ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಗುರುವಾರ ಪತ್ರ ಬರೆದಿದ್ದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ, ಹಾಸನ ಜಿಲ್ಲೆಯ ಪ್ರಭಾವಿ ರಾಜಕಾರಣಿಯೊಬ್ಬ ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಅದನ್ನು ಮೊಬೈಲ್ನಲ್ಲಿ ಚಿತ್ರೀಕರಿಸಿಕೊಂಡು ಬ್ಲ್ಯಾಕ್ಮೇಲ್ ಮಾಡುತ್ತಿರುವ ಆರೋಪದ ಬಗ್ಗೆ ತನಿಖೆ ನಡೆಸಲು ಎಸ್ಐಟಿ ರಚಿಸುವಂತೆ ಶಿಫಾರಸು ಮಾಡಿದ್ದರು.