ಬುಧವಾರ, 2 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೊಲೆ ಆರೋಪಿ ದರ್ಶನ್‌ಗೆ ವಿಶೇಷ ಆತಿಥ್ಯ; ಪರಪ್ಪನ ಅಗ್ರಹಾರದ 7 ಸಿಬ್ಬಂದಿ ಅಮಾನತು

Published : 26 ಆಗಸ್ಟ್ 2024, 5:41 IST
Last Updated : 26 ಆಗಸ್ಟ್ 2024, 5:41 IST
ಫಾಲೋ ಮಾಡಿ
Comments

ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಶೇಷ ಆತಿಥ್ಯ ನೀಡಿ ಕರ್ತವ್ಯ ಲೋಪ ಎಸಗಿದ ಆರೋಪದ ಅಡಿ 7 ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.

ಶರಣಪ್ಪ, ಎಲ್.ಎಸ್.ತಿಪ್ಪೇಸ್ವಾಮಿ, ಬಸಪ್ಪ ತೇಲಿ, ಪ್ರಭು ಖಂಡೇವಾಲ, ವೆಂಕಪ್ಪ, ಸಂಪತ್ ಕುಮಾರ್, ಎಲ್.ಎಸ್. ತಿಪ್ಪೇಸ್ವಾಮಿ ಅಮಾನತುಗೊಂಡವರು.

ಗೃಹ ಸಚಿವ ಜಿ.ಪರಮೇಶ್ವರ ಮಾತನಾಡಿ, ಅಧಿಕಾರಿಗಳ ಪಾತ್ರ ಇದ್ದರೆ ಅವರನ್ನೂ ಅಮಾನತು ಮಾಡಿ ಕ್ರಮ ಕೈಗೊಳ್ಳಲಾಗುವುದು. ಪ್ರಕರಣದ ತನಿಖೆ ನಡೆಯುತ್ತಿದೆ. ಕೆಲವು ಸಿಬ್ಬಂದಿ ವರ್ಗಾವಣೆಗೂ ಆದೇಶಿಸಲಾಗಿದೆ ‌ಎಂದು ಹೇಳಿದರು.

ದರ್ಶನ್ ಬೆಡ್ ಮೇಲೆ ಕುಳಿತು ಮೊಬೈಲ್‌ ಫೋನ್‌ನಲ್ಲಿ ಮಾತನಾಡುತ್ತಿರುವ ಮತ್ತೊಂದು ವಿಡಿಯೊ ಸಾಮಾಜಿಕ‌ ಮಾಧ್ಯಮದಲ್ಲಿ ಹರಿದಾಡುತ್ತಿದೆ.

ಬೇರೆ ಜೈಲಿಗೆ ಸ್ಥಳಾಂತರ: ದರ್ಶನ್ ಅಥವಾ ವಿಲ್ಸನ್ ಗಾರ್ಡನ್ ನಾಗ ಅವರಲ್ಲಿ ಯಾರಾದರೂ ಒಬ್ಬರನ್ನು ಬೇರೆ ಜೈಲಿಗೆ ಸ್ಥಳಾಂತರ ಮಾಡಲು ಜೈಲಾಧಿಕಾರಿಗಳು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ‌.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT