<p><strong>ಬೆಂಗಳೂರು:</strong> ‘ಲೋಕಸಭೆ ಚುನಾವಣೆ ತಯಾರಿಗೆ ಜ.10ರಂದು ಕೇಂದ್ರ ನಾಯಕರು ಹಾಗೂ ಎಲ್ಲ ಶಾಸಕರ ಸಭೆ ನಡೆಸಲಾಗುವುದು’ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.</p>.<p>ಕೆಪಿಸಿಸಿ ಕಚೇರಿಯಲ್ಲಿ 139ನೇ ರಾಷ್ಟ್ರೀಯ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ‘ಗ್ಯಾರಂಟಿ ಯೋಜನೆಗಳ ಬಗ್ಗೆ ಜನರಿಗೆ ಮನವರಿಕೆ ಮಾಡುವುದರ ಬಗ್ಗೆ ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಲಾಗುವುದು. ಮನೆ, ಮನೆಗೆ ತೆರಳಿ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಚಾರ ಮಾಡುವಂತೆಯೂ ಕಾರ್ಯಕರ್ತರಿಗೆ ತಿಳಿಸಲಾಗುವುದು’ ಎಂದರು. </p><p>‘ಆರೆಸ್ಸೆಸ್ಗೂ ರಾಮಮಂದಿರಕ್ಕೂ ಯಾವುದೇ ಸಂಬಂಧವಿಲ್ಲ. ಆದರೆ, ಬಿಜೆಪಿ, ಆರೆಸ್ಸೆಸ್ನವರು ಮನೆ, ಮನೆಗೆ ತೆರಳಿ, ಅಕ್ಷತೆ ಕೊಟ್ಟು ಇಲ್ಲಿಂದಲೇ ರಾಮಮಂದಿರಕ್ಕೆ ನಮನ ಸಲ್ಲಿಸಿ ಎಂದು ಪ್ರಚಾರ ಮಾಡುತ್ತಿದ್ದಾರೆ. ಬಿಜೆಪಿಯವರು ಭಾವನೆ ಮೇಲೆ ರಾಜಕಾರಣ ಮಾಡುತ್ತಿದ್ದಾರೆ’ ಎಂದು ಟೀಕಿಸಿದರು. </p><p>‘ಪ್ರತಿಯೊಂದು ವಾರ್ಡ್, ಪಂಚಾಯಿತಿಯಲ್ಲಿ ಆಶ್ರಯ ಸಮಿತಿ ಸೇರಿದಂತೆ ಅನೇಕ ಸಮಿತಿಗಳಿವೆ. ಆ ಸಮಿತಿಗಳಲ್ಲಿ ಕಾರ್ಯಕರ್ತರಿಗೆ ಶೀಘ್ರ ಸ್ಥಾನಗಳನ್ನು ಕಲ್ಪಿಸಲಾಗುವುದು. ಎರಡು ವರ್ಷಗಳಿಗೆ ಒಮ್ಮೆ ಬದಲಾವಣೆ ಮಾಡಬೇಕೆಂಬ ಚಿಂತನೆಯಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಲೋಕಸಭೆ ಚುನಾವಣೆ ತಯಾರಿಗೆ ಜ.10ರಂದು ಕೇಂದ್ರ ನಾಯಕರು ಹಾಗೂ ಎಲ್ಲ ಶಾಸಕರ ಸಭೆ ನಡೆಸಲಾಗುವುದು’ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.</p>.<p>ಕೆಪಿಸಿಸಿ ಕಚೇರಿಯಲ್ಲಿ 139ನೇ ರಾಷ್ಟ್ರೀಯ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ‘ಗ್ಯಾರಂಟಿ ಯೋಜನೆಗಳ ಬಗ್ಗೆ ಜನರಿಗೆ ಮನವರಿಕೆ ಮಾಡುವುದರ ಬಗ್ಗೆ ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಲಾಗುವುದು. ಮನೆ, ಮನೆಗೆ ತೆರಳಿ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಚಾರ ಮಾಡುವಂತೆಯೂ ಕಾರ್ಯಕರ್ತರಿಗೆ ತಿಳಿಸಲಾಗುವುದು’ ಎಂದರು. </p><p>‘ಆರೆಸ್ಸೆಸ್ಗೂ ರಾಮಮಂದಿರಕ್ಕೂ ಯಾವುದೇ ಸಂಬಂಧವಿಲ್ಲ. ಆದರೆ, ಬಿಜೆಪಿ, ಆರೆಸ್ಸೆಸ್ನವರು ಮನೆ, ಮನೆಗೆ ತೆರಳಿ, ಅಕ್ಷತೆ ಕೊಟ್ಟು ಇಲ್ಲಿಂದಲೇ ರಾಮಮಂದಿರಕ್ಕೆ ನಮನ ಸಲ್ಲಿಸಿ ಎಂದು ಪ್ರಚಾರ ಮಾಡುತ್ತಿದ್ದಾರೆ. ಬಿಜೆಪಿಯವರು ಭಾವನೆ ಮೇಲೆ ರಾಜಕಾರಣ ಮಾಡುತ್ತಿದ್ದಾರೆ’ ಎಂದು ಟೀಕಿಸಿದರು. </p><p>‘ಪ್ರತಿಯೊಂದು ವಾರ್ಡ್, ಪಂಚಾಯಿತಿಯಲ್ಲಿ ಆಶ್ರಯ ಸಮಿತಿ ಸೇರಿದಂತೆ ಅನೇಕ ಸಮಿತಿಗಳಿವೆ. ಆ ಸಮಿತಿಗಳಲ್ಲಿ ಕಾರ್ಯಕರ್ತರಿಗೆ ಶೀಘ್ರ ಸ್ಥಾನಗಳನ್ನು ಕಲ್ಪಿಸಲಾಗುವುದು. ಎರಡು ವರ್ಷಗಳಿಗೆ ಒಮ್ಮೆ ಬದಲಾವಣೆ ಮಾಡಬೇಕೆಂಬ ಚಿಂತನೆಯಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>