<p><strong>ಬೆಂಗಳೂರು:</strong> ‘ಕಾಂಗ್ರೆಸ್ನಲ್ಲಿ ದಲಿತ ನಾಯಕರನ್ನು ಬೆಳೆಯಲು ಬಿಡದೇ ಹಂತ– ಹಂತವಾಗಿ ತುಳಿದವರು ಸಿದ್ದರಾಮಯ್ಯ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಆರೋಪಿಸಿದ್ದಾರೆ.</p>.<p>‘ಆದರೆ ನೀವು ದಲಿತರ ಪರ ಮೊಸಳೆ ಕಣ್ಣೀರು ಸುರಿಸಿ, ಬಿಜೆಪಿ ಮೇಲೆ ಗೂಬೆ ಕೂರಿಸಿದರೆ ದಲಿತರ ಚಾಂಪಿಯನ್ ಆಗಿ ಬಿಡಬಹುದು ಎಂದು ಭಾವಿಸಿದ್ದೀರಿ. ದಲಿತರಿಗೆ ನಿಮ್ಮ ನಿಜ ಬಣ್ಣ ಗೊತ್ತಾಗಿದೆ. ಅಹಿಂದದಲ್ಲಿ ನಿಮಗೆ ಉಳಿದಿರುವುದು ‘ಅ’ ಮಾತ್ರ’ ಎಂದು ಅವರು ಕಿಡಿಕಾರಿದ್ದಾರೆ.</p>.<p>‘2013ರಲ್ಲಿ ಜಿ.ಪರಮೇಶ್ವರ ಮುಖ್ಯಮಂತ್ರಿ ಆಗದಂತೆ ತಡೆಯಲು ಅವರ ಬೆನ್ನಿಗೆ ಚೂರಿ ಹಾಕಿ ಚುನಾವಣೆಯಲ್ಲಿ ಸೋಲಿಸಿದ್ದು ಯಾರು? ಮಲ್ಲಿಕಾರ್ಜುನ ಖರ್ಗೆ ಅವರನ್ನು ದೆಹಲಿಗೆ ಕಳುಹಿಸಿ ಮೂಲೆ ಗುಂಪು ಮಾಡುವ ಕುತಂತ್ರ ಮಾಡಿದ್ದು ಯಾರು? ತೀರಾ ಇತ್ತೀಚೆಗೆ ಕೆ.ಎಚ್.ಮುನಿಯಪ್ಪ ಅವರ ಕುಟುಂಬಕ್ಕೆ ಕೋಲಾರ ಲೋಕಸಭಾ ಟಿಕೆಟ್ ತಪ್ಪಿಸಿದ್ದು ಯಾರ ಶಿಷ್ಯರು’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಕಾಂಗ್ರೆಸ್ನಲ್ಲಿ ದಲಿತ ನಾಯಕರನ್ನು ಬೆಳೆಯಲು ಬಿಡದೇ ಹಂತ– ಹಂತವಾಗಿ ತುಳಿದವರು ಸಿದ್ದರಾಮಯ್ಯ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಆರೋಪಿಸಿದ್ದಾರೆ.</p>.<p>‘ಆದರೆ ನೀವು ದಲಿತರ ಪರ ಮೊಸಳೆ ಕಣ್ಣೀರು ಸುರಿಸಿ, ಬಿಜೆಪಿ ಮೇಲೆ ಗೂಬೆ ಕೂರಿಸಿದರೆ ದಲಿತರ ಚಾಂಪಿಯನ್ ಆಗಿ ಬಿಡಬಹುದು ಎಂದು ಭಾವಿಸಿದ್ದೀರಿ. ದಲಿತರಿಗೆ ನಿಮ್ಮ ನಿಜ ಬಣ್ಣ ಗೊತ್ತಾಗಿದೆ. ಅಹಿಂದದಲ್ಲಿ ನಿಮಗೆ ಉಳಿದಿರುವುದು ‘ಅ’ ಮಾತ್ರ’ ಎಂದು ಅವರು ಕಿಡಿಕಾರಿದ್ದಾರೆ.</p>.<p>‘2013ರಲ್ಲಿ ಜಿ.ಪರಮೇಶ್ವರ ಮುಖ್ಯಮಂತ್ರಿ ಆಗದಂತೆ ತಡೆಯಲು ಅವರ ಬೆನ್ನಿಗೆ ಚೂರಿ ಹಾಕಿ ಚುನಾವಣೆಯಲ್ಲಿ ಸೋಲಿಸಿದ್ದು ಯಾರು? ಮಲ್ಲಿಕಾರ್ಜುನ ಖರ್ಗೆ ಅವರನ್ನು ದೆಹಲಿಗೆ ಕಳುಹಿಸಿ ಮೂಲೆ ಗುಂಪು ಮಾಡುವ ಕುತಂತ್ರ ಮಾಡಿದ್ದು ಯಾರು? ತೀರಾ ಇತ್ತೀಚೆಗೆ ಕೆ.ಎಚ್.ಮುನಿಯಪ್ಪ ಅವರ ಕುಟುಂಬಕ್ಕೆ ಕೋಲಾರ ಲೋಕಸಭಾ ಟಿಕೆಟ್ ತಪ್ಪಿಸಿದ್ದು ಯಾರ ಶಿಷ್ಯರು’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>