<p><strong>ಮಂಡ್ಯ</strong>: ‘ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರವನ್ನು ಕಿತ್ತಾಕ್ತೀವಿ, ತಾನೇ ಮುಖ್ಯಮಂತ್ರಿ ಆಗುತ್ತೇನೆ ಎಂದು ಹೊರಟಿದ್ದಾರೆ. ಸರ್ಕಾರವನ್ನು ಉರುಳಿಸುವವರು ಹೇಗೆ ಪಾತಾಳಕ್ಕೆ ಹೋಗಲು ಸಾಧ್ಯ’ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಎಚ್ಡಿಕೆ ಹೇಳಿಕೆಗೆ ತಿರುಗೇಟು ನೀಡಿದರು. </p><p>ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿ, 'ಅವರು ಎಲ್ಲಿಗಾದ್ರು ಹೋಗಲಿ, ನನ್ನ ತಕಾರರು ಇಲ್ಲ. ಕೇಂದ್ರದಿಂದ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ. ನಮಗೆ ಬರಬೇಕಾದ ಅನುದಾನ ಸಿಗುತ್ತಿಲ್ಲ. ಸರ್ಕಾರ ಉರುಳಿಸುವ ಮೊದಲು ಅನ್ಯಾಯವನ್ನು ಸರಿಪಡಿಸಲಿ" ಎಂದು ಕುಟುಕಿದರು. </p><p>‘ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ್ರೆ ಮೇಕೆದಾಟಿಗೆ ಒಂದೇ ದಿನದಲ್ಲಿ ಸಹಿ ಹಾಕಿಸುತ್ತೇನೆ ಅಂದಿದ್ರು. ಸರ್ಕಾರ ಬಂದು 6 ತಿಂಗಳಾದರೂ ಇನ್ನೂ ಯಾಕೆ ಅನುಮತಿ ಕೊಡಿಸಿಲ್ಲ. ಕರ್ನಾಟಕ–ತಮಿಳುನಾಡು ಮಾತನಾಡಿಕೊಂಡು ಬಗೆಹರಿಸಿಕೊಳ್ಳುವುದಾದರೆ, ಕೇಂದ್ರ ಸರ್ಕಾರ ಬರೀ ಟ್ಯಾಕ್ಸ್ ಕಟ್ಟಿಸಿಕೊಳ್ಳೋಕೆ ಇರೋದಾ’ ಎಂದು ಕಿಡಿಕಾರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ</strong>: ‘ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರವನ್ನು ಕಿತ್ತಾಕ್ತೀವಿ, ತಾನೇ ಮುಖ್ಯಮಂತ್ರಿ ಆಗುತ್ತೇನೆ ಎಂದು ಹೊರಟಿದ್ದಾರೆ. ಸರ್ಕಾರವನ್ನು ಉರುಳಿಸುವವರು ಹೇಗೆ ಪಾತಾಳಕ್ಕೆ ಹೋಗಲು ಸಾಧ್ಯ’ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಎಚ್ಡಿಕೆ ಹೇಳಿಕೆಗೆ ತಿರುಗೇಟು ನೀಡಿದರು. </p><p>ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿ, 'ಅವರು ಎಲ್ಲಿಗಾದ್ರು ಹೋಗಲಿ, ನನ್ನ ತಕಾರರು ಇಲ್ಲ. ಕೇಂದ್ರದಿಂದ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ. ನಮಗೆ ಬರಬೇಕಾದ ಅನುದಾನ ಸಿಗುತ್ತಿಲ್ಲ. ಸರ್ಕಾರ ಉರುಳಿಸುವ ಮೊದಲು ಅನ್ಯಾಯವನ್ನು ಸರಿಪಡಿಸಲಿ" ಎಂದು ಕುಟುಕಿದರು. </p><p>‘ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ್ರೆ ಮೇಕೆದಾಟಿಗೆ ಒಂದೇ ದಿನದಲ್ಲಿ ಸಹಿ ಹಾಕಿಸುತ್ತೇನೆ ಅಂದಿದ್ರು. ಸರ್ಕಾರ ಬಂದು 6 ತಿಂಗಳಾದರೂ ಇನ್ನೂ ಯಾಕೆ ಅನುಮತಿ ಕೊಡಿಸಿಲ್ಲ. ಕರ್ನಾಟಕ–ತಮಿಳುನಾಡು ಮಾತನಾಡಿಕೊಂಡು ಬಗೆಹರಿಸಿಕೊಳ್ಳುವುದಾದರೆ, ಕೇಂದ್ರ ಸರ್ಕಾರ ಬರೀ ಟ್ಯಾಕ್ಸ್ ಕಟ್ಟಿಸಿಕೊಳ್ಳೋಕೆ ಇರೋದಾ’ ಎಂದು ಕಿಡಿಕಾರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>