<p><strong>ಬೆಂಗಳೂರು</strong>: ‘ವಾಲ್ಮೀಕಿ ಅಭಿವೃದ್ಧಿ ನಿಗಮ ಹಾಗೂ ‘ಮುಡಾ’ ಹಗರಣದ ವಿರುದ್ಧ ಸದನದ ಒಳಗೆ ಮಿತ್ರಪಕ್ಷ ಬಿಜೆಪಿ ಜೊತೆ ಸೇರಿ ಹೋರಾಟ ಮುಂದುವರಿಸುತ್ತೇವೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಹೇಳಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಗರಣಗಳನ್ನು ಸಮರ್ಥಿಸಿಕೊಳ್ಳಲು ಸರ್ಕಾರಕ್ಕೆ ಸಾಧ್ಯವಿಲ್ಲ. ಸಾಕ್ಷ್ಯ ಸಮೇತ ಸಿಕ್ಕಿಬಿದ್ದಿದ್ದಾರೆ. ಸದನದ ಒಳಗೆ ಹಾಗೂ ಹೊರಗೆ ಹೋರಾಟ ಮಾಡುವ ಜೊತೆಗೆ, ಕಾನೂನು ಹೋರಾಟಕ್ಕೂ ಜೆಡಿಎಸ್ ಕೈಜೋಡಿಸಲಿದೆ ಎಂದರು.</p>.<p>ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣ ಕುರಿತು ಎಸ್ಐಟಿ ತನಿಖೆ ನಡೆಯುತ್ತಿದೆ. ತನಿಖೆಗೆ ಪಕ್ಷ ಅಡ್ಡಿಪಡಿಸುವುದಿಲ್ಲ. ಅಶ್ಲೀಲ ದೃಶ್ಯಗಳಿರುವ ಪೆನ್ಡ್ರೈವ್ಗಳನ್ನು ಹಂಚಿದ್ದು ನವೀನ್ ಗೌಡ ಎನ್ನುವುದನ್ನು ಎಸ್ಐಟಿಯೇ ಹೇಳಿದೆ. ಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿರುವ ಕಾರಣ ಈ ಕುರಿತು ಹೆಚ್ಚು ಚರ್ಚೆ ನಡೆಸುವುದಿಲ್ಲ ಎಂದರು. </p>.<p>‘ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಸಿಗಲಿಲ್ಲ ಎಂದು ಜಿ.ಟಿ. ದೇವೇಗೌಡ ಅವರು ಮುನಿಸಿಕೊಂಡಿಲ್ಲ. ಅವರ ಜೊತೆ ಮಾತನಾಡಿರುವೆ. ಸಾಮಾಜಿಕ ನ್ಯಾಯ ಕೊಡಬೇಕು ಎಂದು ಪಕ್ಷದ ವರಿಷ್ಠರು ತಮ್ಮನ್ನು ನೇಮಿಸುವ ನಿರ್ಧಾರ ತೆಗೆದುಕೊಂಡಿದ್ದಾರೆ’ ಎಂದು ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ವಾಲ್ಮೀಕಿ ಅಭಿವೃದ್ಧಿ ನಿಗಮ ಹಾಗೂ ‘ಮುಡಾ’ ಹಗರಣದ ವಿರುದ್ಧ ಸದನದ ಒಳಗೆ ಮಿತ್ರಪಕ್ಷ ಬಿಜೆಪಿ ಜೊತೆ ಸೇರಿ ಹೋರಾಟ ಮುಂದುವರಿಸುತ್ತೇವೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಹೇಳಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಗರಣಗಳನ್ನು ಸಮರ್ಥಿಸಿಕೊಳ್ಳಲು ಸರ್ಕಾರಕ್ಕೆ ಸಾಧ್ಯವಿಲ್ಲ. ಸಾಕ್ಷ್ಯ ಸಮೇತ ಸಿಕ್ಕಿಬಿದ್ದಿದ್ದಾರೆ. ಸದನದ ಒಳಗೆ ಹಾಗೂ ಹೊರಗೆ ಹೋರಾಟ ಮಾಡುವ ಜೊತೆಗೆ, ಕಾನೂನು ಹೋರಾಟಕ್ಕೂ ಜೆಡಿಎಸ್ ಕೈಜೋಡಿಸಲಿದೆ ಎಂದರು.</p>.<p>ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣ ಕುರಿತು ಎಸ್ಐಟಿ ತನಿಖೆ ನಡೆಯುತ್ತಿದೆ. ತನಿಖೆಗೆ ಪಕ್ಷ ಅಡ್ಡಿಪಡಿಸುವುದಿಲ್ಲ. ಅಶ್ಲೀಲ ದೃಶ್ಯಗಳಿರುವ ಪೆನ್ಡ್ರೈವ್ಗಳನ್ನು ಹಂಚಿದ್ದು ನವೀನ್ ಗೌಡ ಎನ್ನುವುದನ್ನು ಎಸ್ಐಟಿಯೇ ಹೇಳಿದೆ. ಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿರುವ ಕಾರಣ ಈ ಕುರಿತು ಹೆಚ್ಚು ಚರ್ಚೆ ನಡೆಸುವುದಿಲ್ಲ ಎಂದರು. </p>.<p>‘ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಸಿಗಲಿಲ್ಲ ಎಂದು ಜಿ.ಟಿ. ದೇವೇಗೌಡ ಅವರು ಮುನಿಸಿಕೊಂಡಿಲ್ಲ. ಅವರ ಜೊತೆ ಮಾತನಾಡಿರುವೆ. ಸಾಮಾಜಿಕ ನ್ಯಾಯ ಕೊಡಬೇಕು ಎಂದು ಪಕ್ಷದ ವರಿಷ್ಠರು ತಮ್ಮನ್ನು ನೇಮಿಸುವ ನಿರ್ಧಾರ ತೆಗೆದುಕೊಂಡಿದ್ದಾರೆ’ ಎಂದು ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>