<p><strong>ಬೆಂಗಳೂರು</strong>: ಉತ್ತರಕನ್ನಡ ಜಿಲ್ಲೆ ಶಿರಸಿಯ ದಿ ತೋಟಗಾರ್ಸ್ ಕೋ–ಆಪರೇಟಿವ್ ಸೇಲ್ ಸೊಸೈಟಿಗೆ (ಟಿಎಸ್ಎಸ್) ವಿಶೇಷಾಧಿಕಾರಿ ನೇಮಕ ಪ್ರಕರಣದಲ್ಲಿ ಉತ್ತರ ಕನ್ನಡ ಜಿಲ್ಲಾ ಸಹಕಾರ ಇಲಾಖೆ ಉಪನಿಬಂಧಕ ಎಸ್.ಜಿ.ಮಂಜುನಾಥ್ ಸಿಂಗ್ ಮೇಲಿನ ಆರೋಪಗಳು ಮೇಲ್ನೋಟಕ್ಕೆ ಸಾಬೀತಾಗಿರುವುದರಿಂದ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.</p>.<p>ಟಿಎಸ್ಎಸ್ ಚುನಾವಣೆ ಪ್ರಕ್ರಿಯೆಯಲ್ಲಿ ಲೋಪದೋಷಗಳಾಗಿವೆ ಎಂದು ಚುನಾವಣಾ ತಕರಾರು ಅರ್ಜಿಗಳು ದಾಖಲಾಗಿದ್ದವು. ಆ ವೇಳೆ, ಮಂಜುನಾಥ್ ಸಿಂಗ್ ಅವರು ಕರ್ತವ್ಯಕ್ಕೆ ಹಾಜರಾಗದೇ ಅಜ್ಞಾತ ಸ್ಥಳದಿಂದ ಆದೇಶವೊಂದನ್ನು ಹೊರಡಿಸಿ ಚುನಾವಣಾ ಫಲಿತಾಂಶ ರದ್ದುಪಡಿಸಿದ್ದರು. ಅಲ್ಲದೇ, ಶಿಕ್ಷಣಾಧಿಕಾರಿ ಎಂ.ಎಸ್.ನಾಯ್ಕ ಅವರನ್ನು ವಿಶೇಷಾಧಿಕಾರಿಯನ್ನಾಗಿ ನೇಮಿಸಿದ್ದರು. ಈ ವಿಷಯವನ್ನು ಜಿಲ್ಲಾಧಿಕಾರಿಗಳ ಗಮನಕ್ಕೂ ಆವರು ತಂದಿರಲಿಲ್ಲ.</p>.<p>‘ಮೇಲಧಿಕಾರಿಗಳ ಅನುಮತಿಯನ್ನೂ ಪಡೆಯದೇ ಅವರು ಕಚೇರಿಗೆ ಗೈರುಹಾಜರಾಗಿದ್ದ ಸಿಂಗ್, ಅದೇ ಅವಧಿಯಲ್ಲಿ ಆದೇಶವನ್ನೂ ಹೊರಡಿದ್ದರು. ಈ ರೀತಿ ನಡೆದುಕೊಂಡಿದ್ದರಿಂದಾಗಿ, ಟಿಎಸ್ಎಸ್ನಲ್ಲಿ ಶಾಂತಿ ಸುವ್ಯವಸ್ಥೆ ಹದಗೆಡಲು ಕಾರಣವಾಯಿತು. ಇಂತಹ ಗಂಭೀರ ವಿಷಯವನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತರದೇ ಇರುವುದು ಗಂಭೀರ ವಿಚಾರ’ ಎಂದು ಆದೇಶದಲ್ಲಿ ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಉತ್ತರಕನ್ನಡ ಜಿಲ್ಲೆ ಶಿರಸಿಯ ದಿ ತೋಟಗಾರ್ಸ್ ಕೋ–ಆಪರೇಟಿವ್ ಸೇಲ್ ಸೊಸೈಟಿಗೆ (ಟಿಎಸ್ಎಸ್) ವಿಶೇಷಾಧಿಕಾರಿ ನೇಮಕ ಪ್ರಕರಣದಲ್ಲಿ ಉತ್ತರ ಕನ್ನಡ ಜಿಲ್ಲಾ ಸಹಕಾರ ಇಲಾಖೆ ಉಪನಿಬಂಧಕ ಎಸ್.ಜಿ.ಮಂಜುನಾಥ್ ಸಿಂಗ್ ಮೇಲಿನ ಆರೋಪಗಳು ಮೇಲ್ನೋಟಕ್ಕೆ ಸಾಬೀತಾಗಿರುವುದರಿಂದ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.</p>.<p>ಟಿಎಸ್ಎಸ್ ಚುನಾವಣೆ ಪ್ರಕ್ರಿಯೆಯಲ್ಲಿ ಲೋಪದೋಷಗಳಾಗಿವೆ ಎಂದು ಚುನಾವಣಾ ತಕರಾರು ಅರ್ಜಿಗಳು ದಾಖಲಾಗಿದ್ದವು. ಆ ವೇಳೆ, ಮಂಜುನಾಥ್ ಸಿಂಗ್ ಅವರು ಕರ್ತವ್ಯಕ್ಕೆ ಹಾಜರಾಗದೇ ಅಜ್ಞಾತ ಸ್ಥಳದಿಂದ ಆದೇಶವೊಂದನ್ನು ಹೊರಡಿಸಿ ಚುನಾವಣಾ ಫಲಿತಾಂಶ ರದ್ದುಪಡಿಸಿದ್ದರು. ಅಲ್ಲದೇ, ಶಿಕ್ಷಣಾಧಿಕಾರಿ ಎಂ.ಎಸ್.ನಾಯ್ಕ ಅವರನ್ನು ವಿಶೇಷಾಧಿಕಾರಿಯನ್ನಾಗಿ ನೇಮಿಸಿದ್ದರು. ಈ ವಿಷಯವನ್ನು ಜಿಲ್ಲಾಧಿಕಾರಿಗಳ ಗಮನಕ್ಕೂ ಆವರು ತಂದಿರಲಿಲ್ಲ.</p>.<p>‘ಮೇಲಧಿಕಾರಿಗಳ ಅನುಮತಿಯನ್ನೂ ಪಡೆಯದೇ ಅವರು ಕಚೇರಿಗೆ ಗೈರುಹಾಜರಾಗಿದ್ದ ಸಿಂಗ್, ಅದೇ ಅವಧಿಯಲ್ಲಿ ಆದೇಶವನ್ನೂ ಹೊರಡಿದ್ದರು. ಈ ರೀತಿ ನಡೆದುಕೊಂಡಿದ್ದರಿಂದಾಗಿ, ಟಿಎಸ್ಎಸ್ನಲ್ಲಿ ಶಾಂತಿ ಸುವ್ಯವಸ್ಥೆ ಹದಗೆಡಲು ಕಾರಣವಾಯಿತು. ಇಂತಹ ಗಂಭೀರ ವಿಷಯವನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತರದೇ ಇರುವುದು ಗಂಭೀರ ವಿಚಾರ’ ಎಂದು ಆದೇಶದಲ್ಲಿ ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>