ಮೈಸೂರು: ಇಲ್ಲಿನ ಲೋಕಾಯುಕ್ತ ಪೊಲೀಸರು ಮುಡಾ ನಿವೇಶನ ಹಂಚಿಕೆ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದು, ಗುರುವಾರ ವಿಚಾರಣೆಗೆ ಹಾಜರಾಗುವಂತೆ ಮೂರನೇ ಮತ್ತು ನಾಲ್ಕನೇ ಆರೋಪಿಗಳಾದ, ಮುಖ್ಯಮಂತ್ರಿ ಬಾಮೈದ ಮಲ್ಲಿಕಾರ್ಜುನಸ್ವಾಮಿ ಹಾಗೂ ಜಮೀನಿನ ಹಿಂದಿನ ಮಾಲೀಕ ದೇವರಾಜು ಅವರಿಗೆ ನೋಟಿಸ್ ನೀಡಿದ್ದಾರೆ. ಈ ಇಬ್ಬರ ನಡುವೆ ಜಮೀನು ವ್ಯವಹಾರ ನಡೆದಿದ್ದು, ವಿಚಾರಣೆಯು ಮಹತ್ವ ಪಡೆದುಕೊಂಡಿದೆ.