ಮಂಗಳವಾರ, 22 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

AICC ಅಧ್ಯಕ್ಷ ಖರ್ಗೆ ಭೇಟಿಯಾದ ಸಚಿವ ಜಾರಕಿಹೊಳಿl ದಲಿತ ಸಿಎಂ: ಮತ್ತೆ ಮುನ್ನೆಲೆಗೆ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಸಚಿವ ಜಾರಕಿಹೊಳಿ l ಪಕ್ಷದ ಆಂತರಿಕ ಚಟುವಟಿಕೆ ಬಿರುಸು
Published : 4 ಅಕ್ಟೋಬರ್ 2024, 23:30 IST
Last Updated : 4 ಅಕ್ಟೋಬರ್ 2024, 23:30 IST
ಫಾಲೋ ಮಾಡಿ
Comments
ಎಐಸಿಸಿ ಅಧ್ಯಕ್ಷರಾಗಿರುವ ಖರ್ಗೆಯವರನ್ನು ಪಕ್ಷದಲ್ಲಿ ಸಚಿವರಾಗಿರುವ ಸತೀಶ ಜಾರಕಿಹೊಳಿಯವರು ಭೇಟಿಯಾಗುವುದು ತಪ್ಪೇನಲ್ಲ. ಇಲ್ಲ ಸಲ್ಲದ ಊಹಾಪೋಹಗಳಿಗೆ ಅವಕಾಶ ನೀಡಬಾರದು
–ಸಿದ್ದರಾಮಯ್ಯ ಮುಖ್ಯಮಂತ್ರಿ
ಯಾರೇ ಮುಖ್ಯಮಂತ್ರಿ ಸ್ಥಾನದ ರೇಸ್‌ನಲ್ಲಿದ್ದರೂ ನಮ್ಮ ಪಕ್ಷದ ಹೈಕಮಾಂಡ್‌ ತೀರ್ಮಾನ ಕೈಗೊಳ್ಳುತ್ತದೆ ಮತ್ತು 136 ಜನ ಶಾಸಕರ ಇಚ್ಛೆ ಮೇರೆಗೆ ಮುಖ್ಯಮಂತ್ರಿ ಆಯ್ಕೆ ನಡೆಯುತ್ತದೆ
ಲಕ್ಷ್ಮಿ ಹೆಬ್ಬಾಳಕರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ
ಖರ್ಗೆ ಭೇಟಿಗೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ: ಸತೀಶ ಜಾರಕಿಹೊಳಿ
ನಿಪ್ಪಾಣಿ/ಬೆಳಗಾವಿ: ‘ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಮುಡಾ ಪ್ರಕರಣದ ಬಗ್ಗೆ ಚರ್ಚಿಸಿಲ್ಲ. ರಾಜ್ಯದಲ್ಲಿ ಪರಿಶಿಷ್ಟ ಮುಖ್ಯಮಂತ್ರಿ ಕೂಗು ಎದ್ದಿಲ್ಲ ಮತ್ತು ರಾಜಕಾರಣದಲ್ಲಿ ಹೊಸ ಬೆಳವಣಿಗೆಯ ಲಕ್ಷಣಗಳೂ ಇಲ್ಲ’ ಎಂದು ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು. ಇಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಖರ್ಗೆ ಅವರನ್ನು ಸಹಜವಾಗಿ ಭೇಟಿಯಾಗಿದ್ದು, ರಾಜಕೀಯವಾಗಿ ನಮ್ಮ ಸಮಸ್ಯೆಗಳನ್ನು ಚರ್ಚಿಸಿದ್ದೇವೆ’ ಎಂದರು. ‘ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವಂತೆ ಸಿದ್ದರಾಮಯ್ಯ ಅವರಿಗೆ ವಿರೋಧ ಪಕ್ಷಗಳು ಒತ್ತಡ ತರುತ್ತಿವೆಯೇ ಹೊರತು ನಮ್ಮ ಪಕ್ಷ ಅಲ್ಲ. ನಾವು ಕಾನೂನು ರೀತಿ ಹೋರಾಡಲು ತೀರ್ಮಾನಿಸಿದ್ದೇವೆ. ಇ.ಡಿಯವರು ಪ್ರಕರಣ ದಾಖಲಿಸಿ ತನಿಖೆ ಮಾಡಿ, ಸತ್ಯಾಂಶ ಹೊರತರಲಿ. ಇದರಿಂದ ಏನೂ ತೊಂದರೆ ಇಲ್ಲ’ ಎಂದರು. ಬೆಳಗಾವಿಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಮಾತನಾಡಿ, ‘ನಮ್ಮ ಪಕ್ಷದ ಸರ್ವೋಚ್ಛ ನಾಯಕರಾದ ಖರ್ಗೆ ಅವರನ್ನು ಕೆಲಸವಿದ್ದಾಗ, ಭೇಟಿ ಆಗುವುದು ಸಹಜ. ಸತೀಶ ಜಾರಕಿಹೊಳಿ ಅವರ ಭೇಟಿಯಾಗಿದ್ದರಲ್ಲಿ ವಿಶೇಷ ಇಲ್ಲ’ ಎಂದರು.
‘ಸಿದ್ದರಾಮಯ್ಯ ಅವರೇ 5 ವರ್ಷ ಸಿ.ಎಂ’
ಬೆಂಗಳೂರು: ‘ಸಿದ್ದರಾಮಯ್ಯ ಅವರೇ ಐದು ವರ್ಷ ಸಿ.ಎಂ ಆಗಿರಲಿ ಎನ್ನುವುದು ನಮ್ಮ ಬಯಕೆ’ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್‌ ತಿಳಿಸಿದರು. ಸುದ್ದಿಗಾರರ ಜತೆ ಶುಕ್ರವಾರ ಮಾತನಾಡಿದ ಅವರು, ತಾಯಿ ಚಾಮುಂಡೇಶ್ವರಿ ಆಶೀರ್ವಾದದೊಂದಿಗೆ ಸಿದ್ದರಾಮಯ್ಯ ಅವರು ಎಲ್ಲಾ ಆರೋಪಗಳಿಂದ ಮುಕ್ತರಾಗುತ್ತಾರೆ. ಅವರನ್ನು ಅಲ್ಲಾಡಿಸಲು ಯಾರಿಗೂ ಆಗುವುದಿಲ್ಲ ಎಂದರು. ‍ಪಕ್ಷದ ದಲಿತ ಸಮುದಾಯದ ನಾಯಕರು ಪ್ರತ್ಯೇಕ ಸಭೆ ಮಾಡುತ್ತಿರುವ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ‘ಸಮಾಜದ ನಾಯಕರು ಸೇರಿ ಹಲವು ವಿಚಾರ ಚರ್ಚೆ ಮಾಡುತ್ತೇವೆ. ಜಿ. ಪರಮೇಶ್ವರ ಅವರು ಎಂಟು ವರ್ಷ ಕೆಪಿಸಿಸಿ ಅಧ್ಯಕ್ಷರಾಗಿದ್ದರು, ಸತೀಶ್ ಜಾರಕಿಹೊಳಿ ಕಾರ್ಯಾಧ್ಯಕ್ಷರಾಗಿದ್ದವರು. ರಾಜ್ಯದ ವಿದ್ಯಮಾನಗಳನ್ನು ಯಾವ ರೀತಿ ಎದುರಿಸಬೇಕು ಎನ್ನುವ ಕುರಿತು ಚರ್ಚೆ ಮಾಡುವುದು ಸಹಜ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT