ಮುಂದಿನ 10 ವರ್ಷಗಳಲ್ಲಿ ಯಾದಗಿರಿ ಜಿಲ್ಲೆಯೂ ಎಸ್ ಎಸ್ ಎಲ್ ಸಿ ಸೇರಿದಂತೆ ಶೈಕ್ಷಣಿಕ ಮಟ್ಟದಲ್ಲಿ ಮುಂದೆ ಬರುತ್ತದೆ. ಅಕ್ಷರ ಆವಿಷ್ಕಾರ ಯೋಜನೆಯಡಿ ಈ ಭಾಗದ ಶಾಸಕರು ಶೇ 25 ರಷ್ಟು ಅನುದಾನ ತೆಗೆದಿಸಿದ್ದಾರೆ. ಇದರಿಂದ ಬಹಳಷ್ಟು ಅನುಕೂಲವಾಗುತ್ತಿದೆ ಎಂದರು.
ರಾಜ್ಯದ 25 ಸಾವಿರ ಮಕ್ಕಳಿಗೆ ನೀಟ್ ಕೋಚಿಂಗ್ ನೀಡಲಾಗುತ್ತದೆ. ತಂದೆ ತಾಯಿ ಮಕ್ಕಳನ್ನು ಶಾಲೆಗೆ ಕಳುಹಿಸಿ. ಶಾಲೆಯಲ್ಲಿ ಮಕ್ಕಳು ಇಲ್ಲದಿದ್ದರೆ ಮುಚ್ಚಬೇಕಾಗುತ್ತದೆ. ಈ ಹಿಂದೆ ನಮ್ಮ ತಂದೆ ಎಸ್. ಬಂಗಾರಪ್ಪ ಅವರು ಶಾಲೆಗೆ ಮಕ್ಕಳು ಬರಲು ₹1 ನೀಡುತ್ತಿದ್ದರು. ಅದರಂತೆ ನಮ್ಮ ಸರ್ಕಾರ ಮಕ್ಕಳಿಗೆ 6 ದಿನವೂ ಮೊಟ್ಟೆ ವಿತರಿಸಲಾಗುತ್ತದೆ. ಜೊತೆಗೆ ಬಿಸಿಯೂಟ, ಸಮವಸ್ತ್ರ, ಶೂ, ಪಠ್ಯಪುಸ್ತಕ ನೀಡಲಾಗುತ್ತದೆ ಎಂದು ಹೇಳಿದರು.