ಪ್ರಕರಣದ ಸಂಬಂಧ ಹೈಕೋರ್ಟ್ನ ರಿಜಿಸ್ಟ್ರಾರ್ ಜನರಲ್ ಸಲ್ಲಿಸಿರುವ ವರದಿಯನ್ನು ಗಮನಿಸಿದ ಪೀಠವು, ‘ಹೈಕೋರ್ಟ್ ನ್ಯಾಯಮೂರ್ತಿ ಅವರು ಈ ಪ್ರಕರಣದಲ್ಲಿ ಪ್ರತಿವಾದಿಯಾಗಿಲ್ಲ. ಜತೆಗೆ, ಅವರು ತಮ್ಮ ಹೇಳಿಕೆ ಉದ್ದೇಶಪೂರ್ವಕ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಹೀಗಾಗಿ, ಈ ವಿಷಯದಲ್ಲಿ ಪೀಠವು ಇನ್ನಷ್ಟು ಅಭಿಪ್ರಾಯಗಳನ್ನು ನೀಡುವುದಿಲ್ಲ. ನ್ಯಾಯದ ಹಿತಾಸಕ್ತಿ ಹಾಗೂ ನ್ಯಾಯಾಲಯದ ಘನತೆಯನ್ನು ಪರಿಗಣಿಸಿ ಈ ಪ್ರಕ್ರಿಯೆಯನ್ನು ಮುಕ್ತಾಯಗೊಳಿಸಲು ಒಲವು ಹೊಂದಿದೆ’ ಎಂದು ಹೇಳಿತು.