ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಎತ್ತಿನಹೊಳೆ ಯೋಜನೆಯ ಮೊದಲನೇ ಹಂತವನ್ನು ಸಿದ್ದರಾಮಯ್ಯ ಅವರು ಶುಕ್ರವಾರ ಉದ್ಘಾಟಿಸಿದ್ದಾರೆ. ಆದರೆ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಒಂದು ದಿನ ಮೊದಲೇ ಎತ್ತಿನಹೊಳೆಗೆ ಹೋಗಿ, ಪೂಜೆಕಾರ್ಯ ನಡೆಸಿದ್ದಾರೆ. ಸಿದ್ದರಾಮಯ್ಯ ರಾಜಿನಾಮೆ ಕೊಡಲೇಬೇಕಾದ ಸ್ಥಿತಿ ಎದುರಾಗಿದೆ’ ಎಂದರು.