‘ಸಿದ್ದರಾಮಯ್ಯ ಅವರು ಪರಿಹಾರ ಕೇಳುವ ಮೊದಲು, ನಿವೇಶನಗಳ ಹಂಚಿಕೆ ಕಾನೂನುಬದ್ಧವಾಗಿಯೇ ಆಗಿದೆ ಎಂಬುದನ್ನು ಖಚಿತಪಡಿಸಿಕೊಳ್ಳಬೇಕಲ್ಲವೇ? ಸಿದ್ದರಾಮಯ್ಯ ಅಧಿಕಾರದಲ್ಲಿ ಇರಲಿ, ಇಲ್ಲದೇ ಇರಲಿ ಅವರು ಪ್ರಭಾವಿ ಎಂಬುದಂತೂ ನಿಜ. ತಾವು ಯಾವುದಕ್ಕೂ ಹೆದರುವುದಿಲ್ಲ ಎಂದು ಹೇಳುವ ಅವರು, ಈ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಲು ಹಿಂಜರಿಯಬಾರದು’ ಎಂದು ಹೇಳಿದ್ದಾರೆ.