ಕೇರಳ, ತಮಿಳುನಾಡು, ತೆಲಂಗಾಣ, ಮಹಾರಾಷ್ಟ್ರ, ಆಂಧ್ರಪ್ರದೇಶ, ಗುಜರಾತ್, ಹರಿಯಾಣ ಮತ್ತು ಪಂಜಾಬ್ ಮುಖ್ಯಮಂತ್ರಿಗೆ ಸಿದ್ದರಾಮಯ್ಯ ಪತ್ರ ಬರೆದಿದ್ದು, ‘ಆರ್ಥಿಕತೆ ಮತ್ತು ಇತರ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಿರುವ ಕರ್ನಾಟಕದಂತಹ ಹಲವು ರಾಜ್ಯಗಳನ್ನು ಅವುಗಳ ಸಾಧನೆಯ ಕಾರಣಕ್ಕೇ ದಂಡಿಸಲಾಗುತ್ತಿದೆ. ಇದರ ವಿರುದ್ಧ ದನಿ ಎತ್ತಬೇಕಿದೆ’ ಎಂದಿದ್ದಾರೆ.