<p>ಬೆಂಗಳೂರು: ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಅವರು ಜೆಡಿಎಸ್ ತೊರೆದು ಬುಧವಾರ ಬಿಜೆಪಿ ಸೇರಿದರು.</p>.<p>ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ತಮ್ಮ ಬೆಂಬಲಿಗರೊಂದಿಗೆ ಪಕ್ಷ ಸೇರಿದ ಅವರು, ‘ನಾನು ಕಾಂಗ್ರೆಸ್ ಮತ್ತು ಜೆಡಿಎಸ್ನಲ್ಲಿ ಹೋರಾಟ ಮಾಡಿ ಬೆಳೆದವನು. ಇವೆರಡೂ ಪಕ್ಷಗಳಲ್ಲಿ ಕಾರ್ಯಕರ್ತರಿಗೆ ಉಸಿರುಗಟ್ಟಿಸುವ ಸ್ಥಿತಿ ಇದೆ. ನರೇಂದ್ರ ಮೋದಿ ಅವರ ನಾಯಕತ್ವ ಮತ್ತು ಅಭಿವೃದ್ಧಿ ಕೆಲಸ ಮೆಚ್ಚಿ ಬಿಜೆಪಿ ಸೇರಿದ್ದೇನೆ’ ಎಂದರು.</p>.<p>‘ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್– ಜೆಡಿಎಸ್ನ ಆಟಕ್ಕೆ ತಡೆ ಹಾಕಲು ಬಿಜೆಪಿಯಿಂದ ಮಾತ್ರ ಸಾಧ್ಯ.ಮಂಡ್ಯದಲ್ಲಿ ಪಕ್ಷ ಕಟ್ಟಲು ಹಲವು ನಾಯಕರು ಆಹ್ವಾನಿಸಿದ್ದಾರೆ. ಜಿಲ್ಲೆಯಲ್ಲಿ ಅತಿ ಹೆಚ್ಚು ಸಂಖ್ಯೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುತ್ತೇವೆ’ ಎಂದರು.</p>.<p>ಶಿವರಾಮೇಗೌಡ ಅವರ ಪುತ್ರ ಚೇತನ್ ಗೌಡ, ಕಲಬುರಗಿ ಜಿಲ್ಲೆ ಗುರುಮಠಕಲ್ ಕ್ಷೇತ್ರದ ಕಾಂಗ್ರೆಸ್ ಮುಖಂಡ ಯೋಗೇಶ್ ಬೆಸ್ತರ್, ರಾಮದುರ್ಗ ಕ್ಷೇತ್ರದ ಕಾಂಗ್ರೆಸ್ ಮುಖಂಡ ಚಿಕ್ಕರೇವಣ್ಣ ಸೇರಿ ಹಲವರು ಬಿಜೆಪಿ ಸೇರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಅವರು ಜೆಡಿಎಸ್ ತೊರೆದು ಬುಧವಾರ ಬಿಜೆಪಿ ಸೇರಿದರು.</p>.<p>ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ತಮ್ಮ ಬೆಂಬಲಿಗರೊಂದಿಗೆ ಪಕ್ಷ ಸೇರಿದ ಅವರು, ‘ನಾನು ಕಾಂಗ್ರೆಸ್ ಮತ್ತು ಜೆಡಿಎಸ್ನಲ್ಲಿ ಹೋರಾಟ ಮಾಡಿ ಬೆಳೆದವನು. ಇವೆರಡೂ ಪಕ್ಷಗಳಲ್ಲಿ ಕಾರ್ಯಕರ್ತರಿಗೆ ಉಸಿರುಗಟ್ಟಿಸುವ ಸ್ಥಿತಿ ಇದೆ. ನರೇಂದ್ರ ಮೋದಿ ಅವರ ನಾಯಕತ್ವ ಮತ್ತು ಅಭಿವೃದ್ಧಿ ಕೆಲಸ ಮೆಚ್ಚಿ ಬಿಜೆಪಿ ಸೇರಿದ್ದೇನೆ’ ಎಂದರು.</p>.<p>‘ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್– ಜೆಡಿಎಸ್ನ ಆಟಕ್ಕೆ ತಡೆ ಹಾಕಲು ಬಿಜೆಪಿಯಿಂದ ಮಾತ್ರ ಸಾಧ್ಯ.ಮಂಡ್ಯದಲ್ಲಿ ಪಕ್ಷ ಕಟ್ಟಲು ಹಲವು ನಾಯಕರು ಆಹ್ವಾನಿಸಿದ್ದಾರೆ. ಜಿಲ್ಲೆಯಲ್ಲಿ ಅತಿ ಹೆಚ್ಚು ಸಂಖ್ಯೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುತ್ತೇವೆ’ ಎಂದರು.</p>.<p>ಶಿವರಾಮೇಗೌಡ ಅವರ ಪುತ್ರ ಚೇತನ್ ಗೌಡ, ಕಲಬುರಗಿ ಜಿಲ್ಲೆ ಗುರುಮಠಕಲ್ ಕ್ಷೇತ್ರದ ಕಾಂಗ್ರೆಸ್ ಮುಖಂಡ ಯೋಗೇಶ್ ಬೆಸ್ತರ್, ರಾಮದುರ್ಗ ಕ್ಷೇತ್ರದ ಕಾಂಗ್ರೆಸ್ ಮುಖಂಡ ಚಿಕ್ಕರೇವಣ್ಣ ಸೇರಿ ಹಲವರು ಬಿಜೆಪಿ ಸೇರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>