಸಂಪುಟ ದರ್ಜೆ ನೇಮಕಾತಿಗಳು ನಡೆದಿರುವ ಉದಾಹರಣೆಗಳನ್ನು ನೋಡುತ್ತಿದ್ದೇವೆ’ ಎಂದರು. </p>.<p>‘ಸಾಂವಿಧಾನಿಕ ಆಶಯಗಳನ್ನು ಮೀರಿ, ಯಾವುದೇ ಕಾರಣಕ್ಕೂ ಕೂಡ ಸಂಪುಟ ದರ್ಜೆ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸುವ ಅವಶ್ಯಕತೆಯಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕಾನೂನಿಗೆ ತಿದ್ದುಪಡಿ ತರಬೇಕು’ ಎಂದು ಅವರು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>