<p><strong>ಬೆಂಗಳೂರು</strong>: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಹಲವು ಪ್ರಶ್ನೆಗಳನ್ನು ಕೇಳಿರುವ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು, ಅವುಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿ ಉತ್ತರ ಇದೆಯೇ ಎಂದು ಕೇಳಿದರು.</p>.<p>ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬ್ಯಾಂಕ್ನ ಜಂಟಿ ಖಾತೆಯಿಂದ ಮಾರ್ಚ್ನಲ್ಲಿ ಹಣ ವರ್ಗಾವಣೆ ಆಗಿದೆ. ಮಾರ್ಚ್ 4ರಂದು ₹25 ಕೋಟಿ, ಮಾರ್ಚ್ 6ರಂದು ₹25 ಕೋಟಿ, ಮಾರ್ಚ್ 21ರಂದು ₹44 ಕೋಟಿ ವರ್ಗಾವಣೆ ಆಗಿದೆ. ರಾಜ್ಯ ಹುಜೂರ್ ಖಜಾನೆಯಿಂದ ₹43.33 ಕೋಟಿ ವರ್ಗಾವಣೆ ಆಗಿದೆ. ಮೇ 21 ರಂದು ₹50 ಕೋಟಿ ವರ್ಗಾವಣೆ ಆಗಿದೆ. ಈ ಹಣ ಯಾವ ಖಾತೆಗಳಿಗೆ ವರ್ಗಾವಣೆ ಆಗಿದೆ ಮಾಹಿತಿ ಕೊಡಿ ಎಂದು ಆಗ್ರಹಿಸಿದರು.</p>.<p>ಬ್ಯಾಂಕಿನ ಪ್ರತಿ ತಿಂಗಳ ವಿವರ ಹುಜೂರ್ ಖಜಾನೆಯ ವಿವರವನ್ನು ಪುನರ್ ಪರಿಶೀಲಿಸಲಿಲ್ಲವೇಕೆ? ಮಾರ್ಚ್ 31ರಂದು ಹಣಕಾಸು ವರ್ಷ ಮುಕ್ತಾಯ ಆದ ಬಳಿಕ ವ್ಯವಸ್ಥಾಪಕ ನಿರ್ದೇಶಕ ಮತ್ತು ಇಲಾಖೆಯ ಸರ್ಕಾರದ ಮಟ್ಟದ ಅಧಿಕಾರಿಗಳು ಪರಿಶೀಲನಾ ಸಭೆ ಮಾಡಲಿಲ್ಲವೇಕೆ ಎಂದು ಕೇಳಿದರು.</p>.<p>ಆತ್ಮಹತ್ಯೆ ಮಾಡಿಕೊಂಡ ಚಂದ್ರಶೇಖರನ್ ಅವರು ಮಂತ್ರಿಗಳ ಮೌಖಿಕ ಆದೇಶದನ್ವಯ ಹಣ ವರ್ಗಾವಣೆ ಮಾಡಿದ್ದಾಗಿ ಬರೆದಿದ್ದಾರೆ. ಹಾಗಿದ್ದರೆ ಎಫ್ಐಆರ್ನಲ್ಲಿ ಸಚಿವರ ಹೆಸರು ಏಕೆ ಸೇರಿಸಿಲ್ಲ ಎಂದು ಪ್ರಶ್ನಿಸಿದರು.</p>.<p>‘ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ ಬಳಿ ಇದ್ದ ಪೆನ್ಡ್ರೈವ್ ಮತ್ತು ಲ್ಯಾಪ್ಟಾಪ್ನಲ್ಲಿದ್ದ ಮಾಹಿತಿಯನ್ನು ಸಾರ್ವಜನಿಕರ ಮುಂದಿಡಬೇಕು. ಸತ್ಯವಂತರು ಎಂದು ಹೇಳಿಕೊಳ್ಳುವ ಇವರು ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ಮುಂದಾಗಬೇಕು. ರಾಜ್ಯ ತನಿಖಾ ಸಂಸ್ಥೆಗಳಿಂದ ನಿಷ್ಪಕ್ಷ ತನಿಖೆ ನಡೆಸಲು ಸಾಧ್ಯವಿಲ್ಲ’ ಎಂದು ತಿಳಿಸಿದರು.</p>.<p>ಬೆಂಗಳೂರು ಉತ್ತರ ಜಿಲ್ಲಾ ಅಧ್ಯಕ್ಷ ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ ಅವರು ಭಾಗವಹಿಸಿದ್ದರು.</p>.<div><blockquote>ಸಿದ್ದರಾಮಯ್ಯನವರೇ ನಿರಪರಾಧಿ ಕೆ.ಎಸ್.ಈಶ್ವರಪ್ಪನವರನ್ನು ಬಲಿ ಪಡೆದಿರಿ; ಆವತ್ತು ನೀವು ಪ್ರತಿಪಕ್ಷದಲ್ಲಿ ಇದ್ದಾಗ ಯಾವ ರೀತಿ ಮಾತಾಡಿದ್ದೀರಿ ಎಂಬುದನ್ನು ನೆನಪಿಸಿಕೊಳ್ಳಿ </blockquote><span class="attribution">ಗೋವಿಂದ ಕಾರಜೋಳ ಮಾಜಿ ಉಪಮುಖ್ಯಮಂತ್ರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಹಲವು ಪ್ರಶ್ನೆಗಳನ್ನು ಕೇಳಿರುವ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು, ಅವುಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿ ಉತ್ತರ ಇದೆಯೇ ಎಂದು ಕೇಳಿದರು.</p>.<p>ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬ್ಯಾಂಕ್ನ ಜಂಟಿ ಖಾತೆಯಿಂದ ಮಾರ್ಚ್ನಲ್ಲಿ ಹಣ ವರ್ಗಾವಣೆ ಆಗಿದೆ. ಮಾರ್ಚ್ 4ರಂದು ₹25 ಕೋಟಿ, ಮಾರ್ಚ್ 6ರಂದು ₹25 ಕೋಟಿ, ಮಾರ್ಚ್ 21ರಂದು ₹44 ಕೋಟಿ ವರ್ಗಾವಣೆ ಆಗಿದೆ. ರಾಜ್ಯ ಹುಜೂರ್ ಖಜಾನೆಯಿಂದ ₹43.33 ಕೋಟಿ ವರ್ಗಾವಣೆ ಆಗಿದೆ. ಮೇ 21 ರಂದು ₹50 ಕೋಟಿ ವರ್ಗಾವಣೆ ಆಗಿದೆ. ಈ ಹಣ ಯಾವ ಖಾತೆಗಳಿಗೆ ವರ್ಗಾವಣೆ ಆಗಿದೆ ಮಾಹಿತಿ ಕೊಡಿ ಎಂದು ಆಗ್ರಹಿಸಿದರು.</p>.<p>ಬ್ಯಾಂಕಿನ ಪ್ರತಿ ತಿಂಗಳ ವಿವರ ಹುಜೂರ್ ಖಜಾನೆಯ ವಿವರವನ್ನು ಪುನರ್ ಪರಿಶೀಲಿಸಲಿಲ್ಲವೇಕೆ? ಮಾರ್ಚ್ 31ರಂದು ಹಣಕಾಸು ವರ್ಷ ಮುಕ್ತಾಯ ಆದ ಬಳಿಕ ವ್ಯವಸ್ಥಾಪಕ ನಿರ್ದೇಶಕ ಮತ್ತು ಇಲಾಖೆಯ ಸರ್ಕಾರದ ಮಟ್ಟದ ಅಧಿಕಾರಿಗಳು ಪರಿಶೀಲನಾ ಸಭೆ ಮಾಡಲಿಲ್ಲವೇಕೆ ಎಂದು ಕೇಳಿದರು.</p>.<p>ಆತ್ಮಹತ್ಯೆ ಮಾಡಿಕೊಂಡ ಚಂದ್ರಶೇಖರನ್ ಅವರು ಮಂತ್ರಿಗಳ ಮೌಖಿಕ ಆದೇಶದನ್ವಯ ಹಣ ವರ್ಗಾವಣೆ ಮಾಡಿದ್ದಾಗಿ ಬರೆದಿದ್ದಾರೆ. ಹಾಗಿದ್ದರೆ ಎಫ್ಐಆರ್ನಲ್ಲಿ ಸಚಿವರ ಹೆಸರು ಏಕೆ ಸೇರಿಸಿಲ್ಲ ಎಂದು ಪ್ರಶ್ನಿಸಿದರು.</p>.<p>‘ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ ಬಳಿ ಇದ್ದ ಪೆನ್ಡ್ರೈವ್ ಮತ್ತು ಲ್ಯಾಪ್ಟಾಪ್ನಲ್ಲಿದ್ದ ಮಾಹಿತಿಯನ್ನು ಸಾರ್ವಜನಿಕರ ಮುಂದಿಡಬೇಕು. ಸತ್ಯವಂತರು ಎಂದು ಹೇಳಿಕೊಳ್ಳುವ ಇವರು ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ಮುಂದಾಗಬೇಕು. ರಾಜ್ಯ ತನಿಖಾ ಸಂಸ್ಥೆಗಳಿಂದ ನಿಷ್ಪಕ್ಷ ತನಿಖೆ ನಡೆಸಲು ಸಾಧ್ಯವಿಲ್ಲ’ ಎಂದು ತಿಳಿಸಿದರು.</p>.<p>ಬೆಂಗಳೂರು ಉತ್ತರ ಜಿಲ್ಲಾ ಅಧ್ಯಕ್ಷ ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ ಅವರು ಭಾಗವಹಿಸಿದ್ದರು.</p>.<div><blockquote>ಸಿದ್ದರಾಮಯ್ಯನವರೇ ನಿರಪರಾಧಿ ಕೆ.ಎಸ್.ಈಶ್ವರಪ್ಪನವರನ್ನು ಬಲಿ ಪಡೆದಿರಿ; ಆವತ್ತು ನೀವು ಪ್ರತಿಪಕ್ಷದಲ್ಲಿ ಇದ್ದಾಗ ಯಾವ ರೀತಿ ಮಾತಾಡಿದ್ದೀರಿ ಎಂಬುದನ್ನು ನೆನಪಿಸಿಕೊಳ್ಳಿ </blockquote><span class="attribution">ಗೋವಿಂದ ಕಾರಜೋಳ ಮಾಜಿ ಉಪಮುಖ್ಯಮಂತ್ರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>