<p><strong>ನವದೆಹಲಿ:</strong> ತೆಲಂಗಾಣದ ಹಣಕಾಸು ಸಚಿವ ಟಿ. ಹರೀಶ್ ರಾವ್ ಅವರು ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಕಾರಣಕ್ಕೆ ಬಿಆರ್ಎಸ್ ನೇತೃತ್ವದ ಸರ್ಕಾರಕ್ಕೆ ‘ರೈತ ಬಂಧು ಯೋಜನೆ’ಯಡಿ ರೈತರಿಗೆ ಆರ್ಥಿಕ ನೆರವು ವಿತರಿಸಲು ನೀಡಿದ ಅನುಮತಿಯನ್ನು ಕೇಂದ್ರ ಚುನಾವಣಾ ಆಯೋಗ ಸೋಮವಾರ ಹಿಂಪಡೆದಿದೆ.</p>.<p>ತೆಲಂಗಾಣದಲ್ಲಿ ನವೆಂಬರ್ 30ರಂದು ಮತದಾನ ನಡೆಯಲಿದೆ. ‘ಫಲಾನುಭವಿಗಳಿಗೆ ಹಣದ ವಿತರಣೆ ಸೋಮವಾರದಿಂದ ನಡೆಯಲಿದೆ. ರೈತರು ಬೆಳಗಿನ ಉಪಾಹಾರ ಮತ್ತು ಚಹಾ ಸೇವಿಸುವ ಮೊದಲೇ ಅವರ ಖಾತೆಗೆ ಹಣ ಜಮೆಯಾಗಲಿದೆ’ ಎಂದು ಸಚಿವ ರಾವ್ ಹೇಳಿದ್ದರು. ಈ ಯೋಜನೆಯಡಿ ವಿತರಿಸುತ್ತಿರುವ ಹಣದ ಬಗ್ಗೆ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಯಾವುದೇ ಹೇಳಿಕೆ ನೀಡದಂತೆ ಬಿಆರ್ಎಸ್ ಪಕ್ಷದ ಮುಖಂಡರಿಗೆ ನಿರ್ಬಂಧ ಹೇರಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಪಕ್ಷವು ಚುನಾವಣಾ ಆಯೋಗಕ್ಕೆ ಮನವಿ ಮಾಡಿತ್ತು. </p>.<p>ಆಯೋಗದ ನಡೆಗೆ ಬಿಆರ್ಎಸ್ ಆಶ್ಚರ್ಯ ವ್ಯಕ್ತಪಡಿಸಿದ್ದು, ‘ಹಣ ವಿತರಣೆ ನಿಲ್ಲಿಸುವುದರಿಂದ ರೈತರಿಗೆ ಭರಿಸಲಾಗದ ನಷ್ಟ ಉಂಟಾಗಬಹುದು. ಹಾಗಾಗಿ, ಅನುಮತಿಯನ್ನು ಮರು ಸ್ಥಾಪಿಸಬೇಕು’ ಎಂದು ಆಗ್ರಹಿಸಿದೆ. </p>.<p>ಆಯೋಗಕ್ಕೆ ಪತ್ರ ಬರೆದಿರುವ ಪಕ್ಷದ ಸಂಸದ ಕೆ.ಕೇಶವ ರಾವ್, ‘ಹಣ ವಿತರಣೆಯ ಬಗ್ಗೆ ಹಣಕಾಸು ಸಚಿವರು ಯಾವುದೇ ಘೋಷಣೆ ಮಾಡಿಲ್ಲ. ಅವರು ಆಯೋಗಕ್ಕೆ ಕೃತಜ್ಞತೆಯನ್ನಷ್ಟೇ ಹೇಳಿದ್ದಾರೆ. ಇದು ಅಚಾತುರ್ಯದ ಹೇಳಿಕೆ ಹಾಗೂ ಕೃತಜ್ಞತೆಯ ಅಭಿವ್ಯಕ್ತಿಯಾಗಿದೆ’ ಎಂದು ಹೇಳಿದ್ದಾರೆ. </p>.<p>ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ‘ರೈತ ಬಂಧು ಯೋಜನೆಯಡಿ ಫಲಾನುಭವಿಗಳಿಗೆ ಹಣಕಾಸು ನೆರವು ಸಿಗದೆ ಇರಲು ಸಚಿವರ ಹೇಳಿಕೆಯೇ ಕಾರಣ. ಇದಕ್ಕೆ ಕಾಂಗ್ರೆಸ್ ಅನ್ನು ದೂಷಿಸುವುದರಲ್ಲಿ ಅರ್ಥವಿಲ್ಲ. ತಮ್ಮ ಮೂರ್ಖತನವನ್ನು ಒಪ್ಪಿಕೊಂಡ ನಂತರ, ಈ ಘೋರ ತಪ್ಪಿಗೆ ಅವರು ತಕ್ಷಣವೇ ತೆಲಂಗಾಣದ ರೈತರ ಕ್ಷಮೆಯಾಚಿಸಬೇಕು’ ಎಂದು ಆಗ್ರಹಿಸಿದ್ದಾರೆ. </p>.<p>ಕಳೆದ ಐದು ವರ್ಷಗಳಿಂದ ರೈತ ಬಂಧು ಯೋಜನೆ ಜಾರಿಯಲ್ಲಿದೆ. ಇದು ಚಾಲ್ತಿಯಲ್ಲಿರುವ ಯೋಜನೆಯಾಗಿರುವ ಕಾರಣಕ್ಕೆ ರೈತರಿಗೆ ಹಿಂಗಾರು ಕಂತನ್ನು ವಿತರಿಸಲು ಆಯೋಗವು ಸರ್ಕಾರಕ್ಕೆ ನವೆಂಬರ್ 24ರಂದು ಅನುಮತಿ ನೀಡಿತ್ತು. ಸರ್ಕಾರವು ಈ ಬಗ್ಗೆ ಯಾವುದೇ ಸಾರ್ವಜನಿಕ ಘೋಷಣೆಗಳನ್ನು ಮಾಡಬಾರದು ಎಂದೂ ಆಯೋಗವು ಹೇಳಿತ್ತು. ರೈತರಿಗೆ ನೆರವು ವಿತರಿಸಲು ಅನುಮತಿ ನೀಡುವಂತೆ ಕೋರಿ ಸರ್ಕಾರವು ಆಯೋಗಕ್ಕೆ ನವೆಂಬರ್ 18ರಂದು ಪತ್ರ ಬರೆದಿತ್ತು. </p>.<p>’ಮತದಾನಕ್ಕೆ ಕೆಲವೇ ದಿನಗಳು ಉಳಿದಿರುವಾಗ ಯೋಜನೆ ಬಗ್ಗೆ ಸಚಿವರು ಹೇಳಿಕೆ ನೀಡಿದ್ದಾರೆ. ಇದು ಮಾದರಿ ನೀತಿಸಂಹಿತೆ ಹಾಗೂ ನಿಗದಿಪಡಿಸಿದ ಷರತ್ತುಗಳ ಉಲ್ಲಂಘನೆ’ ಎಂದು ಆಯೋಗ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ತೆಲಂಗಾಣದ ಹಣಕಾಸು ಸಚಿವ ಟಿ. ಹರೀಶ್ ರಾವ್ ಅವರು ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಕಾರಣಕ್ಕೆ ಬಿಆರ್ಎಸ್ ನೇತೃತ್ವದ ಸರ್ಕಾರಕ್ಕೆ ‘ರೈತ ಬಂಧು ಯೋಜನೆ’ಯಡಿ ರೈತರಿಗೆ ಆರ್ಥಿಕ ನೆರವು ವಿತರಿಸಲು ನೀಡಿದ ಅನುಮತಿಯನ್ನು ಕೇಂದ್ರ ಚುನಾವಣಾ ಆಯೋಗ ಸೋಮವಾರ ಹಿಂಪಡೆದಿದೆ.</p>.<p>ತೆಲಂಗಾಣದಲ್ಲಿ ನವೆಂಬರ್ 30ರಂದು ಮತದಾನ ನಡೆಯಲಿದೆ. ‘ಫಲಾನುಭವಿಗಳಿಗೆ ಹಣದ ವಿತರಣೆ ಸೋಮವಾರದಿಂದ ನಡೆಯಲಿದೆ. ರೈತರು ಬೆಳಗಿನ ಉಪಾಹಾರ ಮತ್ತು ಚಹಾ ಸೇವಿಸುವ ಮೊದಲೇ ಅವರ ಖಾತೆಗೆ ಹಣ ಜಮೆಯಾಗಲಿದೆ’ ಎಂದು ಸಚಿವ ರಾವ್ ಹೇಳಿದ್ದರು. ಈ ಯೋಜನೆಯಡಿ ವಿತರಿಸುತ್ತಿರುವ ಹಣದ ಬಗ್ಗೆ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಯಾವುದೇ ಹೇಳಿಕೆ ನೀಡದಂತೆ ಬಿಆರ್ಎಸ್ ಪಕ್ಷದ ಮುಖಂಡರಿಗೆ ನಿರ್ಬಂಧ ಹೇರಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಪಕ್ಷವು ಚುನಾವಣಾ ಆಯೋಗಕ್ಕೆ ಮನವಿ ಮಾಡಿತ್ತು. </p>.<p>ಆಯೋಗದ ನಡೆಗೆ ಬಿಆರ್ಎಸ್ ಆಶ್ಚರ್ಯ ವ್ಯಕ್ತಪಡಿಸಿದ್ದು, ‘ಹಣ ವಿತರಣೆ ನಿಲ್ಲಿಸುವುದರಿಂದ ರೈತರಿಗೆ ಭರಿಸಲಾಗದ ನಷ್ಟ ಉಂಟಾಗಬಹುದು. ಹಾಗಾಗಿ, ಅನುಮತಿಯನ್ನು ಮರು ಸ್ಥಾಪಿಸಬೇಕು’ ಎಂದು ಆಗ್ರಹಿಸಿದೆ. </p>.<p>ಆಯೋಗಕ್ಕೆ ಪತ್ರ ಬರೆದಿರುವ ಪಕ್ಷದ ಸಂಸದ ಕೆ.ಕೇಶವ ರಾವ್, ‘ಹಣ ವಿತರಣೆಯ ಬಗ್ಗೆ ಹಣಕಾಸು ಸಚಿವರು ಯಾವುದೇ ಘೋಷಣೆ ಮಾಡಿಲ್ಲ. ಅವರು ಆಯೋಗಕ್ಕೆ ಕೃತಜ್ಞತೆಯನ್ನಷ್ಟೇ ಹೇಳಿದ್ದಾರೆ. ಇದು ಅಚಾತುರ್ಯದ ಹೇಳಿಕೆ ಹಾಗೂ ಕೃತಜ್ಞತೆಯ ಅಭಿವ್ಯಕ್ತಿಯಾಗಿದೆ’ ಎಂದು ಹೇಳಿದ್ದಾರೆ. </p>.<p>ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ‘ರೈತ ಬಂಧು ಯೋಜನೆಯಡಿ ಫಲಾನುಭವಿಗಳಿಗೆ ಹಣಕಾಸು ನೆರವು ಸಿಗದೆ ಇರಲು ಸಚಿವರ ಹೇಳಿಕೆಯೇ ಕಾರಣ. ಇದಕ್ಕೆ ಕಾಂಗ್ರೆಸ್ ಅನ್ನು ದೂಷಿಸುವುದರಲ್ಲಿ ಅರ್ಥವಿಲ್ಲ. ತಮ್ಮ ಮೂರ್ಖತನವನ್ನು ಒಪ್ಪಿಕೊಂಡ ನಂತರ, ಈ ಘೋರ ತಪ್ಪಿಗೆ ಅವರು ತಕ್ಷಣವೇ ತೆಲಂಗಾಣದ ರೈತರ ಕ್ಷಮೆಯಾಚಿಸಬೇಕು’ ಎಂದು ಆಗ್ರಹಿಸಿದ್ದಾರೆ. </p>.<p>ಕಳೆದ ಐದು ವರ್ಷಗಳಿಂದ ರೈತ ಬಂಧು ಯೋಜನೆ ಜಾರಿಯಲ್ಲಿದೆ. ಇದು ಚಾಲ್ತಿಯಲ್ಲಿರುವ ಯೋಜನೆಯಾಗಿರುವ ಕಾರಣಕ್ಕೆ ರೈತರಿಗೆ ಹಿಂಗಾರು ಕಂತನ್ನು ವಿತರಿಸಲು ಆಯೋಗವು ಸರ್ಕಾರಕ್ಕೆ ನವೆಂಬರ್ 24ರಂದು ಅನುಮತಿ ನೀಡಿತ್ತು. ಸರ್ಕಾರವು ಈ ಬಗ್ಗೆ ಯಾವುದೇ ಸಾರ್ವಜನಿಕ ಘೋಷಣೆಗಳನ್ನು ಮಾಡಬಾರದು ಎಂದೂ ಆಯೋಗವು ಹೇಳಿತ್ತು. ರೈತರಿಗೆ ನೆರವು ವಿತರಿಸಲು ಅನುಮತಿ ನೀಡುವಂತೆ ಕೋರಿ ಸರ್ಕಾರವು ಆಯೋಗಕ್ಕೆ ನವೆಂಬರ್ 18ರಂದು ಪತ್ರ ಬರೆದಿತ್ತು. </p>.<p>’ಮತದಾನಕ್ಕೆ ಕೆಲವೇ ದಿನಗಳು ಉಳಿದಿರುವಾಗ ಯೋಜನೆ ಬಗ್ಗೆ ಸಚಿವರು ಹೇಳಿಕೆ ನೀಡಿದ್ದಾರೆ. ಇದು ಮಾದರಿ ನೀತಿಸಂಹಿತೆ ಹಾಗೂ ನಿಗದಿಪಡಿಸಿದ ಷರತ್ತುಗಳ ಉಲ್ಲಂಘನೆ’ ಎಂದು ಆಯೋಗ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>