<p><strong>ನವದೆಹಲಿ:</strong> ಕರ್ನಾಟಕದ ಕಲಬುರಗಿ ರೈಲ್ವೆ ವಿಭಾಗ ಸ್ಥಾಪನೆ ಪ್ರಸ್ತಾವ ಸರ್ಕಾರದ ಮುಂದಿಲ್ಲ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದರು. </p>.<p>ಲೋಕಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಕಲಬುರಗಿ ಸಂಸದ ರಾಧಾಕೃಷ್ಣ ಪ್ರಶ್ನೆಗೆ ಸಚಿವರು ಉತ್ತರ ನೀಡಿದರು. </p>.<p>‘2014–15ನೇ ಸಾಲಿನ ಮಧ್ಯಂತರ ಬಜೆಟ್ನಲ್ಲಿ ರೈಲ್ವೆ ವಿಭಾಗ ಸ್ಥಾಪನೆಗೆ ಅನುಮೋದನೆ ನೀಡಿರಲಿಲ್ಲ. ವಿಭಾಗ ಸ್ಥಾಪನೆಯ ಕಾರ್ಯಸಾಧ್ಯತೆಯ ಪರಿಶೀಲಿಸಲು ಮೂವರು ಹಿರಿಯ ಅಧಿಕಾರಿಗಳ ಸಮಿತಿ ರಚಿಸಲಾಗಿತ್ತು. ಕಾರ್ಯಾಚರಣೆ, ಹಣಕಾಸು, ಆಡಳಿತಾತ್ಮಕ ಮತ್ತಿತರ ವಿಷಯಗಳನ್ನು ಈ ಸಮಿತಿ ಪರಿಶೀಲನೆ ನಡೆಸಿ ಈ ಸಮಿತಿ ವರದಿ ನೀಡಿತ್ತು. ರೈಲ್ವೆ ವಿಭಾಗದ ಅಗತ್ಯ ಇಲ್ಲ ಎಂದು ವರದಿ ಸಲ್ಲಿಸಿತ್ತು. ಹಾಗಾಗಿ, ಈ ಪ್ರಸ್ತಾವ ಕೈಬಿಡಲಾಗಿತ್ತು ಎಂದು ಅವರು ವಿವರ ನೀಡಿದರು. </p>.<p>ರಾಧಾಕೃಷ್ಣ, ‘ವಿಭಾಗ ಸ್ಥಾಪನೆಗೆ ಅಗತ್ಯ ಜಮೀನು ಇದೆ. ಹಲವು ಸಲ ಈ ಸಂಬಂಧ ಮನವಿ ಸಲ್ಲಿಸಲಾಗಿದೆ. ತುರ್ತಾಗಿ ವಿಭಾಗ ಸ್ಥಾಪನೆಯಾಗಬೇಕಿದ್ದು, ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಬೇಕು’ ಎಂದು ಮನವಿ ಮಾಡಿದರು. </p>.<p>ಮತ್ತೊಂದು ಪ್ರಶ್ನೆಗೆ ಉತ್ತರ ನೀಡಿರುವ ಸಚಿವರು, ‘ಚಿಕ್ಕಬಳ್ಳಾಪುರ–ಗೌರಿಬಿದನೂರು (44 ಕಿ.ಮೀ) ನಡುವೆ ಹೊಸ ರೈಲು ಮಾರ್ಗ ನಿರ್ಮಾಣಕ್ಕೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲು ಅಂತಿಮ ಕಾರ್ಯಸಾಧ್ಯತಾ ಅಧ್ಯಯನಕ್ಕೆ ಒಪ್ಪಿಗೆ ನೀಡಲಾಗಿದೆ’ ಎಂದರು. </p>.<p>ಚಿಕ್ಕಬಳ್ಳಾಪುರ–ಪುಟ್ಟಪರ್ತಿ (104 ಕಿ.ಮೀ) ನಡುವೆ ಹೊಸ ಮಾರ್ಗ ನಿರ್ಮಾಣಕ್ಕೆ ಸರ್ವೆ ಪೂರ್ಣಗೊಂಡಿದೆ. ಶ್ರೀನಿವಾಸಪುರ–ಮದನಪಲ್ಲಿ (75 ಕಿ.ಮೀ) ಹೊಸ ಮಾರ್ಗಕ್ಕಾಗಿ ಸರ್ವೆ ನಡೆಸಲಾಗಿದೆ. ಪ್ರಯಾಣಿಕರ ದಟ್ಟಣೆ ಕಡಿಮೆ ಇರುವ ಕಾರಣಕ್ಕೆ ಈ ಎರಡು ಯೋಜನೆಗಳನ್ನು ಕಾರ್ಯಗತಗೊಳಿಸಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು. </p>.<p>ಮಾರಿಕುಪ್ಪಂ–ಕುಪ್ಪಂ (24 ಕಿ.ಮೀ) ನಡುವೆ ₹279 ಕೋಟಿ ವೆಚ್ಚದಲ್ಲಿ ಹೊಸ ಮಾರ್ಗ ನಿರ್ಮಾಣಕ್ಕೆ 2013ರಲ್ಲಿ ಅನುಮೋದನೆ ನೀಡಲಾಗಿತ್ತು. ಈ ಯೋಜನೆಗೆ 320 ಎಕರೆ (ಕರ್ನಾಟಕದಲ್ಲಿ 70 ಎಕರೆ, ಆಂಧ್ರ ಪ್ರದೇಶದಲ್ಲಿ 250 ಎಕರೆ) ಜಾಗ ಬೇಕಿದೆ. ಆಂಧ್ರ ಸರ್ಕಾರವು 70 ಎಕರೆ ಜಾಗವನ್ನು ಇನ್ನೂ ಹಸ್ತಾಂತರಿಸಿಲ್ಲ. ಭೂಮಿಯ ಲಭ್ಯತೆ ನೋಡಿಕೊಂಡು ಯೋಜನೆ ಅನುಷ್ಠಾನಗೊಳಿಸಲಾಗುವುದು ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕರ್ನಾಟಕದ ಕಲಬುರಗಿ ರೈಲ್ವೆ ವಿಭಾಗ ಸ್ಥಾಪನೆ ಪ್ರಸ್ತಾವ ಸರ್ಕಾರದ ಮುಂದಿಲ್ಲ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದರು. </p>.<p>ಲೋಕಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಕಲಬುರಗಿ ಸಂಸದ ರಾಧಾಕೃಷ್ಣ ಪ್ರಶ್ನೆಗೆ ಸಚಿವರು ಉತ್ತರ ನೀಡಿದರು. </p>.<p>‘2014–15ನೇ ಸಾಲಿನ ಮಧ್ಯಂತರ ಬಜೆಟ್ನಲ್ಲಿ ರೈಲ್ವೆ ವಿಭಾಗ ಸ್ಥಾಪನೆಗೆ ಅನುಮೋದನೆ ನೀಡಿರಲಿಲ್ಲ. ವಿಭಾಗ ಸ್ಥಾಪನೆಯ ಕಾರ್ಯಸಾಧ್ಯತೆಯ ಪರಿಶೀಲಿಸಲು ಮೂವರು ಹಿರಿಯ ಅಧಿಕಾರಿಗಳ ಸಮಿತಿ ರಚಿಸಲಾಗಿತ್ತು. ಕಾರ್ಯಾಚರಣೆ, ಹಣಕಾಸು, ಆಡಳಿತಾತ್ಮಕ ಮತ್ತಿತರ ವಿಷಯಗಳನ್ನು ಈ ಸಮಿತಿ ಪರಿಶೀಲನೆ ನಡೆಸಿ ಈ ಸಮಿತಿ ವರದಿ ನೀಡಿತ್ತು. ರೈಲ್ವೆ ವಿಭಾಗದ ಅಗತ್ಯ ಇಲ್ಲ ಎಂದು ವರದಿ ಸಲ್ಲಿಸಿತ್ತು. ಹಾಗಾಗಿ, ಈ ಪ್ರಸ್ತಾವ ಕೈಬಿಡಲಾಗಿತ್ತು ಎಂದು ಅವರು ವಿವರ ನೀಡಿದರು. </p>.<p>ರಾಧಾಕೃಷ್ಣ, ‘ವಿಭಾಗ ಸ್ಥಾಪನೆಗೆ ಅಗತ್ಯ ಜಮೀನು ಇದೆ. ಹಲವು ಸಲ ಈ ಸಂಬಂಧ ಮನವಿ ಸಲ್ಲಿಸಲಾಗಿದೆ. ತುರ್ತಾಗಿ ವಿಭಾಗ ಸ್ಥಾಪನೆಯಾಗಬೇಕಿದ್ದು, ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಬೇಕು’ ಎಂದು ಮನವಿ ಮಾಡಿದರು. </p>.<p>ಮತ್ತೊಂದು ಪ್ರಶ್ನೆಗೆ ಉತ್ತರ ನೀಡಿರುವ ಸಚಿವರು, ‘ಚಿಕ್ಕಬಳ್ಳಾಪುರ–ಗೌರಿಬಿದನೂರು (44 ಕಿ.ಮೀ) ನಡುವೆ ಹೊಸ ರೈಲು ಮಾರ್ಗ ನಿರ್ಮಾಣಕ್ಕೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲು ಅಂತಿಮ ಕಾರ್ಯಸಾಧ್ಯತಾ ಅಧ್ಯಯನಕ್ಕೆ ಒಪ್ಪಿಗೆ ನೀಡಲಾಗಿದೆ’ ಎಂದರು. </p>.<p>ಚಿಕ್ಕಬಳ್ಳಾಪುರ–ಪುಟ್ಟಪರ್ತಿ (104 ಕಿ.ಮೀ) ನಡುವೆ ಹೊಸ ಮಾರ್ಗ ನಿರ್ಮಾಣಕ್ಕೆ ಸರ್ವೆ ಪೂರ್ಣಗೊಂಡಿದೆ. ಶ್ರೀನಿವಾಸಪುರ–ಮದನಪಲ್ಲಿ (75 ಕಿ.ಮೀ) ಹೊಸ ಮಾರ್ಗಕ್ಕಾಗಿ ಸರ್ವೆ ನಡೆಸಲಾಗಿದೆ. ಪ್ರಯಾಣಿಕರ ದಟ್ಟಣೆ ಕಡಿಮೆ ಇರುವ ಕಾರಣಕ್ಕೆ ಈ ಎರಡು ಯೋಜನೆಗಳನ್ನು ಕಾರ್ಯಗತಗೊಳಿಸಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು. </p>.<p>ಮಾರಿಕುಪ್ಪಂ–ಕುಪ್ಪಂ (24 ಕಿ.ಮೀ) ನಡುವೆ ₹279 ಕೋಟಿ ವೆಚ್ಚದಲ್ಲಿ ಹೊಸ ಮಾರ್ಗ ನಿರ್ಮಾಣಕ್ಕೆ 2013ರಲ್ಲಿ ಅನುಮೋದನೆ ನೀಡಲಾಗಿತ್ತು. ಈ ಯೋಜನೆಗೆ 320 ಎಕರೆ (ಕರ್ನಾಟಕದಲ್ಲಿ 70 ಎಕರೆ, ಆಂಧ್ರ ಪ್ರದೇಶದಲ್ಲಿ 250 ಎಕರೆ) ಜಾಗ ಬೇಕಿದೆ. ಆಂಧ್ರ ಸರ್ಕಾರವು 70 ಎಕರೆ ಜಾಗವನ್ನು ಇನ್ನೂ ಹಸ್ತಾಂತರಿಸಿಲ್ಲ. ಭೂಮಿಯ ಲಭ್ಯತೆ ನೋಡಿಕೊಂಡು ಯೋಜನೆ ಅನುಷ್ಠಾನಗೊಳಿಸಲಾಗುವುದು ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>