<p><strong>ಬೆಂಗಳೂರು:</strong> ಸಿನಿಮಾ ನಿರ್ಮಾಪಕ ಹಾಗೂ ಉದ್ಯಮಿ ಸೌಂದರ್ಯ ಜಗದೀಶ್ ಆತ್ಮಹತ್ಯೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ‘₹60 ಕೋಟಿ ವಂಚನೆಯಿಂದ ಪತಿ ನೊಂದಿದ್ದರು’ ಎಂದು ಆರೋಪಿಸಿ ಅವರ ಪತ್ನಿ ಶಶಿರೇಖಾ ಪೊಲೀಸರಿಗೆ ದೂರು ನೀಡಿದ್ದಾರೆ.</p>.<p>ಮಹಾಲಕ್ಷ್ಮಿ ಲೇಔಟ್ ಠಾಣೆ ವ್ಯಾಪ್ತಿಯಲ್ಲಿರುವ ಮನೆಯಲ್ಲಿ ಏಪ್ರಿಲ್ 14ರಂದು ಸೌಂದರ್ಯ ಜಗದೀಶ್ ಅವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಯುಡಿಆರ್ (ಅಸಹಜ ಸಾವು) ಪ್ರಕರಣ ದಾಖಲಾಗಿತ್ತು. ಪತ್ನಿ ಪ್ರತ್ಯೇಕ ದೂರು ನೀಡಿರುವುದರಿಂದ ಆತ್ಮಹತ್ಯೆ ಪ್ರಚೋದನೆ ಆಯಾಮದಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.</p>.<p>‘ಸೌಂದರ್ಯ ಜಗದೀಶ್ ಅವರ ಆತ್ಮಹತ್ಯೆಗೆ ಕಾರಣವೇನು ಎಂಬುದು ಇದುವರೆಗೂ ನಿಖರವಾಗಿ ಗೊತ್ತಾಗಿಲ್ಲ. ಇದರ ನಡುವೆಯೇ ಸೌಂದರ್ಯ ಜಗದೀಶ್ ಅವರ ಕೊಠಡಿಯಲ್ಲಿದ್ದ ಬಟ್ಟೆಯಲ್ಲಿ ಮೇ 18ರಂದು ಮರಣಪತ್ರವೊಂದು ಸಿಕ್ಕಿದೆ. ಅದೇ ಮರಣಪತ್ರ ಆಧರಿಸಿ ಪತ್ನಿ ದೂರು ನೀಡಿದ್ದಾರೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ಸೌಂದರ್ಯ ಜಗದೀಶ್ ಅವರು ‘ಸೌಂದರ್ಯ ಕನ್ಸ್ಟ್ರಕ್ಷನ್’ ಕಂಪನಿ ನಡೆಸುತ್ತಿದ್ದರು. ವಿ.ಎಸ್. ಸುರೇಶ್, ಎಸ್.ಪಿ. ಹೊಂಬಣ್ಣ ಹಾಗೂ ಸುಧೀಂದ್ರ ಅವರು ಕಂಪನಿಯ ಪಾಲುದಾರರಾಗಿದ್ದರು. ತಮ್ಮ ಕೆಲ ಆಸ್ತಿಯನ್ನು ಬ್ಯಾಂಕ್ನಲ್ಲಿ ಅಡವಿಟ್ಟಿದ್ದ ಸೌಂದರ್ಯ ಜಗದೀಶ್, ₹60 ಕೋಟಿ ಸಾಲ ಪಡೆದು ಕಂಪನಿಯಲ್ಲಿ ಹೂಡಿಕೆ ಮಾಡಿದ್ದರು. ಕಂಪನಿ ನಷ್ಟದಲ್ಲಿರುವುದಾಗಿ ಹೇಳಿದ್ದ ಸಹ ಪಾಲುದಾರರು, ₹60 ಕೋಟಿ ವಂಚಿಸಿದ್ದರು. ಜೊತೆಗೆ, ಸೌಂದರ್ಯ ಜಗದೀಶ್ ಅವರಿಂದ ಹಲವು ದಾಖಲೆಗಳಿಗೆ ಸಹಿ ಪಡೆದುಕೊಂಡಿದ್ದರು. ಇದನ್ನು ಪ್ರಶ್ನಿಸಿದ್ದಕ್ಕೆ ಸಹ ಪಾಲುದಾರರು, ಜೀವ ಬೆದರಿಕೆಯೊಡ್ಡಿದ್ದರು. ಇವರ ಕಿರುಕುಳದಿಂದಲೇ ಸೌಂದರ್ಯ ಜಗದೀಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂಬುದಾಗಿ ಪತ್ನಿ ದೂರಿನಲ್ಲಿ ತಿಳಿಸಿದ್ದಾರೆ’ ಎಂದು ಮೂಲಗಳು ವಿವರಿಸಿವೆ.</p>.<p>‘ಕಂಪನಿಯ ಸಹ ಪಾಲುದಾರರ ವಿರುದ್ಧ ದೂರು ಸ್ವೀಕರಿಸಲಾಗಿದೆ. ಹಣದ ಹೂಡಿಕೆ ಹಾಗೂ ಇತರೆ ಪುರಾವೆಗಳನ್ನು ಪರಿಶೀಲಿಸಿದ ನಂತರವೇ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸಿನಿಮಾ ನಿರ್ಮಾಪಕ ಹಾಗೂ ಉದ್ಯಮಿ ಸೌಂದರ್ಯ ಜಗದೀಶ್ ಆತ್ಮಹತ್ಯೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ‘₹60 ಕೋಟಿ ವಂಚನೆಯಿಂದ ಪತಿ ನೊಂದಿದ್ದರು’ ಎಂದು ಆರೋಪಿಸಿ ಅವರ ಪತ್ನಿ ಶಶಿರೇಖಾ ಪೊಲೀಸರಿಗೆ ದೂರು ನೀಡಿದ್ದಾರೆ.</p>.<p>ಮಹಾಲಕ್ಷ್ಮಿ ಲೇಔಟ್ ಠಾಣೆ ವ್ಯಾಪ್ತಿಯಲ್ಲಿರುವ ಮನೆಯಲ್ಲಿ ಏಪ್ರಿಲ್ 14ರಂದು ಸೌಂದರ್ಯ ಜಗದೀಶ್ ಅವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಯುಡಿಆರ್ (ಅಸಹಜ ಸಾವು) ಪ್ರಕರಣ ದಾಖಲಾಗಿತ್ತು. ಪತ್ನಿ ಪ್ರತ್ಯೇಕ ದೂರು ನೀಡಿರುವುದರಿಂದ ಆತ್ಮಹತ್ಯೆ ಪ್ರಚೋದನೆ ಆಯಾಮದಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.</p>.<p>‘ಸೌಂದರ್ಯ ಜಗದೀಶ್ ಅವರ ಆತ್ಮಹತ್ಯೆಗೆ ಕಾರಣವೇನು ಎಂಬುದು ಇದುವರೆಗೂ ನಿಖರವಾಗಿ ಗೊತ್ತಾಗಿಲ್ಲ. ಇದರ ನಡುವೆಯೇ ಸೌಂದರ್ಯ ಜಗದೀಶ್ ಅವರ ಕೊಠಡಿಯಲ್ಲಿದ್ದ ಬಟ್ಟೆಯಲ್ಲಿ ಮೇ 18ರಂದು ಮರಣಪತ್ರವೊಂದು ಸಿಕ್ಕಿದೆ. ಅದೇ ಮರಣಪತ್ರ ಆಧರಿಸಿ ಪತ್ನಿ ದೂರು ನೀಡಿದ್ದಾರೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ಸೌಂದರ್ಯ ಜಗದೀಶ್ ಅವರು ‘ಸೌಂದರ್ಯ ಕನ್ಸ್ಟ್ರಕ್ಷನ್’ ಕಂಪನಿ ನಡೆಸುತ್ತಿದ್ದರು. ವಿ.ಎಸ್. ಸುರೇಶ್, ಎಸ್.ಪಿ. ಹೊಂಬಣ್ಣ ಹಾಗೂ ಸುಧೀಂದ್ರ ಅವರು ಕಂಪನಿಯ ಪಾಲುದಾರರಾಗಿದ್ದರು. ತಮ್ಮ ಕೆಲ ಆಸ್ತಿಯನ್ನು ಬ್ಯಾಂಕ್ನಲ್ಲಿ ಅಡವಿಟ್ಟಿದ್ದ ಸೌಂದರ್ಯ ಜಗದೀಶ್, ₹60 ಕೋಟಿ ಸಾಲ ಪಡೆದು ಕಂಪನಿಯಲ್ಲಿ ಹೂಡಿಕೆ ಮಾಡಿದ್ದರು. ಕಂಪನಿ ನಷ್ಟದಲ್ಲಿರುವುದಾಗಿ ಹೇಳಿದ್ದ ಸಹ ಪಾಲುದಾರರು, ₹60 ಕೋಟಿ ವಂಚಿಸಿದ್ದರು. ಜೊತೆಗೆ, ಸೌಂದರ್ಯ ಜಗದೀಶ್ ಅವರಿಂದ ಹಲವು ದಾಖಲೆಗಳಿಗೆ ಸಹಿ ಪಡೆದುಕೊಂಡಿದ್ದರು. ಇದನ್ನು ಪ್ರಶ್ನಿಸಿದ್ದಕ್ಕೆ ಸಹ ಪಾಲುದಾರರು, ಜೀವ ಬೆದರಿಕೆಯೊಡ್ಡಿದ್ದರು. ಇವರ ಕಿರುಕುಳದಿಂದಲೇ ಸೌಂದರ್ಯ ಜಗದೀಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂಬುದಾಗಿ ಪತ್ನಿ ದೂರಿನಲ್ಲಿ ತಿಳಿಸಿದ್ದಾರೆ’ ಎಂದು ಮೂಲಗಳು ವಿವರಿಸಿವೆ.</p>.<p>‘ಕಂಪನಿಯ ಸಹ ಪಾಲುದಾರರ ವಿರುದ್ಧ ದೂರು ಸ್ವೀಕರಿಸಲಾಗಿದೆ. ಹಣದ ಹೂಡಿಕೆ ಹಾಗೂ ಇತರೆ ಪುರಾವೆಗಳನ್ನು ಪರಿಶೀಲಿಸಿದ ನಂತರವೇ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>