ಸಿದ್ದರಾಮಯ್ಯ ಮನಸ್ಸು ಮಾಡಿದ್ರೆ ಮಾತ್ರ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲು ಸಾಧ್ಯ ಎಂದರು.
ಬೆಂಗಳೂರು ಒಂದಾಗಿ ಉಳಿಯಬೇಕು. ಅದನ್ನು ಭಾಗ ಮಾಡುವ ಪ್ರಯತ್ನ ಹಿಂದೆ ನಡೆದಿತ್ತು. ಹೋರಾಟದ ಮೂಲಕ ಅದನ್ನು ತಡೆಯಲು ಸಾಧ್ಯವಾಗಿತ್ತು. ಈಗ ಮತ್ತೆ ಭಾಗ ಮಾಡುವ ಕೂಗು ಎದ್ದಿದೆ. ದಯವಿಟ್ಟು ಭಾಗ ಮಾಡಬಾರದು ಎಂದು ಮನವಿ ಮಾಡಿದರು.
ಇಬ್ಬಾಗ ಮಾಡಬೇಕು ಎಂದಿದ್ದರೆ ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ ಎಂದು ಮಾಡಿ. ಆಗ ಉತ್ತರ ಕರ್ನಾಟಕ ಅಭಿವೃದ್ಧಿ ಆಗುತ್ತದೆ. ಈಗ ಉತ್ತರ ಕರ್ನಾಟಕದವರು ಬೆಂಗಳೂರು ಸೇರಿರುವುದರಿಂದ ಅಲ್ಲಿ ಅಭಿವೃದ್ಧಿ ಆಗಿಲ್ಲ ಎಂದು ತಿಳಿಸಿದರು.