<p><strong>ಬೆಂಗಳೂರು:</strong> ನಗರದ ‘ದಿ ರಾಮೇಶ್ವರಂ ಕೆಫೆ’ಯಲ್ಲಿ ನಡೆದಿದ್ದ ಬಾಂಬ್ ಸ್ಫೋಟ ಪ್ರಕರಣದ ತನಿಖೆ ಆರಂಭಿಸಿರುವ ರಾಷ್ಟ್ರೀಯ ತನಿಖಾ ದಳವು (ಎನ್ಐಎ) ಶಂಕಿತ ಆರೋಪಿಯ ಭಾವಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದೆ. </p><p>ಸಿ.ಸಿ.ಟಿ.ವಿ. ಕ್ಯಾಮೆರಾದ ದೃಶ್ಯಾವಳಿ ಆಧಾರದಲ್ಲಿ ಆರೋಪಿಯ ಭಾವಚಿತ್ರಗಳನ್ನು ಬಿಡುಗಡೆ ಮಾಡಲಾಗಿದೆ. ಟಿ–ಶರ್ಟ್, ಜೀನ್ಸ್ ಪ್ಯಾಂಟ್ ಧರಿಸಿರುವ ಆರೋಪಿಯು ತಲೆಗೆ ಕ್ಯಾಪ್ ಹಾಗೂ ಮುಖಕ್ಕೆ ಮಾಸ್ಕ್ ಹಾಕಿರುವುದನ್ನು ಕಾಣಬಹುದಾಗಿದೆ. </p>.<p>ಈ ಕುರಿತು ಸಾರ್ವಜನಿಕ ಪ್ರಕಟಣೆ ಹೊರಡಿಸಿರುವ ಎನ್ಐಎ, ಮಾಹಿತಿ ನೀಡಿದವರ ಹೆಸರನ್ನು ಗೋಪ್ಯವಾಗಿ ಇಡಲಾಗುವುದು ಎಂದು ತಿಳಿಸಿದೆ.</p><p>ಶಂಕಿತನ ಸುಳಿವು ಲಭಿಸಿದ ಕೂಡಲೇ 080 29510900, 8904241100 ಹಾಗೂ ಇ–ಮೇಲ್ ವಿಳಾಸ info.blr.nia@gov.inಗೆ ಮಾಹಿತಿ ನೀಡಬಹುದು ಎಂದು ಅಧಿಕಾರಿಗಳು ಕೋರಿದ್ದಾರೆ.</p><p>ಶಂಕಿತ ಆರೋಪಿಯು ಬಿಎಂಟಿಸಿ ಬಸ್ನಲ್ಲಿ ಓಡಾಟ ನಡೆಸಿರುವ ಎರಡು ವಿಡಿಯೊಗಳನ್ನು ಶುಕ್ರವಾರ ಎನ್ಐಎ ಬಿಡುಗಡೆ ಮಾಡಿತ್ತು.</p><p>ಬಸ್ನಲ್ಲಿ ಅಳವಡಿಸಿದ್ದ ಸಿ.ಸಿ.ಟಿ.ವಿ. ಕ್ಯಾಮೆರಾದ ದೃಶ್ಯಾವಳಿ ಆಧಾರದಲ್ಲಿ ಆರೋಪಿಯ ವಿಡಿಯೊ ಬಿಡುಗಡೆ ಮಾಡಲಾಗಿತ್ತು. ಆರೋಪಿಯು ಬಸ್ನಲ್ಲಿ ಕುರಿತು ಪ್ರಯಾಣಿಸುತ್ತಿರುವ ದೃಶ್ಯ ಸೆರೆಯಾಗಿತ್ತು.</p><p>ಇತ್ತೀಚೆಗೆ ಶಂಕಿತ ಆರೋಪಿ ಫೋಟೊವನ್ನು ಬಿಡುಗಡೆ ಮಾಡಿದ್ದ ಎನ್ಐಎ, ಸುಳಿವು ನೀಡಿದವರಿಗೆ ₹10 ಲಕ್ಷ ಬಹುಮಾನ ನೀಡುವುದಾಗಿ ಘೋಷಿಸಿತ್ತು.</p>.ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: BMTC ಬಸ್ನಲ್ಲಿ ಬಾಂಬರ್ ಓಡಾಟ, ವಿಡಿಯೊ ಬಿಡುಗಡೆ.ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ: ಬಾಂಬರ್ ಸುಳಿವು ನೀಡಿದರೆ ₹10 ಲಕ್ಷ ಬಹುಮಾನ.ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ | ಮತ್ತೆ ಮೂವರ ವಶ: ರಾಜ್ಯದಲ್ಲಿ ಕಟ್ಟೆಚ್ಚರ.Rameshwaram Cafe Blast | ಸ್ಫೋಟದ ಸ್ಥಳದಲ್ಲಿ ‘ಮೊಬೈಲ್ ಸರ್ಕಿಟ್’ ಪತ್ತೆ.Rameshwaram Cafe Blast | ‘ಬಸ್ಸಿನಲ್ಲಿ ಬಂದ, ಇಡ್ಲಿ ತಿಂದು ಬಾಂಬ್ ಇಟ್ಟು ಹೋದ’.Rameshwaram Cafe Blast | ಕೆಫೆ ಸ್ಫೋಟ: ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ಸೆರೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದ ‘ದಿ ರಾಮೇಶ್ವರಂ ಕೆಫೆ’ಯಲ್ಲಿ ನಡೆದಿದ್ದ ಬಾಂಬ್ ಸ್ಫೋಟ ಪ್ರಕರಣದ ತನಿಖೆ ಆರಂಭಿಸಿರುವ ರಾಷ್ಟ್ರೀಯ ತನಿಖಾ ದಳವು (ಎನ್ಐಎ) ಶಂಕಿತ ಆರೋಪಿಯ ಭಾವಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದೆ. </p><p>ಸಿ.ಸಿ.ಟಿ.ವಿ. ಕ್ಯಾಮೆರಾದ ದೃಶ್ಯಾವಳಿ ಆಧಾರದಲ್ಲಿ ಆರೋಪಿಯ ಭಾವಚಿತ್ರಗಳನ್ನು ಬಿಡುಗಡೆ ಮಾಡಲಾಗಿದೆ. ಟಿ–ಶರ್ಟ್, ಜೀನ್ಸ್ ಪ್ಯಾಂಟ್ ಧರಿಸಿರುವ ಆರೋಪಿಯು ತಲೆಗೆ ಕ್ಯಾಪ್ ಹಾಗೂ ಮುಖಕ್ಕೆ ಮಾಸ್ಕ್ ಹಾಕಿರುವುದನ್ನು ಕಾಣಬಹುದಾಗಿದೆ. </p>.<p>ಈ ಕುರಿತು ಸಾರ್ವಜನಿಕ ಪ್ರಕಟಣೆ ಹೊರಡಿಸಿರುವ ಎನ್ಐಎ, ಮಾಹಿತಿ ನೀಡಿದವರ ಹೆಸರನ್ನು ಗೋಪ್ಯವಾಗಿ ಇಡಲಾಗುವುದು ಎಂದು ತಿಳಿಸಿದೆ.</p><p>ಶಂಕಿತನ ಸುಳಿವು ಲಭಿಸಿದ ಕೂಡಲೇ 080 29510900, 8904241100 ಹಾಗೂ ಇ–ಮೇಲ್ ವಿಳಾಸ info.blr.nia@gov.inಗೆ ಮಾಹಿತಿ ನೀಡಬಹುದು ಎಂದು ಅಧಿಕಾರಿಗಳು ಕೋರಿದ್ದಾರೆ.</p><p>ಶಂಕಿತ ಆರೋಪಿಯು ಬಿಎಂಟಿಸಿ ಬಸ್ನಲ್ಲಿ ಓಡಾಟ ನಡೆಸಿರುವ ಎರಡು ವಿಡಿಯೊಗಳನ್ನು ಶುಕ್ರವಾರ ಎನ್ಐಎ ಬಿಡುಗಡೆ ಮಾಡಿತ್ತು.</p><p>ಬಸ್ನಲ್ಲಿ ಅಳವಡಿಸಿದ್ದ ಸಿ.ಸಿ.ಟಿ.ವಿ. ಕ್ಯಾಮೆರಾದ ದೃಶ್ಯಾವಳಿ ಆಧಾರದಲ್ಲಿ ಆರೋಪಿಯ ವಿಡಿಯೊ ಬಿಡುಗಡೆ ಮಾಡಲಾಗಿತ್ತು. ಆರೋಪಿಯು ಬಸ್ನಲ್ಲಿ ಕುರಿತು ಪ್ರಯಾಣಿಸುತ್ತಿರುವ ದೃಶ್ಯ ಸೆರೆಯಾಗಿತ್ತು.</p><p>ಇತ್ತೀಚೆಗೆ ಶಂಕಿತ ಆರೋಪಿ ಫೋಟೊವನ್ನು ಬಿಡುಗಡೆ ಮಾಡಿದ್ದ ಎನ್ಐಎ, ಸುಳಿವು ನೀಡಿದವರಿಗೆ ₹10 ಲಕ್ಷ ಬಹುಮಾನ ನೀಡುವುದಾಗಿ ಘೋಷಿಸಿತ್ತು.</p>.ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: BMTC ಬಸ್ನಲ್ಲಿ ಬಾಂಬರ್ ಓಡಾಟ, ವಿಡಿಯೊ ಬಿಡುಗಡೆ.ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ: ಬಾಂಬರ್ ಸುಳಿವು ನೀಡಿದರೆ ₹10 ಲಕ್ಷ ಬಹುಮಾನ.ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ | ಮತ್ತೆ ಮೂವರ ವಶ: ರಾಜ್ಯದಲ್ಲಿ ಕಟ್ಟೆಚ್ಚರ.Rameshwaram Cafe Blast | ಸ್ಫೋಟದ ಸ್ಥಳದಲ್ಲಿ ‘ಮೊಬೈಲ್ ಸರ್ಕಿಟ್’ ಪತ್ತೆ.Rameshwaram Cafe Blast | ‘ಬಸ್ಸಿನಲ್ಲಿ ಬಂದ, ಇಡ್ಲಿ ತಿಂದು ಬಾಂಬ್ ಇಟ್ಟು ಹೋದ’.Rameshwaram Cafe Blast | ಕೆಫೆ ಸ್ಫೋಟ: ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ಸೆರೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>