ಸಂಪುಟ ಉಪ ಸಮಿತಿ ಸಭೆಯಲ್ಲೂ ಆಯ್ಕೆಗಳ ಕುರಿತು ಚರ್ಚೆ ನಡೆಸಲಾಗಿದೆ. ಪರಿಸರಸೂಕ್ಷ್ಮ ಪ್ರದೇಶದ ವ್ಯಾಪ್ತಿಗೆ ಬರುವ 1,433 ಗ್ರಾಮಗಳ ಜನರ ಅಹವಾಲು ಆಲಿಸಲು ನೇಮಿಸಲಾಗಿದ್ದ ಸಂಜಯ್ ಕುಮಾರ್ ನೇತೃತ್ವದ ಸಮಿತಿ ಇದುವರೆಗೂ ರಾಜ್ಯಕ್ಕೆ ಭೇಟಿ ನೀಡಿ, ಜನರ ಅಹವಾಲು ನೇರವಾಗಿ ಆಲಿಸಿಲ್ಲ. ಹಾಗಾಗಿ, ಬೇರೆ ಸಮಿತಿ ಕಳುಹಿಸಬೇಕು. ಅಲ್ಲಿಯವರೆಗೂ ನಿರ್ಧಾರ ತೆಗೆದುಕೊಳ್ಳಲು ಕಾಲಾವಕಾಶ ನೀಡಬೇಕು ಎಂದು ನಿಯೋಗ ಕೇಂದ್ರವನ್ನು ಕೋರಲಿದೆ.